Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು ವಿವಿ ಪಠ್ಯದಿಂದ ಜಾತಿ ವಿನಾಶ...

ತುಮಕೂರು ವಿವಿ ಪಠ್ಯದಿಂದ ಜಾತಿ ವಿನಾಶ ಪಠ್ಯ ಹೊರಗೆ ಆರೋಪ; ವಿವಿ ವಿರುದ್ದ ಅಂಬೇಡ್ಕರ್ ಅನುಯಾಯಿಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Jun 2022 12:23 AM IST
share
ತುಮಕೂರು ವಿವಿ ಪಠ್ಯದಿಂದ ಜಾತಿ ವಿನಾಶ ಪಠ್ಯ ಹೊರಗೆ ಆರೋಪ; ವಿವಿ ವಿರುದ್ದ ಅಂಬೇಡ್ಕರ್ ಅನುಯಾಯಿಗಳ ಪ್ರತಿಭಟನೆ

ತುಮಕೂರು.ಜೂ.03: ತುಮಕೂರು ವಿವಿಯ ಬಿ.ಎ., ಬಿಎಸ್ಸಿ, ಬಿ.ಕಾಮ್‍ನ 2ನೇ ಸೆಮಿಸ್ಟರ್ ಪಠ್ಯದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಜಾತಿ ವಿನಾಶ ಲೇಖನವನ್ನು ಪಠ್ಯದಿಂದ ಕೈಬಿಟ್ಟು,ಅಸ್ಪøಷ್ಯತೆ ನಿವಾರಣೆ ಕುರಿತಂತೆ ಅರ್ಟಿಕಲ್ 17ರ ಮೇಲಿನ ಚರ್ಚೆಯಲ್ಲಿ ಸಂವಿಧಾನ ರಚನಾಸಮಿತಿಯ ಸದಸ್ಯರಾದ ಬ್ಯಾನರ್ಜಿ ಮತ್ತು ಠಾಕೂರ್ ಅವರುಗಳು ಮಾಡಿರುವ ಭಾಷಣವನ್ನು ಸೇರಿಸಿ, ಅಂಬೇಡ್ಕರ್ ಅವರನ್ನು ಪಠ್ಯದಿಂದ ಹೊರಗಿಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿ, ಅಂಬೇಡ್ಕರ್ ಅನುಯಾಯಿಗಳು ಇಂದು ವಿವಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪಾಲಿಕೆಯ ವಿರೋಧಪಕ್ಷದ ನಾಯಕ ಜೆ.ಕುಮಾರ್, ಅತಿಥಿ ಉಪನ್ಯಾಸಕ ಹೆತ್ತೇನಹಳ್ಳಿ ಮಂಜು,ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್,ಬೆಳ್ಳಿಲೋಕೇಶ್ ಸೇರಿದಂತೆ ಹಲವಾರು ಯುವಜನರು ತುಮಕೂರು ವಿವಿಗೆ ಮುತ್ತಿಗೆ ಹಾಕಿ,ಪಠ್ಯದಿಂದ ತೆಗೆದಿರುವ ಜಾತಿವಿನಾಶ ಚಾಪ್ಟರ್ ಸೇರಿಸಬೇಕು ಹಾಗೂ ಪಠ್ಯಪರಿಷ್ಕರಣಾ ಸಮಿತಿಯಲ್ಲಿದ್ದ ಸದಸ್ಯರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಪಾಲಿಕೆಯ ವಿರೋಧಪಕ್ಷದ ನಾಯಕ ಜೆ.ಕುಮಾರ್,ಇಂದು ಇಡೀ ವಿಶ್ವವೇ ಭಾರತದ ಸಂವಿಧಾನವನ್ನು ಶ್ರೇಷ್ಠ ಸಂವಿಧಾನ ಎಂದು ಹೆಸರಿಸಿದೆ. ಅಲ್ಲದೆ ಅಂಬೇಡ್ಕರ್ ಅವರನ್ನು ಜ್ಞಾನದ ಸಂಕೇತ ಎಂದು ಬಣ್ಣಿಸಿ, ಅವರ ಹುಟ್ಟು ಹಬ್ಬವನ್ನು ವಿಶ್ವದ ಜ್ಞಾನದ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂತಹ ವೇಳೆಯಲ್ಲಿ ತುಮಕೂರು ವಿವಿ ಪಠ್ಯಪರಿಷ್ಕರಣಾ ಸಮಿತಿ ಜಾತಿ ವಿನಾಶ ಎಂಬ ಪಾಠವನ್ನು ಕೈಬಿಟ್ಟು, ಅದರ ಬದಲಿಗೆ ಅಸ್ಪೃಷ್ಯತೆ ಕುರಿತ ಪಠ್ಯದಲ್ಲಿಯೇ ಅಂಬೇಡ್ಕರ್ ಅವರ ಭಾಷಣವನ್ನು ಬಿಟ್ಟು, ಬ್ಯಾನರ್ಜಿ ಮತ್ತು ಠಾಕೂರ್ ಎಂಬುವವರ ಭಾಷಣವನ್ನು ಸೇರಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ತುಮಕೂರು ವಿವಿಯವರು ಪಠ್ಯದಿಂದ ಅಂಬೇಡ್ಕರ್ ಅವರ ಜಾತಿವಿನಾಶ ಚಾಪ್ಟರ್ ಕೈಬಿಡಲು ಕಾರಣ ಎನು ಎಂಬುದನ್ನು ಸ್ಪಷ್ಟಪಡಿಸಬೇಕು ಹಾಗೂ ಪರಿಷ್ಕರಣೆ ವೇಳೆ ಇದ್ದ ಬಿಓಎಸ್ ಕಮಿಟಿಯ ಸದಸ್ಯರನ್ನು ವಜಾಗೊಳಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಅಂಬೇಡ್ಕರ್ ಅನುಯಾಯಿಗಳು ಸೇರಿ ಉಗ್ರ ಹೋರಾಟ ಕೈಗೊಳ್ಳಲಿದ್ದೇವೆ ಎಂದು ಎಚ್ಚರಿಸಿದರು.

