Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ ಶಿರವಸ್ತ್ರ ವಿವಾದಕ್ಕೆ...

ಮಂಗಳೂರು ವಿವಿ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯರ ಹೇಳಿಕೆ ರಾಜಕೀಯ ಪ್ರೇರಿತ: ಯು.ಟಿ.ಖಾದರ್

"ಸಹೋದರಿಯರ ಈ ಸುಳ್ಳು ಹೇಳಿಕೆಯು ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ"

ವಾರ್ತಾಭಾರತಿವಾರ್ತಾಭಾರತಿ1 Jun 2022 10:37 AM IST
share
ಮಂಗಳೂರು ವಿವಿ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯರ ಹೇಳಿಕೆ ರಾಜಕೀಯ ಪ್ರೇರಿತ: ಯು.ಟಿ.ಖಾದರ್

ಮಂಗಳೂರು: ವಿಶ್ವವಿದ್ಯಾನಿಲಯದ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಸುಳ್ಳು ಹೇಳಿಕೆ ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ. ಈ ಸುಳ್ಳು ಹೇಳಿಕೆಗಳು ದುರುದ್ದೇಶದಿಂದ ಕೂಡಿದ ರಾಜಕೀಯ ಪ್ರೇರಿತವಾಗಿದ್ದು, ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕುಮ್ಮಕ್ಕು ಎದ್ದು ಕಾಣುತ್ತಿದೆಯೆಂದು ಯು.ಟಿ. ಖಾದರ್ ಪ್ರತಿಕ್ರಿಯಿಸಿದರು.

ಈ ವಿವಾದಕ್ಕೆ ಸಂಬಂಧಿಸಿದಂತೆ ದಿನಾಂಕ 18-05-2022 ರಂದು ವಿದ್ಯಾರ್ಥಿನಿಯರೋರ್ವರು ನನಗೆ ಕರೆ ಮಾಡಿ, ಕಳೆದ ಬಾರಿ ರಾಜ್ಯದಾದ್ಯಂತ ಹಿಜಾಬ್ ವಿವಾದ ಇದ್ದಾಗಲೂ ಕೂಡಾ ನಮ್ಮ ಕಾಲೇಜಿನ ಕ್ಯಾಲೆಂಡರಿನಲ್ಲಿ ವಸ್ತ್ರದೊಂದಿಗೆ ಹಿಜಾಬ್ ಹಾಕಲು ನಿಯಮ ಇದ್ದ ಕಾರಣ ನಮಗೆ ಯಾರಿಗೂ ತೊಂದರೆಯಾಗಿರಲಿಲ್ಲ. ಇದೀಗ ಈ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಹಠಾತ್ತನೆ ಹಿಜಾಬ್ ಹಾಕಲು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಉಪಕುಲಪತಿಗಳ ಬಳಿ ವಿಚಾರ ಕೇಳಿದಾಗ ಸಿಂಡಿಕೇಟ್ ಸಮಿತಿಯ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ನೀವು ಜಿಲ್ಲಾಧಿಕಾರಿಗಳ ಬಳಿಗೆ ಹೋಗಿ, ಈ ನಿಯಮ ಪಿ.ಯು.ಕಾಲೇಜುಗಳಿಗೆ ಮಾತ್ರ ಅನ್ವಯ ಡಿಗ್ರಿ ಕಾಲೇಜಿಗೆ ಅನ್ವಯಿಸುವುದಿಲ್ಲ ಎಂಬ ಆದೇಶ ನೀಡಿದರೆ ನನಗೆ ನಿಮ್ಮನ್ನು ಸಹಾಯ ಮಾಡಬಹುದು ಎಂದು ತಿಳಿಸಿರುತ್ತಾರೆ. ಹಾಗಾಗಿ ಈಗ ನಾವು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದ್ದೇವೆ, ತಾವು ಬಂದರೆ ಒಳ್ಳೆಯದಿತ್ತು ಎಂಬುದಾಗಿ ಕೇಳಿಕೊಳ್ಳುತ್ತಾರೆ.

