Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ವಿವಿಯಲ್ಲಿ ಕುಲಪತಿಗಳ...

ಬೆಂಗಳೂರು ವಿವಿಯಲ್ಲಿ ಕುಲಪತಿಗಳ ಅವ್ಯವಹಾರದ ಹಿಂದೆ ಸಚಿವರ ಕಮಿಷನ್: ಸಿಂಡಿಕೇಟ್ ಸದಸ್ಯರ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Jun 2022 10:16 PM IST
share
ಬೆಂಗಳೂರು ವಿವಿಯಲ್ಲಿ ಕುಲಪತಿಗಳ ಅವ್ಯವಹಾರದ ಹಿಂದೆ ಸಚಿವರ ಕಮಿಷನ್: ಸಿಂಡಿಕೇಟ್ ಸದಸ್ಯರ ಗಂಭೀರ ಆರೋಪ

ಬೆಂಗಳೂರು, ಜೂ.2: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ವೇಣುಗೋಪಾಲ್ ಅವರು ನಿರಂಕುಶ ಅಧಿಕಾರಿಯಂತೆ ಕಾನೂನುಬಾಹಿರವಾಗಿ ವಿವಿಯ ಅನುದಾನವನ್ನು ಬಳಕೆ ಮಾಡಿಕೊಂಡಿದ್ದಾರೆ. ಇದನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಮರ್ಥನೆ ಮಾಡಿಕೊಂಡಿರುವುದರ ಹಿಂದೆ ಕಮಿಷನ್ ವ್ಯವಹಾರ ಅಡಗಿದೆ ಎಂದು ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರು ಆರೋಪಿಸಿದ್ದಾರೆ. 

ಕುಲಪತಿ ಕೆ.ಆರ್. ವೇಣುಗೋಪಾಲ್ ಅವರು ಯುವಿಸಿಇನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗ ಹಾಗೂ ರಾಮನಗರ ಸ್ನಾತಕೋತ್ತರ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಬಳಸಿಕೊಳ್ಳಲು 40 ಕೋಟಿ ಹಣವನ್ನು ನಿಶ್ಚಿತ ಠೇವಣಿಯಿಂದ ಮರುಗಡೆ ಮಾಡಿ, ಪಾವತಿಸಲು ವಿವಿಯ ಹಣಕಾಸು ವಿಭಾಗದ ಉಪಕುಲಪತಿಗಳಿಗೆ ಸೂಚಿಸಿರುತ್ತಾರೆ. ಆದರೆ ಉಪಕುಲಪತಿಗಳು ಸರಕಾರದ ಅದೇಶಗಳನ್ನು ಉಲ್ಲೇಖಿಸಿ ಅದನ್ನು ಮೇ 11ರಂದು ತಿರಸ್ಕರಿಸಿದ್ದಾರೆ. ಆದರೆ ಕುಲಪತಿ ವೇಣುಗೋಪಾಲ್ ಅವರು ಉಪಕುಲಪತಿಗಳ ಮೇಲೆ ಒತ್ತಡ ಏರಿ ಹಣವನ್ನು ಬಿಡುಗಡೆ ಮಾಡಿಸಿಕೊಂಡಿರುವುದು ವಿವಿಯಲ್ಲಿ ಗದ್ದಲದ ವಾತಾವರಣವನ್ನು ಸೃಷ್ಟಿಸಿದೆ.

