Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ: ನೀರಿನ ದರ ಪರಿಷ್ಕರಣೆ; ತಿಂಗಳೊಳಗೆ...

ಮನಪಾ: ನೀರಿನ ದರ ಪರಿಷ್ಕರಣೆ; ತಿಂಗಳೊಳಗೆ ಅನುಷ್ಠಾನಕ್ಕೆ ಕ್ರಮ: ಮೇಯರ್ ಭರವಸೆ

ನೀರಿನ ಗರಿಷ್ಠ ದರ ೨೦ ಸಾವಿರ ಲೀಟರ್‌ಗೆ ಏರಿಕೆಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ31 May 2022 7:15 PM IST
share
ಮನಪಾ: ನೀರಿನ ದರ ಪರಿಷ್ಕರಣೆ; ತಿಂಗಳೊಳಗೆ ಅನುಷ್ಠಾನಕ್ಕೆ ಕ್ರಮ: ಮೇಯರ್ ಭರವಸೆ

ಮಂಗಳೂರು : ಪಾಲಿಕೆ ವ್ಯಾಪ್ತಿಯಲ್ಲಿ ಗೃಹ ಬಳಕೆ ಕುಡಿಯುವ ನೀರಿನ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದ್ದು, ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿ ತಿಂಗಳೊಳಗೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

ಮಂಗಳವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಗೃಹ ಬಳಕೆಯ ಕುಡಿಯುವ ನೀರಿನ ಗರಿಷ್ಟ ದರವನ್ನು ೨೦ ಸಾವಿರ ಲೀಟರ್‌ಗೆ ಏರಿಕೆ ಮಾಡುವುದು ಹಾಗೂ ಕಿ.ಲೀ.ಗೆ ೬ರೂ.ಗಳಿದ್ದ ಬಳಕೆಯ ದರವನ್ನು ೫ ರೂ.ಗೆ ಇಳಿಕೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಹೊಸ ದರ ಪರಿಷ್ಕರಣೆಯಂತೆ. ೨೦ ಸಾವಿರ ಲೀ. ನೀರು ಬಳಕೆ ಮಾಡಿದರೆ ಈ ಹಿಂದೆ ೧೪೦ ರೂ. ಶುಲ್ಕವಿದ್ದು, ಅದು  ೧೦೦ರೂ. ಆಗಲಿದೆ. ಪ್ರತಿ ೨೫ ಸಾವಿರ ಲೀ.ಗೆ ಹಾಲಿ ೧೮೫ ರೂ. ಶುಲ್ಕವಾಗುತ್ತಿದ್ದರೆ ಪರಿಷ್ಕರಣಾ ದರ ಅನುಷ್ಠಾನವಾದಲ್ಲಿ ಅದು  ೧೫೫ ರೂ. ಆಗಲಿದೆ ಎಂದರು.

ಈ ನಿರ್ಧಾರ ಪ್ರಕಟಿಸುವ ಮೊದಲು ಸದಸ್ಯ ಅಬ್ದುಲ್ ರವೂಫ್ ಅವರು ನೀರಿನ ದರ ಪರಿಷ್ಕರಣೆ ಕುರಿತಂತೆ ವಿಷಯ ಪ್ರಸ್ತಾಪಿಸಿದರು. ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ ಸುದೀರ್ಘ ಸಮಯದಿಂದ ತಿಳಿಸಿದರೂ ಕೂಡ ಮಾತು ಈಡೇರಿಲ್ಲ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಗರಿಷ್ಠ ೨೪ ಸಾವಿರ ಲೀ. ನೀರು ಇರುವುದನ್ನು ಈಗ ೮ ಸಾವಿರ ಲೀ.ಗೆ ಇಳಿಕೆ ಮಾಡಲಾಗಿದೆ ಎಂದು ಆಕ್ಷೇಪಿಸಿದರೆ, ಸದಸ್ಯ  ಪ್ರವೀಣ್‌ಚಂದ್ರ ಆಳ್ವ ಮಾತನಾಡಿ, ನೀರಿನ ದರ ಪರಿಷ್ಕರಣೆ ಮಾಡುವ ಬಗ್ಗೆ ಪಾಲಿಕೆಯು ಸರಕಾರಕ್ಕೆ ಪತ್ರ ಬರೆದಿದೆ ಎಂದು ಹೇಳಿ ಎರಡು ವರ್ಷಗಳಾದರೂ ಯಾವುದೇ ಕ್ರಮ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ ಮಾತನಾಡಿ, ನಗರದಲ್ಲಿ ಗೈಲ್ ಗ್ಯಾಸ್ ಯೋಜನೆಗಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆಯುತ್ತಿದ್ದಾರೆ. ಆದರೆ ಅದೇ ಸ್ಥಳವನ್ನು ಮುಚ್ಚದ ಕಾರಣ ಸಮಸ್ಯೆಯಾಗುತ್ತಿದೆ.  ಜತೆಗೆ ಇ-ಖಾತಾ ಪಡೆಯಲು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.

