Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ...

'ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಉಲ್ಲೇಖಿಸಿ': ಲಿಂಗಾಯತ ಸಂಘಟನೆಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ30 May 2022 10:51 PM IST
share
ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಉಲ್ಲೇಖಿಸಿ: ಲಿಂಗಾಯತ ಸಂಘಟನೆಗಳ ಮನವಿ

ಬೆಂಗಳೂರು, ಮೇ 30: ಅನೇಕ ವರ್ಷಗಳಿಂದ ರಾಜ್ಯದಲ್ಲಿ ಭುಗಿಲೆದ್ದಿದ್ದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗಿಗೆ ಲಿಂಗಾಯತ ಸಂಘಟನೆಗಳು ಇಂದು ಮರುಜೀವ ನೀಡಿವೆ. ಮುಂಬರುವ ಜನಗಣತಿಯಲ್ಲಿ ಲಿಂಗಾಯತರು ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಮತ್ತು ಜಾತಿಯ ಕಾಲಂನಲ್ಲಿ ತಮ್ಮ ಉಪಪಂಗಡಗಳ ಹೆಸರುಗಳನ್ನು ನೋಂದಾಯಿಸಬೇಕು ಎಂದು 5 ಲಿಂಗಾಯತ ಸಂಘಟನೆಗಳು ಹಾಗೂ ಮಠಾಧೀಶರು ಮನವಿ ಮಾಡಿದ್ದಾರೆ.

ಸೋಮವಾರ ಪ್ರೆಸ್‍ಕ್ಲಬ್‍ನಲ್ಲಿ ಬಸವಧರ್ಮ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಅವರು ಮಾತನಾಡಿ, ಸ್ವತಂತ್ರ ಧರ್ಮವಾಗಿದ್ದ ಲಿಂಗಾಯತ ಧರ್ಮ ಕಾಲಾಂತರದಲ್ಲಿ ವೀರಶೈವ ಎಂದು ಸೇರ್ಪಡೆಯಾದ್ದರಿಂದ ಹಿಂದೂ ಧರ್ಮದಲ್ಲಿ ಸೇರಿಸಲಾಗಿದೆ. ಹಾಗಾಗಿ ವೀರಶೈವ ಹೆಸರನ್ನು ಬಳಸದೇ ಲಿಂಗಾಯತ ಧರ್ಮವು ಜಾಗತಿಕವಾಗಿ ಸ್ವತಂತ್ರ ಅರ್ಥಪೂರ್ಣ ಧರ್ಮವಾಗಿ ಬೆಳೆಯಬೇಕು. ಇದು ನಮ್ಮೆಲ್ಲರ ಅಜೆಂಡಾ ಆಗಬೇಕು ಎಂದು ಕರೆ ನೀಡಿದರು. 

ಲಿಂಗಾಯತ ಮಠಾಧೀಶರ ಒಕ್ಕೂಟದ ತೋಂಟದ ಸಿದ್ಧರಾಮ ಶ್ರೀಗಳು ಮಾತನಾಡಿ, ಜೈನ, ಬೌದ್ಧ, ಸಿಖ್ ಧರ್ಮದಂತೆ ಲಿಂಗಾಯತ ಧರ್ಮವು ಪ್ರತ್ಯೇಕ ಧರ್ಮವಾಗಿದೆ. ನೂರಾರು ವರ್ಷಗಳಿಂದ ವೀರಶೈವ ಹೆಸರಿನಲ್ಲಿ ಲಿಂಗಾಯತ ಧರ್ಮದಲ್ಲಿ ಗೊಂದಲಗಳನ್ನು ಸೃಷ್ಟಿಸಿದ್ದಾರೆ. ಆದರೆ ವಚನಗಳ ಅಧ್ಯಯನವಾದ ಬಳಿಕ ಲಿಂಗಾಯತ ಧರ್ಮ ಹೊಸಧರ್ಮ ಎಂದು ಸ್ಪಷ್ಟವಾಗಿದೆ. ಲಿಂಗಾಯತ ಅವೈದಿಕ ಧರ್ಮ ಆಗಿದೆ. ಆದರೆ, ವೀರಶೈವ ವೈದಿಕ ಧರ್ಮ ಆಗಿದೆ. ಹಾಗಾಗಿ ಸ್ವತಂತ್ರಧರ್ಮ ಮಾಡಿಲ್ಲ ಎಂದರು.  