ಕುಲಪತಿಯಾಗಿ ವೇಣುಗೋಪಾಲ್ ಅವರ ಅಧಿಕಾರಾವಧಿ ಕೇವಲ 10 ದಿನಗಳು ಮಾತ್ರ ಉಳಿದಿದೆ. ವಿವಿಗಳ ಕುಲಪತಿಗಳು ತಮ್ಮ ಅಧಿಕಾರಾವಧಿಯ ಕೊನೆಯ ಎರಡು ತಿಂಗಳಿನಲ್ಲಿ ಯಾವುದೇ ರೀತಿಯ ನಿರ್ಧಾರವನ್ನು ಕೈಗೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಕುಲಪತಿಗಳು 40 ಕೋಟಿ ಹಣವನ್ನು ವರ್ಗಾವಣೆ ಮಾಡಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಈಗಾಗಲೇ ಹಣ ವರ್ಗಾವಣೆಯಾಗಿದ್ದು, ಸಿಂಡಿಕೇಟ್ ಸದಸ್ಯರ ಗಮನಕ್ಕೂ ತಾರದೇ ಗೌಪ್ಯವಾಗಿ ಇಷ್ಟು ಮೊತ್ತವನ್ನು ವರ್ಗಾಯಿಸಿರುವುದರ ಹಿಂದಿನ ರಹಸ್ಯವೇನು? ಉನ್ನತ ಶಿಕ್ಷಣ ಸಚಿವರು ಇದನ್ನು ಸಮರ್ಥಿಸಿಕೊಳ್ಳುತ್ತಿರುವುದರ ಹಿಂದೆ ಕಮಿಷನ್ ವ್ಯವಹಾರ ನಡೆದಿದೆಯೇ? ಎಂದು ಸಿಂಡಿಕೇಟ್ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. 

ಅಕ್ರಮವಾಗಿ ಹಣ ವರ್ಗಾವಣೆ ಮಾಡುವುದನ್ನು ವಿವಿಯ ಹಣಕಾಸು ವಿಭಾಗದ ಉಪಕುಲಪತಿ ವಿರೋಧಿಸಿ ಪತ್ರ ಬರೆದಿದ್ದರೂ, ಅವರಿಗೆ ಒತ್ತಡ ಹಾಕಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇದನ್ನು ವಿವಿಯ ವಿದ್ಯಾರ್ಥಿಗಳು ಖಂಡಿಸಿ, ಪ್ರತಿಭಟನೆ ಮಾಡಿದ್ದಾರೆ. ಆದರೆ ಕುಲಪತಿಗಳು ತಮ್ಮ ಅಧಿಕಾರ ಬಳಸಿ, ವಿದ್ಯಾರ್ಥಿಗಳು ಮಹಿಳಾ ಅಧಿಕಾರಿಯ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂದು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಇದರಿಂದ ವಿಚಲಿತರಾದ ವಿದ್ಯಾರ್ಥಿಗಳು ದೂರು ವಾಪಾಸ್ಸು ಪಡೆಯುವಂತೆ ಪ್ರತಿಭಟಿಸಿದ್ದರಿಂದ ದೂರು ವಾಪಸ್ಸು ಪಡೆಯುವುದಾಗಿ ಕುಲಪತಿಗಳು ತಿಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಚಿವರೇ ಭ್ರಷ್ಟ ಕುಲಪತಿಗಳನ್ನು ಸಮರ್ಥನೆ ಮಾಡಿಕೊಂಡಿದ್ದರಿಂದ ವಿದ್ಯಾರ್ಥಿಗಳು ತಮ್ಮ ನ್ಯಾಯಯುತ ಪ್ರತಿಭಟನೆಯನ್ನು ಕೈ ಬಿಡುವ ಹಂತದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ.


ಕೆ.ಆರ್. ವೇಣುಗೋಪಾಲ್ ಅವರು ಅನಧಿಕೃತವಾಗಿ ವಿವಿಯ ಕುಲಪತಿಗಳಾಗಿದ್ದಾರೆ. ಸರಕಾರವು ಅವರನ್ನು ಅಧಿಕೃತವಾಗಿ ನೇಮಕ ಮಾಡಿಲ್ಲ. ಈ ಕುರಿತು ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿದ್ದು, ಅವರು ಅನಧಿಕೃತವಾಗಿ ನೇಮಕವಾಗಿದ್ದಾರೆ ಎಂದು ಕೋರ್ಟ್ ತೀರ್ಪು ನೀಡಿದೆ. ಆದರೆ ಕೆ.ಆರ್. ವೇಣುಗೋಪಾಲ್ ಅವರು, ಸುಪ್ರೀಂ ಕೋರ್ಟ್‍ನಲ್ಲಿ ತಡೆಯಾಜ್ಞೆ ತಂದಿದ್ದಾರೆ. ಜೂ.12ಕ್ಕೆ ಅವರು ನಿವೃತ್ತಿ ಆಗುತ್ತಿದ್ದು, ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆಯನ್ನು ಜೂ.12ರೊಳಗೆ ನಡೆಸಬೇಕು ಎಂದು ಸಿಂಡಿಕೇಟ್ ಸದಸ್ಯರು ಮನವಿ ಮಾಡಿದ್ದಾರೆ.