ಕದ್ರಿ ಮತ್ತು ಸುರತ್ಕಲ್ ವಲಯ ಕಚೇರಿಗಳಲ್ಲಿ ಸಾರ್ವಜನಿಕರ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಮಾಜಿ ಮೇಯರ್ ಭಾಸ್ಕರ್ ಕೆ. ಪ್ರಸ್ತಾಪಿಸಿದರು.

ಸದಸ್ಯ ರಾಧಾಕೃಷ್ಣ ಅವರು ಮಾತನಾಡಿ, ಕದ್ರಿ ವಲಯ ಸಹಿತ ಪಾಲಿಕೆ ಭಾಗದಲ್ಲಿ ಸಾಮಾನ್ಯ ಜನರು ಇ ಖಾತಾ ಪಡೆಯಲು ಪರದಾಡುತ್ತಿದ್ದಾರೆ. ಕೆಲವರಿಗೆ ಮಾತ್ರ ಖಾತಾ ತತ್‌ಕ್ಷಣ ನೀಡಲಾಗುತ್ತಿದೆ ಎಂದು ದೂರಿದರು.

ಆಯುಕ್ತರಾದ ಅಕ್ಷಯ್ ಶ್ರೀಧರ್ ಮಾತನಾಡಿ, ಇ ಖಾತಾ ನೀಡುವಲ್ಲಿ ಯಾವುದೇ ಲೋಪ ಆಗಬಾರದು  ಹಾಗೂ ಇ ಖಾತೆಗೆ ಒಟಿಪಿ ಬದಲು ಬಯೋಮೆಟ್ರಿಕ್ ವ್ಯವಸ್ಥೆ ಅನುಷ್ಠಾನಿಸಲಾಗುವುದು ಎಂದು ಹೇಳಿದರು.

ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಮಾತನಾಡುತ್ತಾ ಸ್ಮಾರ್ಟ್‌ಸಿಟಿಯ ಹೆಸರಿನಲ್ಲಿ ಹ್ಯಾಮಿಲ್ಟನ್ ಸರ್ಕಲ್ ಕಡೆಗೆ ಈಗ ಹೋಗಲು ಆಗುತ್ತಿಲ್ಲ. ವಾಹನ ಸಂಚರಿಸುವ ರಸ್ತೆಯಲ್ಲಿ ಕಲ್ಲುಗಳನ್ನಿಟ್ಟು ಸಂಚಾರ ದಟ್ಟಣೆಗೆ ಕಾರಣವಾಗಿದೆ. ಅವೈಜ್ಞಾನಿಕ ಯೋಜನೆ ಜಾರಿಗೆ ಮುಂದಾಗಿ ಜನರಿಗೆ ಸಮಸ್ಯೆ ಉಂಟುಮಾಡಲಾಗುತ್ತಿದೆ ಎಂದರು.

ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಮಾತನಾಡಿ, ಸ್ಥಳೀಯ ಕಾರ್ಪೊರೇಟರ್ ಗಮನಕ್ಕೆ ತಾರದೆ ಕೆಲಸ ನಡೆಸಲಾಗುತ್ತಿದ್ದು,  ಸ್ಮಾರ್ಟ್‌ಸಿಟಿ-ಪಾಲಿಕೆಗೆ ಹೊಂದಾಣಿಕೆ ಇಲ್ಲದೆ ಗೊಂದಲ ಉಂಟಾಗಿದೆ ಎಂದರು.
ಈ ಬಗ್ಗೆ ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಮೇಯರ್ ಹಾಗೂ ಆಯುಕ್ತರು ಭರವಸೆ ನೀಡಿದರು.

