Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಔರಂಗಜೇಬನಿಗೂ ಈಗಿರುವ ಮುಸ್ಲಿಮರಿಗೆ...

ಔರಂಗಜೇಬನಿಗೂ ಈಗಿರುವ ಮುಸ್ಲಿಮರಿಗೆ ಯಾವುದೇ ಸಂಬಂಧ ಇಲ್ಲ: ಮಾಜಿ ಸಚಿವ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ31 May 2022 11:12 PM IST
share
ಔರಂಗಜೇಬನಿಗೂ ಈಗಿರುವ ಮುಸ್ಲಿಮರಿಗೆ ಯಾವುದೇ ಸಂಬಂಧ ಇಲ್ಲ: ಮಾಜಿ ಸಚಿವ ಈಶ್ವರಪ್ಪ

ಶಿವಮೊಗ್ಗ, ಮೇ.31: ಮಸೀದಿಯ ಒಂದು ಹಿಡಿ ಮಣ್ಣು ತೆಗೆಯಲು ಬಿಡುವುದಿಲ್ಲ ಎನ್ನುವುದು ದೇಶದ್ರೋಹ ಹೇಳಿಕೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು ಮಸೀದಿ ದೇಗುಲ-ವಿವಾದದ ಕುರಿತು ಮಾತನಾಡಿ, ಅಲ್ಲಿ ಮೇಲ್ನೋಟಕ್ಕೆ ದೇವಸ್ಥಾನ ಇರುವುದು ಕಾಣುತ್ತಿದೆ. ದೇವಸ್ಥಾನ ಧ್ವಂಸ ಮಾಡಿ ಮಸೀದಿ ಕಟ್ಟಿರುವ ಜಾಗ. ಅಲ್ಲಿ ಮತ್ತೆ ದೇವಸ್ಥಾನ ಕಟ್ಟಲು ಮುಸ್ಲಿಮರು ಬೆಂಬಲ ನೀಡಬೇಕು. ಹಿಂದೂ-ಮುಸ್ಲಿಮರು ದೂರ ಇರಬೇಕು ಎನ್ನುವುದೇ ಡಿಕೆಶಿ ಮತ್ತು ಸಿದ್ದು ಅಪೇಕ್ಷೆಯಾಗಿದೆ. ಕೋಮು ಸೌಹಾರ್ದತೆಯಿಂದ ಇರಲು ಕಾಂಗ್ರೆಸ್ ಪಕ್ಷ ಬಿಡುತ್ತಿಲ್ಲ. ಇದನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು. ಮೋದಿ ಬಂದ ಬಳಿಕ 75 ವರ್ಷದ ನಂತರ ಈಗ ದೇಶದಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರ ಆಗುತ್ತಿದೆ. ಮತ್ತೆ ಎಲ್ಲ ದೇವಸ್ಥಾನ ಹಿಂದೂಗಳ ಕೈಗೆ ಬರುವ ವಿಶ್ವಾಸ ಇದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಿಂದ ಹಿಂದುತ್ವ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಡಿಕೆಶಿ ಮತ್ತು ಸಿದ್ದರಾಮಯ್ಯ ವಿರುದ್ಧ  ವಾಗ್ದಾಳಿ ನಡೆಸಿದ ಅವರು, ಮೊಘಲ್‌ರಿಂದ ಹಿಂದೂ ದೇಗುಲಗಳು ಧ್ವಂಸವಾಗಿವೆ. ಪುರಿ ಜಗನ್ನಾಥ್, ಅಯೋಧ್ಯೆ ರಾಮ ಮಂದಿರ, ಕಾಶಿ ವಿಶ್ವನಾಥ, ಮಥುರದ ಶ್ರೀಕೃಷ್ಣ ದೇವಸ್ಥಾನ ಸೇರಿದಂತೆ ದೇಶದಲ್ಲಿ 36 ಸಾವಿರ ದೇಗುಲ ಒಡೆದು ಮಸೀದಿ ನಿರ್ಮಾಣ ಮಾಡಲಾಗಿದೆ. ದೇವಸ್ಥಾನ, ಧಾರ್ಮಿಕ ಆಚರಣೆಯಿಂದ ಹಿಂದೂಗಳಲ್ಲಿ ಒಗ್ಗಟ್ಟು ಇರಲಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿನ ದೇಗುಲ ಧ್ವಂಸ ಮಾಡಲಾಗಿದೆ ಎಂದರು.

ಈಗಿನ ಮುಸ್ಲಿಮರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಔರಂಗಜೇಬನಿಗೂ ಈಗಿರುವ ಮುಸ್ಲಿಮರಿಗೆ ಯಾವುದೇ ಸಂಬಂಧ ಇಲ್ಲ. ದೇಶದ ಅನ್ನ, ನೀರು, ಗಾಳಿ ಸೇವಿಸಿದ ಮುಸ್ಲಿಮರಲ್ಲಿ ಅನೇಕರು ಭಾರತಾಂಬೆ ಮಕ್ಕಳು ಅಂತ ಹೇಳುವರು ಇದ್ದಾರೆ. ಇವರು ಈ ದಾಳಿಕೋರರ ಸಂಚಿಗೆ ಬಲಿಯಾಗಬಾರದು. ಒಂದೊಂದು ಮಸೀದಿ ತೆಗೆದಾಗ ಹಿಂದೂ ದೇಗುಲ ಪತ್ತೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಮುಸ್ಲಿಮರು ಈ ವಿಚಾರಕ್ಕೆ ತಲೆಕೆಡಿಸಿಕೊಳ್ಳಬಾರದು. ಹಿಂದೂ-ಮುಸ್ಲಿಂ ಒಂದೇ ಎನ್ನುವ ರೀತಿಯಲ್ಲಿ ಒಟ್ಟಾಗಿ ಬಾಳಬೇಕು. ಹೊಸದಾಗಿ ಕಟ್ಟಿರುವ ಮಸೀದಿಗಳಲ್ಲಿ ನಮಾಜ್ ಮಾಡಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X