Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಜ್ ಯಾತ್ರೆಯ ಕನಸು ಕೈಬಿಟ್ಟು 28...

ಹಜ್ ಯಾತ್ರೆಯ ಕನಸು ಕೈಬಿಟ್ಟು 28 ಸೆಂಟ್ಸ್ ಜಮೀನನ್ನು ಸರಕಾರದ ಲೈಫ್ ಮಿಷನ್ ಯೋಜನೆಗೆ ನೀಡಿದ ಕೇರಳದ ದಂಪತಿ

ವಾರ್ತಾಭಾರತಿವಾರ್ತಾಭಾರತಿ30 May 2022 3:22 PM IST
share
ಹಜ್ ಯಾತ್ರೆಯ ಕನಸು ಕೈಬಿಟ್ಟು 28 ಸೆಂಟ್ಸ್ ಜಮೀನನ್ನು ಸರಕಾರದ ಲೈಫ್ ಮಿಷನ್ ಯೋಜನೆಗೆ ನೀಡಿದ ಕೇರಳದ ದಂಪತಿ

ಪಟ್ಟಣಂತಿಟ್ಟ: ತಮ್ಮ ಬಹು ವರ್ಷಗಳ ಕನಸಾಗಿದ್ದ ಹಜ್ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ಕೇರಳದ ಅರನ್ಮುಲ ನಿವಾಸಿಗಳಾದ ಜಾಸ್ಮಿನ್ ಮತ್ತು ಹನೀಫಾ ಅವರು ತಮ್ಮ ಜಮೀನನ್ನು ಮಾರಾಟ ಮಾಡುವ ಇಂಗಿತ ಹೊಂದಿದ್ದರು.

ಆದರೆ ಕೊನೆಯ ಕ್ಷಣದಲ್ಲಿ ಅವರು ತಮ್ಮ 28 ಸೆಂಟ್ಸ್ ವಿಸ್ತೀರ್ಣದ ಪೂರ್ವಜರ ಆಸ್ತಿಯನ್ನು ರಾಜ್ಯ ಸರಕಾರದ  ನಿರ್ವಸಿತರಿಗಾಗಿ ಮನೆ  ನಿರ್ಮಿಸುವ ಯೋಜನೆಯಾದ ಲೈಫ್ ಮಿಷನ್‍ಗೆ ದಾನ ಮಾಡಿದ್ದಾರೆ.

ದಂಪತಿಯ ಈ ನಿರ್ಧಾರದ ಹಿಂದೆ ಒಂದು ಕಾರಣವಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರ ನೆರೆಮನೆಯವರೊಬ್ಬರು ತಮ್ಮ ಮೃತ ಕುಟುಂಬ ಸದಸ್ಯರ ಅಂತ್ಯಸಂಸ್ಕಾರಕ್ಕೆ ಪರದಾಡುವಂತಾಗಿತ್ತು. ಅವರಿಗೆ ಸ್ವಂತ ಜಮೀನಿಲ್ಲದೇ ಇರುವುದೇ ಇದಕ್ಕೆ ಕಾರಣವಾಗಿತ್ತು,  "ನೆರೆಮನೆಯವರಿಗೆ ಅವರ ಸಮುದಾಯದ ಸದಸ್ಯರೊಬ್ಬರು ನಾಲ್ಕು ಸೆಂಟ್ಸ್ ಜಮೀನು ನೀಡಿದ ನಂತರ ಸಮಸ್ಯೆ ಇತ್ಯರ್ಥವಾಗಿತ್ತು. ಇದನ್ನು ನೋಡಿ ನಾವು ಹಜ್ ಯಾತ್ರೆಗೆ ತೆರಳುವ ಬದಲು ಅಗತ್ಯವಿದ್ದವರಿಗೆ ಜಮೀನು ಒದಗಿಸಲು ನಿರ್ಧರಿಸಿದೆವು" ಎಂದು ಹನೀಫಾ ಹೇಳುತ್ತಾರೆ.

ರವಿವಾರ ಕೇರಳ  ಆರೋಗ್ಯ ಸಚಿವೆ ವೀಣಾ ಜಾರ್ಜ್ 57 ವರ್ಷದ ಹನೀಫಾ ಅವರ ನಿವಾಸಕ್ಕೆ ತೆರಳಿ ಅವರ ಜಮೀನು ದಾಖಲೆಗಳನ್ನು ಲೈಫ್ ಮಿಷನ್ ಯೋಜನೆಗಾಗಿ ಪಡೆದುಕೊಂಡರು.

ಈ ಜಮೀನು 48 ವರ್ಷದ ಜಾಸ್ಮೀನ್ ಒಡೆತನದಲ್ಲಿದ್ದು ರಾಜ್ಯ ಸರಕಾರದ "ಮನಸ್ಸೋಡಿತ್ತಿರಿ ಮಣ್ಣ್" ಯೋಜನೆಗೆ ಮೀಸಲಿರಿಸಲಾಗುವುದು. ಈ ಯೋಜನೆಗಾಗಿ ಸರಕಾರಕ್ಕೆ ಇಲ್ಲಿಯವರೆಗೆ 13 ಕಡೆಗಳಲ್ಲಿ ಒಟ್ಟು 926.75 ಸೆಂಟ್ಸ್ ಜಮೀನು ದೊರಕಿದೆ. ಇತರ 30 ಕಡೆಗಳಲ್ಲಿ 830.8 ಸೆಂಟ್ಸ್ ಜಮೀನು ಒದಗಿಸುವ ಭರವಸೆ ದೊರಕಿದೆ. 1000 ಮನೆಗಳ ನಿರ್ಮಾಣಕ್ಕೆ ರೂ 25 ಕೋಟಿ ದೇಣಿಗೆ ದೊರಕಿದೆ ಎಂದು ರಾಜ್ಯದ ಸ್ಥಳೀಯಾಡಳಿತ ಸಚಿವ ಗೋವಿಂದನ್ ತಿಳಿಸಿದ್ದಾರೆ. ಈ ಯೋಜನೆಯಡಿ ಇಲ್ಲಿಯ ತನಕ ಸರಕಾರ 2,95,006 ಮನೆಗಳನ್ನು ಹಸ್ತಾಂತರಿಸಿದ್ದರೆ 34,374 ಮನೆಗಳು ನಿರ್ಮಾಣ ಹಂತದಲ್ಲಿವೆ. ಒಟ್ಟು 27 ವಸತಿ ಸಂಕೀರ್ಣಗಳೂ ತಲೆಯೆತ್ತುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X