ಅತಿಥಿ ಉಪನ್ಯಾಸಕ ಹೆತ್ತೇನಹಳ್ಳಿ ಮಂಜುನಾಥ್ ಮಾತನಾಡಿ, ಅಂಬೇಡ್ಕರ್ ಅವರನ್ನು ಯುವಜನತೆಯಿಂದ ಮರೆ ಮಾಚುವ ಉದ್ದೇಶದಿಂದ ತುಮಕೂರು ವಿವಿಯ ಸಿಂಡಿಕೇಟ್ ಮತ್ತು ಆಕಾಡೆಮಿಕ್ ಕೌನ್ಸಿಲ್ ಇಂತಹ ದುಷ್ಕøತ್ಯವನ್ನು ಎಸಗಿದೆ. ಇದನ್ನು ಕ್ಷಮಿಸಲು ಸಾಧ್ಯವಿಲ್ಲ. ಕೂಡಲೇ ಬಿಓಎಸ್ ಕಮಿಟಿಯ ಸದಸ್ಯರನ್ನು ವಜಾಗೊಳಿಸಬೇಕು ಹಾಗೂ ಪಠ್ಯದಲ್ಲಿ ಅಂಬೇಡ್ಕರ್ ಅವರ ಜಾತಿವಿನಾಶ ವಿಷಯ ಸೇರಿಸುವುದರ ಜೊತೆಗೆ,ಬದಲಿ ಪಠ್ಯದಲ್ಲಿರುವ ಅಸ್ಪೃಷ್ಯತೆ ವಿಷಯದಲ್ಲಿ ಅಂಬೇಡ್ಕರ್ ಮಂಡಿಸಿರುವ ವಾದವನ್ನು ಮಕ್ಕಳು ಓದಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು.