ಆ ಸಂದರ್ಭದಲ್ಲಿ ನಾನು ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕಾರಣ ನನಗೆ ಬರಲು ಅನಾನುಕೂಲ ಆಗಬಹುದು, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಅವರ ಯಾವ ಸಮಯದಲ್ಲಿ ಸಿಗುತ್ತಾರೆಂಬುದನ್ನು ಕೇಳಿ ನಿಮಗೆ ತಿಳಿಸುತ್ತೇನೆಂದು ಹೇಳಿದೆ. ನಂತರ ತಕ್ಷಣ ನಾನು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ವಿಚಾರಿಸಿದಾಗ ಜಿಲ್ಲಾಧಿಕಾರಿಗಳು ಈಗ ಕಚೇರಿಯಲ್ಲಿ ಇಲ್ಲ, ಸಂಜೆ 4 ಗಂಟೆಗೆ ಬರಲಿ ಎಂದು ತಿಳಿಸುತ್ತಾರೆ. ತಕ್ಷಣ ನಾನು ನನಗೆ ಕರೆ ಮಾಡಿದ ವಿದ್ಯಾರ್ಥಿನಿಗೆ ಮರು ಕರೆ ಮಾಡಿ ಜಿಲ್ಲಾಧಿಕಾರಿಗೆ ಮಾತನಾಡಿ ಘಟನೆಯ ಬಗ್ಗೆ ವಿವರಿಸಿದ್ದೇನೆ, ಅವರು ಕಚೇರಿಯಲ್ಲಿ ಇಲ್ಲದ ಕಾರಣಕ್ಕಾಗಿ ಸಂಜೆ ನಾಲ್ಕು ಘಂಟೆಗೆ ಬರಲು ತಿಳಿಸಿರುತ್ತಾರೆ, ಹೋಗಿ ಮಾತನಾಡಿ ಎಂದು ವಿದ್ಯಾರ್ಥಿನಿಗೆ ಹೇಳಿದೆ.

ಆದರೆ ಸ್ವಲ್ಪ ಸಮಯದ ನಂತರ ನನಗೆ ಪುನಃ ಕರೆ ಮಾಡಿದ ಜಿಲ್ಲಾಧಿಕಾರಿಗಳು ಪ್ರಾಕೃತಿಕ ವಿಕೋಪದ ಸಭೆಯಲ್ಲಿರುವುದರಿಂದ ನನಗೆ 4 ಗಂಟೆಗೆ ಸಿಗಲು ಅಸಾಧ್ಯವಾಗಬಹುದು, ಆದುದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಕೊಟ್ಟಾರ ಜಿಲ್ಲಾ ಪಂಚಾಯತ್ ಗೆ ಬರಲಿ ಎಂದು ತಿಳಿಸಿದಾಗ ನಾನು ಪುನಃ ವಿದ್ಯಾರ್ಥಿನಿಗೆ ಕರೆ ಮಾಡಿ ಜಿಲ್ಲಾಧಿಕಾರಿಗಳು ನಾಳೆ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಗೆ ಬರಲು ಹೇಳಿದ್ದಾರೆ, ನನಗೆ ನಾಳೆ ಆ ಸಮಯದಲ್ಲಿ ಪೂರ್ವ ನಿಗದಿಯಾದಂತೆ ಪಾಣೇಲ ಬಸ್ಸು ಉದ್ಘಾಟನಾ ಕಾರ್ಯಕ್ರಮ ಹಾಗೂ ನಂತರ ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಹರಿಪ್ರಸಾದ್ ಅವರು ಜಿಲ್ಲೆಗೆ ಭೇಟಿ ನೀಡುವುದರಿಂದ ಬರಲು ಅಸಾಧ್ಯವಿದೆ, ನಾನು ಮಾಜಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರನ್ನು ನಿಮ್ಮೊಂದಿಗೆ ಕಳುಹಿಸುತ್ತೇನೆಂದು ಹೇಳಿ ವಿದ್ಯಾರ್ಥಿನಿಗೆ ಶಾಹುಲ್ ರವರ ನಂಬರನ್ನು ನೀಡಿದೆ.

