Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಬಿ.ಸಿ ನಾಗೇಶ್ ನಿವಾಸಕ್ಕೆ NSUI...

ಸಚಿವ ಬಿ.ಸಿ ನಾಗೇಶ್ ನಿವಾಸಕ್ಕೆ NSUI ಕಾರ್ಯಕರ್ತರ ಮುತ್ತಿಗೆ | 15 ಮಂದಿ ವಶಕ್ಕೆ: ಆರಗ ಜ್ಞಾನೇಂದ್ರ

'ದುಷ್ಕರ್ಮಿಗಳು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದರು' ಎಂದ ಗೃಹ ಸಚಿವ

ವಾರ್ತಾಭಾರತಿವಾರ್ತಾಭಾರತಿ1 Jun 2022 6:54 PM IST
share
ಸಚಿವ ಬಿ.ಸಿ ನಾಗೇಶ್ ನಿವಾಸಕ್ಕೆ NSUI ಕಾರ್ಯಕರ್ತರ ಮುತ್ತಿಗೆ | 15 ಮಂದಿ ವಶಕ್ಕೆ: ಆರಗ ಜ್ಞಾನೇಂದ್ರ

ತುಮಕೂರು.ಜೂ.01:ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಮನೆ ಮೇಲೆ ಬುಧವಾರ ತಿಪಟೂರಿನಲ್ಲಿ ಮದ್ಯಾಹ್ನ 3.30ಸಮಯದಲ್ಲಿ ಎನ್.ಎಸ್.ಯು.ಐ ಪದಾಧಿಕಾರಿಗಳು ದಾಂದಲೆ ನಡೆಸಿರುವ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಗೃಹಸಚಿವ ಅರಗ ಜ್ಞಾನೇಂದ್ರ ಘಟನೆ ಖಂಡನೀಯ ಎಂದಿದ್ದಾರೆ.

ಮದ್ಯಾಹ್ನ 3:30ರ ಸುಮಾರಿಗೆ ಸಚಿವ ಬಿ.ಸಿ ನಾಗೇಶ್ ರವರ ಮನೆ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳು ಮನೆಗೆ ಬೆಂಕಿ ಹಚ್ಚುವ ಕೆಲಸಕ್ಕೆ ಸಹ ಮುಂದಾಗಿದ್ದಾರೆ ಎಂದು ಕಿಡಿಕಾರಿದರು.ಘಟನೆಯ ಸಂಬಂಧ ಸುಮಾರು 15ಕ್ಕೂ ಹೆಚ್ಚು ಜನರ ಬಂಧನವಾಗಿದ್ದು ಎರಡು ವಾಹನಗಳನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸರಕಾರ ಇಂತಹ ಗೂಂಡಾ ವರ್ತನೆ ಯನ್ನು ತಡೆಯಲು ಸಾಧ್ಯವಿಲ್ಲ.ಇದಕ್ಕೆ ತಕ್ಕ ಪಾಠವನ್ನು ಅವರು ಕಲಿಯಬೇಕಾಗುತ್ತದೆ.ಇನ್ನು ಕೆಲವರು ಯಾರದೋ ಮನೆಗೆ ನುಗ್ಗುತ್ತೆವೆ.ಎದುರಿಸುತ್ತೆವೆ ಅಂದುಕೊಂಡರೆ ಈ ದೇಶದಲ್ಲಿ ನಡೆಯುವುದಿಲ್ಲ.ಈ ಸಂಬಂಧ ಪೊಲೀಸರು ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದರು.

ಇನ್ನು ಘಟನೆಯ ಯಾವ ಕಾರಣಕ್ಕಾಗಿ ನಡೆದಿದೆ ಎನ್ನುವುದು ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ ಘಟನಾ ಸ್ಥಳಕ್ಕೆ ತಾವು ಸಹ ಕೂಡಲೇ ಭೇಟಿ ನೀಡಲಿದ್ದೇವೆ.ಬೆಂಗಳೂರಿನಿಂದ ಐದು ಮಂದಿ, ಭದ್ರಾವತಿಯಿಂದ ಒಬ್ಬರು, ತುಮಕೂರಿನಿಂದ ಒಬ್ಬರು ,ಚಿಕ್ಕಮಗಳೂರಿನಿಂದ ಇಬ್ಬರು,ದಾವಣಗೆರೆಯಿಂದ ಮೂವರು,ಹಾಸನದಿಂದ ಮೂರು ಮಂದಿ ಬಂದು ಕೃತ್ಯದಲ್ಲಿ ಭಾಗಿಯಾಗಿರುವ ಸುಮಾರು 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ಇನ್ನು ಘಟನಾ ಸ್ಥಳದಿಂದ ಪರಾರಿಯಾಗಿರುವ ಇತರೆ ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು,ತಪ್ಪಿಸಿಕೊಂಡಿರುವ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ ಎಂದರು.

ಇಡೀ ಘಟನೆಯನ್ನು ಗಮನಿಸಿದಾಗ ಬೇರೆ ಬೇರೆ ಜಿಲ್ಲೆಗಳಿಂದ ಎಲ್ಲರೂ ಸೇರಿ ಒಟ್ಟಿಗೆ ಮನೆ ಮೇಲೆ ದಾಳಿ ನಡೆಸಿರುವುದನ್ನು ಗಮನಿಸಿದರೆ, ಇದು ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ಘಟನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಚಿವರು, ಘಟನೆಗೆ ಪೊಲೀಸ್ ವೈಫಲ್ಯ ಕಾರಣವಲ್ಲ.ಘಟನೆ ನಡೆದಾಗ ಮನೆಯಲ್ಲಿ ಸಚಿವರ ಮಗ ಹಾಗೂ ಅವರ ಆಪ್ತ ಸಹಾಯಕ ಮಾತ್ರ ಇರುವ ಕಾರಣ ಯಾರಿಗೂ ತೊಂದರೆಯಾಗಿಲ್ಲ.ರಾಜ್ಯದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯ ಕಂಡಿಲ್ಲ ಪೊಲೀಸರು ಸಹ ಎಚ್ಚರದಿಂದ ಇದ್ದಾರೆ.ಘಟನೆ ಏಕಾಏಕಿ ನಡೆದಿದೆ. ಇನ್ನೂ ಘಟನೆಯ ಹಿಂದೆ ಕಾಂಗ್ರೆಸ್ ಇದ್ದು ಎನ್.ಎಸ್. ಯು ಐ ಕಾಂಗ್ರೆಸ್ ನ  ಮತ್ತೊಂದು ಭಾಗವಾಗಿದೆ ಎಂದರು.

ಘಟನೆಯಲ್ಲಿ ಎನ್.ಎಸ್.ಯು.ಐ ನ ರಾಜ್ಯ ಅಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಹಲವರು ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.ಶೀಘ್ರದಲ್ಲಿಯೇ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X