ತುಮಕೂರು ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಧನಿಯಕುಮಾರ್ ಮಾತನಾಡಿ,ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಈ ದೇಶ ಕಂಡ ಮಹಾ ಜ್ಞಾನಿ. ಜಾತಿ ಹೇಗೆ ತಳಸಮುದಾಯಗಳನ್ನು ಹಾಳು ಮಾಡುತ್ತಿದೆ. ಜಾತಿಯತೆ ತೊಲಗದೆ ಈ ದೇಶದಲ್ಲಿ ಸಮಾನತೆ ಸಾಧ್ಯವಿಲ್ಲ ಎಂಬುದನ್ನು ಯುವಜನತೆಗೆ ತಿಳಿಸುವ ಕೆಲಸವನ್ನು ಜಾತಿವಿನಾಶ ಪ್ರಬಂಧದ ಮೂಲಕ ಮಾಡಿದ್ದರು.ಇಂದಿನ ಯುವಜನತೆಗೆ ಅದು ಅತ್ಯಂತ ಅಗತ್ಯವಾದ ಪಠ್ಯವಾಗಿದೆ. ಆದರೆ ತುಮಕೂರು ವಿವಿಯವರು ಉದ್ದೇಶಪೂರ್ವಕವಾಗಿಯೇ ಪಠ್ಯವನ್ನು ಬಿಟ್ಟು, ಅಂಬೇಡ್ಕರ್ ಅವರನ್ನು ಯುವಜನರಿಂದ ದೂರ ಇಡುವ ಪ್ರಯತ್ನ ನಡಸಿರುವುದು ಅಕ್ಷಮ್ಯ ಅಪರಾದ. ಹಾಗಾಗಿ ಅಂಬೇಡ್ಕರ್ ಅನುಯಾಯಿಗಳ ಈ ಹೋರಾಟಕ್ಕೆ ಹಿಂದುಳಿದ ವರ್ಗಗಳ ಸಮಿತಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಯುವ ಮುಖಂಡ ಬೆಳ್ಳಿ ಲೋಕೇಶ್ ಮಾತನಾಡಿ,ಭಾರತ ಒಂದು ಜಾತ್ಯಾತೀತ ರಾಷ್ಟ್ರ. ನೂರಾರು ಜಾತಿ, ಭಾಷೆ, ಸಂಸ್ಕøತಿ ಹೊಂದಿರುವ ಭಾರತಕ್ಕೆ ಸಂವಿಧಾನ ನೀಡುವ ಮೂಲಕ ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಅಂತಹ ಮಹಾನ್ ವ್ಯಕ್ತಿ ಬರೆದ ಪಠ್ಯವನ್ನು ತೆಗೆಯುವ ಮೂಲಕ ಅಪಮಾನ ವೆಸಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು ಹಾಗೂ ಇದನ್ನು ಮಾಡಿದ ಬಿಓಎಸ್ ಕಮಿಟಿಯ ಸದಸ್ಯರನ್ನು ವಜಾಗೊಳಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ವಿವಿಯ ಎಲ್ಲಾ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಪ್ರತಿಭಟನಾಕಾರರ ಪ್ರಶ್ನೆಗಳಿಗೆ ಉತ್ತರಿಸಿದ ತುಮಕೂರು ವಿವಿ ಪ್ರಭಾರ ಕುಲಪತಿ ಪ್ರೊ.ಕೇಶವ್,ಹೊಸ ಶಿಕ್ಷಣ ನೀತಿ-2020 ಅನ್ವಯ ರಾಜ್ಯಮಟ್ಟದಲ್ಲಿರುವ ವಿವಿ ಪಠ್ಯ ಪರೀಷ್ಕರಣಾ ಸಮಿತಿ ನೀಡಿದ ಶಿಫಾರಸ್ಸಿನ ಮೇರೆಗೆ ತುಮಕೂರು ವಿವಿಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಸದಸ್ಯರು ಈ ಬದಲಾವಣೆ ಮಾಡಿದ್ದಾರೆ. ಮಕ್ಕಳಿಗೆ ಜಾತಿವಿನಾಶ ಪಠ್ಯ ತೆಗೆದಿದ್ದು ನಿಜಕ್ಕೂ ಅಕ್ಷಮ್ಯ.ನಮಗೆ ಒಂದು ತಿಂಗಳ ಕಾಲಾವಕಾಶ ನೀಡಿದರೆ ಆಗಿರುವ ಪ್ರಮಾದವನ್ನು ಸರಿಪಡಿಸಿ, ಈ ಹಿಂದಿನ ರೀತಿಯಲ್ಲಿಯೇ 2ನೇ ಸೆಮಿಸ್ಟರ್ ಮಕ್ಕಳಿಗೆ ಪಠ್ಯಗಳನ್ನು ಒದಗಿಸಲಾಗುವುದು ಎಂದು ಲಿಖಿತ ರೂಪದಲ್ಲಿ ಭರವಸೆ ನೀಡಿದರು.

ಕುಲಪತಿಗಳ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆದ ಅಂಬೇಡ್ಕರ್ ಅನುಯಾಯಿಗಳು, ಮುಂದಿನ ಒಂದು ತಿಂಗಳಲ್ಲಿ ಕುಲಪತಿಗಳು ಒಪ್ಪಿರುವ ನಡೆದುಕೊಳ್ಳದಿದ್ದರೆ ವಿವಿಗೆ ಮುತ್ತಿಗೆ ಹಾಕಿ ಹೋರಾಟ ನಡೆಸುವುದು ಅನಿವಾರ್ಯ ಎಂದು ಪ್ರತಿಭಟನಾ ನಿರತರ ತಿಳಿಸಿದರು.

ಈ ವೇಳೆ ದಲಿತ ಮುಖಂಡರಾದ ಕೊಟ್ಟ ಶಂಕರ್,ಬಂಡೆಕುಮಾರ್,ಮರಳೂರು ರಾಮಣ್ಣ, ಶ್ರೀನಿವಾಸ್,ರಮೇಶ್ ಇನ್ನಿತರರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X