ಮರುದಿನ ಶಾಹುಲ್ ಹಮೀದ್ ರವರು ವಿದ್ಯಾರ್ಥಿಗಳೊಂದಿಗೆ ತೆರಳಿ ಜಿಲ್ಲಾಧಿಕಾರಿಗಳ ಬಳಿ ಘಟನೆಯ ಬಗ್ಗೆ ವಿವರಿಸುತ್ತಾರೆ. ಅಂತೆಯೇ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸುತ್ತೇನೆಂಬ ಭರವಸೆಯನ್ನು ನೀಡಿದ್ದಾರೆ. ಈ ಮಧ್ಯೆ ನಾನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಿಗೆ ಕರೆ ಮಾಡಿ ಕಾಲೇಜಿನ ಕ್ಯಾಲೆಂಡರ್ ನಲ್ಲಿದ್ದಂತೆ ವಿದ್ಯಾರ್ಥಿಗಳು ವಸ್ತ್ರದ ಜತೆಯಲ್ಲಿ ಶಿರವಸ್ತ್ರ ಹಾಕಿಕೊಂಡು ಬರುವುದಕ್ಕೆ ಯಾಕೆ ತಡೆಯೊಡ್ಡಿದ್ದೀರಿ ? ಎಂದು ಪ್ರಶ್ನಿಸಿದಾಗ ಅವರು ಇದು ಯುನಿವರ್ಸಿಟಿಯಿಂದ ಬಂದ ಆದೇಶ, ಅದನ್ನು ನಾವು ಅನುಷ್ಠಾನಗೊಳಿಸಿದ್ದೇವೆ ಅಷ್ಟೆ, ನಾವು ಏನು ಮಾಡಲೂ ಸಾಧ್ಯವಿಲ್ಲ ಎಂದು ಹೇಳಿದರು.

ನಂತರ ನಾನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೂ ಕರೆ ಮಾಡಿ ಮೇಲೆ ತಿಳಿಸಿದ ಎಲ್ಲಾ ವಿಚಾರಗಳನ್ನು ವಿವರಿಸಿದಾಗ, ಉಪ ಕುಲಪತಿಗಳು ಇದು ಸಿಂಡಿಕೇಟ್ ಸಮಿತಿಯ ಬಹುಮತದ ತೀರ್ಮಾನದ ಮೇಲೆ ಈ ನಿರ್ಧಾರ ಮಾಡಲಾಗಿದೆಯೆಂಬ ಉತ್ತರ ಬಂತು. ಸಿಂಡಿಕೇಟ್ ಸಮಿತಿಯ ನಿರ್ಧಾರವಾದರೆ ಮತ್ಯಾಕೆ ತಾವು ವಿದ್ಯಾರ್ಥಿನಿಯರನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆದಾಡಿಸುತ್ತೀರಿ, ಜಿಲ್ಲಾಧಿಕಾರಿಗಳ ಆದೇಶ ಇದ್ದರೆ ಸಮಸ್ಯೆ ಬಗೆಹರಿಯುತ್ತಾ ಎಂದು ಕೇಳಿದಾಗ ಇಲ್ಲ ಎಂಬ ಉತ್ತರ ಉಪ ಕುಲಪತಿಗಳಿಂದ ಬಂತು.