ಬೆಂಗಳೂರು ವಿವಿಯಲ್ಲಿ ನಾಲ್ಕು ವರ್ಷಗಳಿಂದ ಸಾಲು ಸಾಲು ಭ್ರಷ್ಟಾಚಾರ ಪ್ರಕರಣಗಳು ನಡೆದಿವೆ. ಅಂಕಪಟ್ಟಿ ವಿತರಣೆ, ನೌಕರರ ಪದೋನ್ನತಿ, ಕುಲಸಚಿವರ ವರ್ಗಾವಣೆ, 2019ರ ಅಧಿಸೂಚನೆಯ ಪಿಎಚ್‍ಡಿ ನೇಮಕಾತಿ, ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿ, ಸಿಂಡಿಕೇಟ್ ಸದಸ್ಯರನ್ನು ಅನಧಿಕೃತವಾಗಿ ಅಮಾನತ್ತು ಮಾಡಿದ ಪ್ರಕರಣ, ಗುತ್ತಿಗೆ ಹುದ್ದೆಗಳ ನೇಮಕಾತಿ, ವಿವಿಯ ಭೂ ಒತ್ತುವರಿ, ಟೆಂಡರ್‍ನಲ್ಲಿ ಬಾರಿ ಅವ್ಯವಹಾರವನ್ನು ನಡೆಸಿದ್ದಾರೆ. ಕೆಲವು ಪ್ರಕರಣಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಉಚ್ಚನ್ಯಾಯಾಲಯದಲ್ಲಿ ದಾಖಲಿಸಿದ ಬಹುತೇಕ ಪ್ರಕರಣಗಳಲ್ಲಿ ಕುಲಪತಿಗಳ ನಿರಂಕುಶ ಆಡಳಿತ ವೈಖರಿಯ ವಿರುದ್ಧ ತೀರ್ಪು ನೀಡಲಾಗಿದೆ. ಆದರೆ ಆ ಪ್ರಕರಣಗಳಿಗೆ ಸುಪ್ರೀಂ ಕೋರ್ಟ್‍ನಲ್ಲಿ ತಡೆಯಾಜ್ಞೆ ತರಲಾಗಿದೆ. ಕೆಲವು ಪ್ರಕರಣಗಳ ಕುರಿತು ಸರಕಾರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ, ಮತ್ತೆ ಕೆಲವು ಭ್ರಷ್ಟಾಚಾರದ ವಿರುದ್ಧ ಸಮಿತಿಗಳನ್ನು ನೇಮಕ ಮಾಡಿ ತನಿಖೆ ನಡೆಸಿದರೂ, ಕುಲಪತಿಗಳು ಆರ್‍ಎಸ್‍ಎಸ್‍ಗೆ ಸೇರಿದವನಾದ್ದರಿಂದ ವಿವಿಯಲ್ಲಿ ಭ್ರಷ್ಟಾಚಾರ ತೊಲಗಲಿಲ್ಲ. ಉನ್ನತ ಶಿಕ್ಷಣ ಸಚಿವರು ಕುಲಪತಿಗಳ ಅವ್ಯವಹಾರವನ್ನು ಸಮರ್ಥನೆ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಬೆಂಗಳೂರು ವಿವಿ ಸಿಂಡಿಕೇಟ್ ಬೇಸರ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X