ಜಾಗತಿಕ ಲಿಂಗಾಯತ ಮಹಾಸಭಾದ ಡಾ. ಎಸ್.ಎಂ. ಜಾಮದಾರ್, 2018ರಲ್ಲಿ ವೀರಶೈವ ಮಹಾಸಭೆ ತೆಗೆದುಕೊಂಡ ಅನೇಕ ಕೆಟ್ಟ ತೀರ್ಮಾನಗಳಿಂದ ಲಿಂಗಾಯತ ಮತ್ತು ವೀರಶೈವ ಲಿಂಗಾಯತರ ನಡುವೆ ಗೊಂದಲಗಳು ಸೃಷ್ಟಿಯಾಗಿವೆ. ಲಿಂಗಾಯತರಲ್ಲಿ ವೀರಶೈವರು ಒಂದು ಭಾಗವಾಗಿದ್ದಾರೆ. ಆದರೆ ಅಖಿಲ ಭಾರತ ವೀರಶೈವ ಮಹಾಸಭಾ, ಲಿಂಗಾಯತರು ಹಿಂದೂಗಳು ಎಂದು ಘೋಷಿಸಿತು. ನಂತರ ಲಿಂಗಾಯತ ವೀರಶೈವರನ್ನು ಸ್ವತಂತ್ರ ಧರ್ಮ ಎಂದು ಸಾರಿತು. 2001, 2011 ಮತ್ತು 2013ರಲ್ಲಿ ಕೇಂದ್ರ ಸರಕಾರವನ್ನು ಸ್ವತಂತ್ರ ಧರ್ಮಕ್ಕೆ ಒತ್ತಾಯಿಸಿತು. ಆದರೆ ವೀರಶೈವ ಮಹಾಸಭೆಯ ವೀರಶೈವ ಗುರುಗಳು ವೀರಶೈವ ಮಹಾಸಭಾದ ನಿರ್ಣಯವನ್ನು ತಿರಸ್ಕರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೀರಶೈವ ಮಹಾಸಭಾ ದ್ವಂದ್ವ ನೀತಿಯಿಂದ 2018ರಲ್ಲಿ ಕರ್ನಾಟಕ ಸರಕಾರ ಲಿಂಗಾಯತರನ್ನು ಸ್ವತಂತ್ರ ಮತ್ತು ಅಲ್ಪಸಂಖ್ಯಾತ ಧರ್ಮೀಯರು ಎಂದು ಘೋಷಿಸಲು ಬಲವಾಗಿ ವಿರೋಧಿಸಿತು. ಇದರಿಂದಾಗಿ ಅಲ್ಪಸಂಖ್ಯಾತ ಕೋಟದಲ್ಲಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ದೊರೆಯಬಹುದಾದ 5,000 ಪದವಿ ಮತ್ತು ಸುಮಾರು ಐನೂರು ಸ್ನಾತಕೋತ್ತರ ಪದವಿ ಸೀಟುಗಳಿಂದ ಲಿಂಗಾಯತ ವಿದ್ಯಾರ್ಥಿಗಳು ವಂಚಿತರಾದರು ಎಂದು ಅವರು ಆರೋಪಿಸಿದರು. 

ಗೋಷ್ಠಿಯಲ್ಲಿ ಲಿಂಗಾಯತ ಮಠಾಧೀಶರ ಒಕ್ಕೂಟದ ಬಾಳಕಿ ಬಸವಲಿಂಗ, ಲಿಂಗಾಯತ ಧರ್ಮ ಮಹಾಸಭೆ ಗಂಗಾ ಮಾತಾಜಿ, ಜಾಗತಿಕ ಲಿಂಗಾಯತ ಮಹಾಸಭಾದ ಎಲ್ಲ ಜಿಲ್ಲಾಧ್ಯಕ್ಷರು, ಬಸವ ಸಮಿತಿಯ ಅರವಿಂದ ಜತ್ತಿ, ಮತ್ತು ಗಿರೀಶ್ ಉಪಸ್ಥಿತರಿದ್ದರು. 

ಧರ್ಮ ಒಡೆದವರು ಯಾರು?

ವೀರಶೈವ ಮಹಾಸಭಾ ಎಂದು ಇದ್ದ ಹೆಸರನ್ನು ಈಗ ವೀರಶೈವ ಲಿಂಗಾಯತ ಮಹಾಸಭಾ ಎಂದು ಬದಲಿಸಿಕೊಂಡಿದೆ. ಹಾಗಾದರೆ ಧರ್ಮವನ್ನು ಯಾರು ಒಡೆದವರು? ಇದರ ಉದ್ದೇಶ ಮುಂಬರುವ ಜನಗಣತಿಯಲ್ಲಿ ಲಿಂಗಾಯತರನ್ನು ವೀರಶೈವ ಲಿಂಗಾಯತ ಎಂದು ಬರೆಯಿಸಿ ಶಾಶ್ವತವಾಗಿ ಲಿಂಗಾಯತ ಸಮಾಜದ ಅಸ್ತಿತ್ವ, ಅಸ್ಮಿತೆ ಮುತ್ತು ಅಲ್ಪಸಂಖ್ಯಾತ ಧರ್ಮದ ಹೋರಾಟವನ್ನು ದಾರಿತಪ್ಪಿಸುವುದು ಆಗಿದೆ. ಈ ಹುನ್ನಾರದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಿದೆ.

-ಡಾ. ಎಸ್.ಎಂ. ಜಾಮದಾರ್, ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X