ಈ ಮಧ್ಯೆ ಜಿಲ್ಲಾಧಿಕಾರಿಗಳ ಭೇಟಿಯ ಬಳಿಕ ಕರೆ ಮಾಡಿದ್ದ ವಿದ್ಯಾರ್ಥಿನಿ ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ, ತಾವು ಹೇಗಾದರೂ ಮಾಡಿ ಜಿಲ್ಲಾಧಿಕಾರಿಗಳಿಂದ ಪದವಿ ಕಾಲೇಜಿಗೆ ಅನ್ವಯಿಸುವುದಿಲ್ಲವೆಂಬ ಲೆಟರ್ ತೆಗೆಸಿಕೊಡಿ ಎಂದು ಮನವಿ ಮಾಡಿದರು. ಆ ಸಂದರ್ಭದಲ್ಲಿ ನಾನು ಜಿಲ್ಲಾಧಿಕಾರಿಗಳು, ಉಪ ಕುಲಪತಿಗಳು ಹಾಗೂ ಪ್ರಾಂಶುಪಾಲರ ಬಳಿ ಚರ್ಚೆ ನಡೆಸಿದ ಎಲ್ಲಾ ವಿಚಾರಗಳನ್ನು ತಿಳಿಸಿ ಸದ್ಯಕ್ಕೆ ತಾವುಗಳು ಎಲ್ಲರೂ ತರಗತಿಗಳಿಗೆ ತೆರಳಿ ನಂತರ ಇದರ ಬಗ್ಗೆ ಕಾನೂನು ಹೋರಾಟ ನಡೆಸುವ, ಈಗ ಅಲ್ಲಿ ಇಲ್ಲಿ ಅಲೆದಾಡಿ ಹಾಜರಾತಿ ಕಡಿಮೆಯಾದರೆ ತಮ್ಮ ಶಿಕ್ಷಣಕ್ಕೆ ದಕ್ಕೆಯಾಗಬಹುದು, ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವುದು ಒಳಿತು ಎಂದು ತಿಳಿಸಿ, ಕಾನೂನು ಹೋರಾಟಕ್ಕಾಗಿ ಹೈಕೋರ್ಟ್ ಸೆಂಟ್ರಲ್ ಅಡ್ವಕೇಟ್ ಫೋರಂ ಶಾಹುಲ್ ಹಮೀದ್ ರವರ ನಂಬರನ್ನು ವಿದ್ಯಾರ್ಥಿನಿಯರಿಗೆ ನೀಡಿ ಅವರಲ್ಲಿ ಚರ್ಚಿಸಲು ತಿಳಿಸಿದೆ.

ನಂತರ ಮತ್ತೆ ಕರೆ ಮಾಡಿದ್ದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳು ಲೆಟರ್ ನೀಡುತ್ತಿಲ್ಲ ಎಂದು ಹೇಳಿದಾಗ, ನನ್ನ ಅನುಭವದ ಪ್ರಕಾರ ಇದು ಕಾನೂನು ಮತ್ತು ನ್ಯಾಯಾಲಯದ ಪರಿಮಿತಿಯಲ್ಲಿರುವುದರಿಂದ ನ್ಯಾಯಾಲಯದ ಮೊರೆ ಹೋಗುವುದು ಸೂಕ್ತ, ಈಗಾಗಲೇ ಕಾನೂನು ಹೋರಾಟದ ಬಗ್ಗೆ ಅಡ್ವಕೇಟ್ ಬಳಿ ವಿವರ ತಿಳಿಸಿದ್ದೇನೆ, ನಿಮಗೂ ಅಡ್ವಕೇಟ್ ನಂಬರ್ ನೀಡಿದ್ದೆ, ಅವರ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ ಇಲ್ಲ ನ್ಯಾಯಾಲಯಕ್ಕೆ ಹೋಗಲು ಕೆಲವರಿಗೆ ಮನಸ್ಸಿಲ್ಲ ಎಂದು ವಿದ್ಯಾರ್ಥಿನಿ ತಿಳಿಸಿದರು. ಕಾನೂನು ಎಲ್ಲರಿಗೂ ಒಂದೇ, ನ್ಯಾಯಾಲಯಕ್ಕೆ ಹೋಗುವುದು ಸೂಕ್ತ ಎಂದು ತಿಳಿ ಹೇಳಿದಾಗ ಈ ಬಗ್ಗೆ ನಾವು ಪುನಃ ಚರ್ಚಿಸಿ ಮತ್ತೆ ತಿಳಿಸುತ್ತೇವೆ ಎಂದರು.

