Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕುವ...

ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕುವ ಅಗತ್ಯವಿಲ್ಲ ಎಂಬ ಮೋಹನ್ ಭಾಗ್ವತ್ ಹೇಳಿಕೆಗೆ ದನಿಗೂಡಿಸಿದ ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ3 Jun 2022 8:10 PM IST
share
ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕುವ ಅಗತ್ಯವಿಲ್ಲ ಎಂಬ ಮೋಹನ್ ಭಾಗ್ವತ್ ಹೇಳಿಕೆಗೆ ದನಿಗೂಡಿಸಿದ ಶಿವಸೇನೆ

ಮುಂಬೈ: ಪ್ರತಿ ಮಸೀದಿಯಲ್ಲೂ ಶಿವಲಿಂಗ ಕಂಡು ದಿನವೂ ಹೊಸ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಮಾತಿಗೆ ಶಿವಸೇನೆಯೂ ದನಿಗೂಡಿಸಿದೆ. ಈ ಬಗ್ಗೆ ಶಿವಸೇನೆ ವಕ್ತಾರ ಹಾಗೂ ಸಂಸದ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದಾರೆ. ʼಮೋಹನ್ ಭಾಗವತ್ ಅವರ ಮಾತುಗಳನ್ನು ನಾನು ಒಪ್ಪುತ್ತೇನೆʼ ಎಂದು ಅವರು ಮುಂಬೈನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವೇಳೆ ಕಾಶ್ಮೀರದಲ್ಲಿ ನಡೆದ ಹತ್ಯೆಗಳನ್ನು ಕೂಡಾ ರಾವತ್‌ ಕಟುವಾಗಿ ಟೀಕಿಸಿದ್ದಾರೆ.

''ಮೋಹನ್ ಭಾಗವತ್ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ದೇವಾಲಯಗಳಿಗಾಗಿ ಹೋರಾಡುವುದಕ್ಕಿಂತ ಕಾಶ್ಮೀರಿ ಪಂಡಿತರ ಜೀವವನ್ನು ಹೇಗೆ ಉಳಿಸಬಹುದು ಎಂಬುದನ್ನು ನೋಡುವುದು ಮುಖ್ಯ.”ಎಂದು ಸಂಜಯ್ ರಾವುತ್ ಹೇಳಿದ್ದಾರೆ.

 “ದೇಶದ ಹಲವು ರಾಜ್ಯಗಳಲ್ಲಿ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು, ನಾಗರಿಕರು ತೀವ್ರ ಬೆದರಿಕೆಯಲ್ಲಿದ್ದಾರೆ. ಮನೆ, ಕಚೇರಿಗಳಿಗೆ ನುಗ್ಗಿ ಪ್ರತಿದಿನ ಥಳಿಸಲಾಗುತ್ತಿದೆ. ಸೆಕ್ಷನ್ 370 ರದ್ದಿನ ನಂತರವೂ ಪರಿಸ್ಥಿತಿ ಬದಲಾಗಿಲ್ಲ” ಎಂದು ರಾವತ್‌ ಹೇಳಿದ್ದಾರೆ.

"ಕಾಶ್ಮೀರ್ ಫೈಲ್ಸ್ ಚಲನಚಿತ್ರವನ್ನು ಪ್ರಚಾರ ಮಾಡಲಾಯಿತು. ಪ್ರಧಾನಿ, ಗೃಹ ಸಚಿವರ ಕೃಪೆಯಿಂದ ನಿರ್ಮಾಪಕ 400, 500 ಕೋಟಿ ಗಳಿಸಿದ್ದಾರೆ. ಆದರೆ ಕಾಶ್ಮೀರಿ ಪಂಡಿತರು ನಾಶವಾಗಿದ್ದಾರೆ. ಈಗ ಪ್ರಾರಂಭವಾಗಿರುವ ಕಾಶ್ಮೀರಿ ಪಂಡಿತರ ವಲಸೆ ಬಗ್ಗೆ “ಕಾಶ್ಮೀರ ಫೈಲ್ಸ್ 2” ಅನ್ನು ಹೊರತರಬೇಕು. ಪ್ರಾರಂಭವಾಗಿರುವ ಹತ್ಯೆಗಳಿಗೆ ಹೊಣೆಗಾರರು ಯಾರು ಎಂದು ಮುಂದೆ ತರಬೇಕು,” ಎಂದು ಸಂಜಯ್ ರಾವತ್ ಒತ್ತಾಯಿಸಿದ್ದಾರೆ.

‘ಇಂದು ಕೂಡ ಇಬ್ಬರು ಸಾವನ್ನಪ್ಪಿದ್ದಾರೆ. ಜನರನ್ನು ಬೇಟೆಯಾಡಲಾಗುತ್ತಿದೆ. ಯಾವುದೇ ಭದ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ. ಜನರು ವಲಸೆ ಹೋಗುತ್ತಿದ್ದಾರೆ. ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಇದು ನಡೆದಿದ್ದರೆ ಕಾಶ್ಮೀರಿ ಪಂಡಿತ, ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ದೇಶಾದ್ಯಂತ ಗಲಾಟೆ ಮಾಡುತ್ತಿತ್ತು. ಆದರೆ ಗೃಹ ಸಚಿವರೇ, ಪ್ರಧಾನ ಮಂತ್ರಿಗಳೇ, ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ನಿಮ್ಮದಾಗಿದ್ದರೂ ಕಾಶ್ಮೀರಿ ಪಂಡಿತರು ಪ್ರಾಣ ಕಳೆದುಕೊಳ್ಳುತ್ತಿರುವುದು ಅಥವಾ ವಲಸೆ ಮಾಡುತ್ತಿರುವುದು ಭಯಾನಕವಾಗಿದೆ” ಎಂದು ಸಂಜಯ್ ರಾವತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X