ಎ.ಸಿ. ವಿನಯ್‌ರಾಜ್ ಮಾತನಾಡಿ, ನಿಯಮಾವಳಿ ಪ್ರಕಾರ ಕಳೆದ ವರ್ಷ ಮಾ.೨ರಿಂದ ಈ ವರ್ಷದ ಮಾ.೧ರವರೆಗೆ ಮಾತ್ರ ಮೇಯರ್ ಅಧಿಕಾರಾವಧಿ ಇತ್ತು. ಆದರೆ, ಕೆಲವೊಂದು ಕಾರಣದಿಂದ ಮೇಯರ್ ಅವರು ಮುಂದುವರಿದಿದ್ದಾರೆ. ಹಾಗಾಗಿ ಈ ಸಭೆ ನಡೆಸುವ ಅಧಿಕಾರ ಹಾಗೂ ಕೈಗೊಳ್ಳಲಾಗುವ ನಿರ್ಧಾರಗಲಿಗೆ ಮಾನ್ಯತೆ ಇದೆಯೇ ಎಂದು ಪ್ರಶ್ನಿಸಿದರು.

ಆಯುಕ್ತ ಅಕ್ಷಯ್ ಶ್ರೀಧರ್ ಪ್ರತಿಕ್ರಿಯಿಸಿ,  ಕಾನೂನು ಸಲಹೆಯನ್ನು ಸರಕಾರದಿಂದ ನಿರೀಕ್ಷಿಸಿ ಅದರಂತೆ ಇದೀಗ ಸಭೆ ನಡೆಸಲಾಗಿದೆ. ಮೈಸೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳಲ್ಲಿಯೂ ಎಪ್ರಿಲ್ ತಿಂಗಳಲ್ಲಿ ಸಾಮಾನ್ಯ ಸಭೆ ನಡೆದಿದೆ ಎಂದರು.

ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ನ್ಯಾಯಾಲಯದಲ್ಲಿ ಮೀಸಲಾತಿ ವಿಚಾರವಿರುವ ಕಾರಣದಿಂದ ಹೊಸ ಮೇಯರ್ ಆಯ್ಕೆ ನಡೆಯಲಿಲ್ಲ. ಆದರೆ ನಿಯಮಾವಳಿ ಪ್ರಕಾರ ಮೇಯರ್ ಅವರೇ ಅಧಿಕಾರ ನಡೆಸಲು ಅವಕಾಶವಿದೆ. ಇದರಂತೆ ಆಡಳಿತಕ್ಕೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇನೆ. ಆಡಳಿತ ಮಂಜೂರಾತಿಯನ್ನು ನಿಯಮಾವಳಿಯಂತೆ ನಡೆಸಲಾಗಿದೆ. ಕಾನೂನಿನ ಸಲಹೆ ಪಡೆದು ಸಾಮಾನ್ಯ ಸಭೆ ಕರೆಯಲಾಗಿದೆ ಎಂದರು.

ಉಪಮೇಯರ್ ಸುಮಂಗಳಾ ರಾವ್, ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.

ವಾರ್ಡ್‌ನ ಪಾಲಿಕೆ ಸದಸ್ಯರು ಅಧಿಕಾರಿಗಳ ವಿಶೇಷ ಸಭೆ
ನಗರದ ವಿವಿಧ ವಾರ್ಡ್‌ಗಳಲ್ಲಿ ಹಲವು ಸಮಸ್ಯೆಗಳಿದ್ದು, ಸಮನ್ವಯತೆ ಇಲ್ಲದೆ ಕಾಮಗಾರಿಗಳಿಗೆ ತೊಂದರೆ ಯಾಗುತ್ತಿದೆ. ಪ್ರತೀ ವಾರ ವಲಯವಾರು ತಲಾ ೧೫ ವಾರ್ಡ್‌ಗಳ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ವಿಶೇಷ ಸಭೆ ನಡೆಸಲಾಗುವುದು. ಈ ವಾರದಿಂದಲೇ ಈ ಕ್ರಮವನ್ನು ಜಾರಿಗೊಳಿಸಲಾಗುವುದು. ೧ ತಿಂಗಳಲ್ಲಿ ೬೦ ವಾರ್ಡ್‌ಗಳ ಸಭೆಯನ್ನು ಪ್ರತ್ಯೇಕವಾಗಿ ಈ ಮುಖೇನ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X