ಎರಡು ದಿನಗಳ ಬಳಿಕ ಮತ್ತೆ ನಾನು ಉಪ ಕುಲಪತಿಗಳಿಗೆ ಕರೆ ಮಾಡಿ ವಿಚಾರದ ಬಗ್ಗೆ ಕೇಳಿದಾಗ, ಕಾಲೇಜು ಪ್ರಾಂಶುಪಾಲರಿಗೆ ಅಲ್ಲಿನ ಅಭಿವೃದ್ಧಿ ಸಮಿತಿಯ ಸಭೆ ಕರೆದು ಈ ಶೈಕ್ಷಣಿಕ ವರ್ಷದಲ್ಲಿ ಹಿಂದಿನಂತೆಯೇ ಇರುವ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಎಂಬ ನಿರ್ಣಯ ಮಾಡಿ ಕಳಿಸಿಕೊಡಿ ಎಂದು ತಿಳಿಸಿದ್ದೇನೆ ಎಂದರು.

ಈ ಬೆಳವಣಿಗೆಯ ಬಗ್ಗೆ ಮಾಹಿತಿಗಾಗಿ ಮತ್ತೆ ನಾನು ವಿದ್ಯಾರ್ಥಿನಿಯರಿಗೆ ಕಾಲ್ ಮಾಡಿದಾಗ ಕರೆಯನ್ನು ಸ್ವೀಕರಿಸಲಿಲ್ಲ, ನನ್ನ ಕಚೇರಿಯ ಅಪ್ತ ಸಹಾಯಕನ ಕರೆಯನ್ನು ಕೂಡಾ ಸ್ವೀಕರಿಸಿಲ್ಲ. ಮತ್ತೆ ನಾನೇ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿದ ವಿದ್ಯಾರ್ಥಿನಿ ರಾಂಗ್ ನಂಬರ್ ಎಂದು ಕಾಲ್ ಕಟ್ ಮಾಡಿರುತ್ತಾರೆ. ನಂತರ ಈ ಬಗ್ಗೆ ಯಾರೂ ಕೂಡಾ ನನ್ನನ್ನು ಸಂಪರ್ಕಿಸಿಲ್ಲ, ಮತ್ತೆ ಜಿಲ್ಲಾಧಿಕಾರಿಗಳ ಭೇಟಿಗೆ ತೆರಳಿದ್ದೂ ತಿಳಿದಿಲ್ಲ. ಆ ದಿನ ನಾನು ಬೆಂಗಳೂರಿನಲ್ಲಿದ್ದ ಸಂದರ್ಭ ಮಾಧ್ಯಮದ ಮೂಲಕ ಈ ವಿಚಾರ ತಿಳಿದು ಸರಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿವರಿಸಿ ಜಿಲ್ಲಾಧಿಕಾರಿಗಳು ಹಾಗೂ ಉಪ ಕುಲಪತಿಗಳ ಬಳಿ ಈ ಬಗ್ಗೆ ಚರ್ಚಿಸಿ ಗೊಂದಲ ಸರಿಪಡಿಸಬೇಕೆಂದು ಮನವಿ ಮಾಡಿದೆ.

ಇಷ್ಟೆಲ್ಲಾ ಬೆಳವಣಿಗೆ ಆಗಿದ್ದರೂ ಕೂಡಾ ಇದ್ಯಾವುದು ವಿಚಾರಗಳನ್ನು ತಿಳಿಸದೆ ವಿದ್ಯಾರ್ಥಿನಿಯರು ತಮ್ಮ ಅತ್ಯಮೂಲ್ಯವಾದ ಈ ಪ್ರಾಯದಲ್ಲಿಯೇ ಯಾವುದೋ ರಾಜಕೀಯ ಶಕ್ತಿಗಳಿಗೆ ಮಣಿದು ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ ಎಂದು ವಿವಾದದ ಬಗ್ಗೆ ವಿಸ್ತಾರವಾಗಿ ತಿಳಿಸಿದ ಯು.ಟಿ.ಖಾದರ್ ವಿಷಾದ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X