Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ವಿದ್ಯಾರ್ಥಿಗಳ ಗುಂಪಿನಿಂದ...

ಉಪ್ಪಿನಂಗಡಿ: ವಿದ್ಯಾರ್ಥಿಗಳ ಗುಂಪಿನಿಂದ ಪ್ರಾಂಶುಪಾಲರ ವಿರುದ್ಧ ಧರಣಿ

ನಿಯಮಾವಳಿ ಉಲ್ಲಂಘನೆಗೆ ಪರೋಕ್ಷ ಬೆಂಬಲ ಆರೋಪ

ವಾರ್ತಾಭಾರತಿವಾರ್ತಾಭಾರತಿ3 Jun 2022 10:56 PM IST
share
ಉಪ್ಪಿನಂಗಡಿ:  ವಿದ್ಯಾರ್ಥಿಗಳ ಗುಂಪಿನಿಂದ ಪ್ರಾಂಶುಪಾಲರ ವಿರುದ್ಧ ಧರಣಿ

ಉಪ್ಪಿನಂಗಡಿ: ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬರುವ ವಿದ್ಯಾರ್ಥಿನಿಯರ ವಿರುದ್ಧ ಕ್ರಮ ಜರಗಿಸದೆ ಕಾನೂನು ಉಲ್ಲಂಘನೆಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಗುಂಪೊಂದು ತರಗತಿ ಬಹಿಷ್ಕರಿಸಿ ಧರಣಿ ನಡೆಸಿದ ಘಟನೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

ಹಿಜಾಬ್ ಧರಿಸುವ ಕುರಿತಾಗಿ ರಾಜ್ಯ ಉಚ್ಚ ನ್ಯಾಯಾಲಯ ತೀರ್ಪು ಹಾಗೂ ಸರಕಾರದ ಆದೇಶದಂತೆ ಉಪ್ಪಿನಂಗಡಿ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ನಿಯಮಾವಳಿಗಳನ್ನು ರೂಪಿಸಲಾಗಿದೆ. ಆದರೆ ಕೆಲವೊಂದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ  ಕಾಲೇಜಿಗೆ ಬರುತ್ತಿದ್ದಾರೆ. ಕಾಲೇಜು ಪ್ರಾಂಶುಪಾಲರು ಇವರ ವಿರುದ್ಧ ಕ್ರಮ ಜರಗಿಸದೆ ಮೃಧು ಧೋರಣೆ ಅನುಸರಿಸುತ್ತಿದ್ದಾರೆ. ಕಾಲೇಜಿನ ನಿಯಮಾವಳಿಗಳು ಪಾಲನೆಯಾಗುವವರೆಗೆ ತರಗತಿ ಬಹಿಷ್ಕರಿಸುವಂತೆ ನಿರ್ಧರಿಸಲಾಗಿದೆ ಎಂದು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಗುಂಪು ಹೇಳಿದೆ.

ಸಿಡಿಸಿ ಸಭೆ: ಮಧ್ಯಾಹ್ನದ ಬಳಿಕ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಸಂಜೀವ ಮಠಂದೂರು ಕಾಲೇಜಿಗೆ ಆಗಮಿಸಿದ್ದು, ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಸಂದರ್ಭ ಮನವಿ ನೀಡಿದರು. ಬಳಿಕ ಸಿಡಿಸಿ ಸಭೆ ನಡೆದು, ಕಾಲೇಜು ವರಾಂಡದಲ್ಲಿಯೂ ಇನ್ನು ಮುಂದೆ ಹಿಜಾಬ್ ಧರಿಸುವ ಆಗಿಲ್ಲ. ಕಾಲೇಜಿಗೆ ಬರುವವರು ಡ್ರೆಸ್ಸಿಂಗ್ ರೂಮಿಗೆ ತೆರಳಿ ಅಲ್ಲಿ ಕಾಲೇಜಿನ ವಸ್ತ್ರ ಸಂಹಿತೆಗೆ ವಿರುದ್ಧವಾಗಿರುವ ಉಡುಪುಗಳನ್ನು ಬದಲಾವಣೆ ಮಾಡಿ, ಕಾಲೇಜಿನ ನಿಯಮಾವಳಿಯಂತೆ ಮಾತ್ರ ಬಟ್ಟೆಗಳನ್ನು ಧರಿಸಬೇಕು. ಬಳಿಕ ಕಾಲೇಜಿನಿಂದ ಹೊರಹೋಗುವಾಗ ಮಾತ್ರ ಅವರ ಇಷ್ಟಬಂದ ವಸ್ತ್ರ ಸಂಹಿತೆಯನ್ನು ಅನುಸರಿಸಬಹು ದೆಂಬ ನಿರ್ಣಯ ತೆಗೆದುಕೊಳ್ಳಲಾಯಿತು ಹಾಗೂ ಇದನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ನಿರ್ಣಯಿಸಲಾಯಿತು.

ಪತ್ರಕರ್ತರ ದಿಗ್ಭಂಧನ: ವಿದ್ಯಾರ್ಥಿಗಳಿಂದ ದೂರು

ಗುರುವಾರ ಉಪ್ಪಿನಂಗಡಿಯ ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಮಾತನಾಡಿಸಲು ಕಾಲೇಜಿಗೆ ಹೋಗಿದ್ದ ಸಂದರ್ಭ ವಿದ್ಯಾರ್ಥಿಗಳ ಗುಂಪಿನಿಂದ ಪತ್ರಕರ್ತರ ಮೇಲೆ ದಿಗ್ಭಂಧನದಂತಹ ಕೃತ್ಯಗಳು ನಡೆಯುತ್ತಿದ್ದರೂ, ಕಾಲೇಜು ಗೇಟಿನ ಬಳಿ ಇದ್ದ ಪೊಲೀಸರನ್ನು ಕರೆಯಿಸಿ ಪತ್ರಕರ್ತರನ್ನು ರಕ್ಷಿಸಲು ಪ್ರಾಂಶುಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ  ಹಾಗೂ ದಿಗ್ಭಂಧನ ನಡೆಸಿ ಕಾಲೇಜಿನ ಘನತೆಗೆ ಚ್ಯುತಿ ತಂದಂತಹ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸದ ಬಗ್ಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ, ಶಾಸಕರೂ ಆಗಿರುವ ಸಂಜೀವ ಮಠಂದೂರು ಅವರಿಗೆ ಲಿಖಿತ  ದೂರು ಸಲ್ಲಿಸಿದೆ.

ಓರ್ವ ವಿದ್ಯಾರ್ಥಿನಿ ಅಮಾನತು

ಶುಕ್ರವಾರ ಕೂಡಾ ವಿದ್ಯಾರ್ಥಿನಿಯೋರ್ವಳು ಹಿಜಾಬ್ ಧರಿಸಿಕೊಂಡು ತರಗತಿಯೊಳಗೆ ಪ್ರವೇಶಿಸಿದ್ದು, ಆಕೆಯನ್ನು ಕೂಡ ತರಗತಿ ಪ್ರವೇಶಕ್ಕೆ ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಅಮಾನತು ಮಾಡಿ ಪ್ರಾಂಶುಪಾಲರು ಆದೇಶಿಸಿದ್ದಾರೆ ಎಂದು ತಿಳಿದುಬಂದಿದ್ದು, ಹಿಜಾಬ್ ವಿಷಯವಾಗಿ ಅಮಾನತುಗೊಂಡವರ ಸಂಖ್ಯೆ ಈಗ 7ಕ್ಕೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X