Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರಿ: ಆಯುಧಗಳೊಂದಿಗೆ ಕೇಕ್...

ಪಡುಬಿದ್ರಿ: ಆಯುಧಗಳೊಂದಿಗೆ ಕೇಕ್ ಕತ್ತರಿಸಿದ ಆರೋಪ; ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Jun 2022 12:19 PM IST
share
ಪಡುಬಿದ್ರಿ: ಆಯುಧಗಳೊಂದಿಗೆ ಕೇಕ್ ಕತ್ತರಿಸಿದ ಆರೋಪ; ಮೂವರ ಬಂಧನ

ಪಡುಬಿದ್ರಿ: ಮಾರಕ ಆಯುಧಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಸಾರ್ವಜನಿಕರಲ್ಲಿ ಭಯ ಭೀತಿ ಹುಟ್ಟಿಸಿರುವ ಆರೋಪದಡಿ ಮೂವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ 

ಪಡುಬಿದ್ರೆ ಕಾರ್ಕಳ ರಸ್ತೆಯ ಜಿತೆಂದ್ರ  ಶೆಟ್ಟಿ(52), ಪಡುಬಿದ್ರೆ ಬೀಚ್ ರಸ್ತೆಯ ಗಣೇಶ ಪೂಜಾರಿ (50), ಫಲಿಮಾರು ಅವರಾಲುವಿನ ಶರತ್ ಶೆಟ್ಟಿ ಯಾನೆ ಪುಟ್ಟ,(26) ಬಂಧಿತ ಆರೋಪಿಗಳು. ಉಳಿದ ಆರೋಪಿಗಳಾದ ಫಲಿಮಾರು ಹೊಸಾಗ್ಮೆ ಸೂರಜ್ ಸಾಲ್ಯಾನ್(25), ಪಡುಬಿದ್ರೆಯ ತನುಜ್ ಎಂ ಕರ್ಕೇರ, (25), ಅನ್ವೀಶ್ (23), ಎಲ್ಲೂರು ಕೆಮುಂಡೇಲುವಿನ ನಿರಂಜನ್ ಶೆಟ್ಟಿಗಾರ್(31) ಎಂಬವರು ತಲೆಮರೆಸಿಕೊಂಡಿದ್ದಾರೆ.

ಪಾದೆಬೆಟ್ಟು ಗ್ರಾಮದ ಪಡುಬಿದ್ರಿ ಕಾರ್ಕಳ ರಸ್ತೆಯ ಆಶಾ ಸದನ  ನಿವಾಸಿ ಜೀತು ಯಾನೆ ಜಿತೇಂದ್ರ ಶೆಟ್ಟಿ ಎಂಬಾತ  ಈ ಹಿಂದೆ ಪಡುಬಿದ್ರಿ ಠಾಣೆಯ  ಪ್ರಕರಣವೊಂದರ  ಆರೋಪಿಯಾಗಿದ್ದು, ಕೆಲವು ಹಿಂಬಾಲಕರನ್ನು ಜೊತೆಯಲ್ಲಿ ಸೇರಿಸಿಕೊಂಡು ರೌಡಿ ಚಟುವಟಿಕೆಯನ್ನು ನಡೆಸುತ್ತಿದ್ದರೆನ್ನಲಾಗಿದೆ 

ಕಳೆದ ಎರಡು ದಿನಗಳಿಂದ ಸ್ಥಳೀಯವಾಗಿ ಸಾಮಾಜಿಕ ಜಾಲತಾಣವಾದ ವಾಟ್ಸಪ್ ನಲ್ಲಿ ಜೀತು ಜೊತೆ ಈ ಹಿಂದೆ ಕೊಲೆಯತ್ನ ಪ್ರಕರಣದ ಆರೋಪಿಗಳಾಗಿದ್ದ ಸೂರಜ್, ತನುಜ್ , ಅನ್ವೀಶ್, ಗಣೇಶ ಪೂಜಾರಿ, ನಿರಂಜನ್ ಶೆಟ್ಟಿಗಾರ್, ಶರತ್  ಶೆಟ್ಟಿ ಒಟ್ಟಾಗಿ ನಿರಂಜನ್ ಶೆಟ್ಟಿಗಾರ್ ನ ಬರ್ತ್ ಡೇ ಸೆಲೇಬ್ರೇಷನ್ ಮಾಡುವ ಫೊಟೋ ಮತ್ತು ವೀಡಿಯೋ ವೈರಲ್ ಆಗಿತ್ತು.

ಮೇ 30 ರಂದು ರಾತ್ರಿ ಬರ್ತ್ ಡೇ ಕೇಕ್ ನ ಪಕ್ಕದಲ್ಲಿ ಒಂದು ಹರಿತವಾದ ತಲವಾರನ್ನು ಮತ್ತು ಇನ್ನೊಂದು ಪಕ್ಕದಲ್ಲಿ ಕೊಡಲಿ ರೀತಿಯ ಆಯುಧವನ್ನು ಇಟ್ಟು ಫೊಟೋ ತೆಗೆದಿರುವುದು ಮತ್ತು ವೀಡಿಯೋದಲ್ಲಿ ನಿರಂಜನ್ ಶೆಟ್ಟಿಗಾರನು ತಲವಾರಿನಿಂದ ಕೇಕ್ ಕಟ್ ಮಾಡಿ ಸಂಭ್ರಮ ಆಚರಣೆ ಮಾಡುತ್ತಿರುವುದು ಕಂಡು ಬಂದಿತ್ತು. 

ಉಳಿದವರು ಅವನ ಅಕ್ಕಪಕ್ಕದಲ್ಲಿ ನಿಂತು ಸಂಭ್ರಮ ಆಚರಣೆ ಮಾಡುತ್ತಿರುವುದು ಕಂಡು ಬಂದಿದೆ.  ಫೊಟೋ ಮತ್ತು ವೀಡಿಯೋ ಸ್ಥಳೀಯವಾಗಿ ವ್ಯಾಪಕ  ಚರ್ಚೆಗೆ ಗ್ರಾಸವಾಗಿದ್ದು,  ವೀಡಿಯೋ ಮತ್ತು  ಫೊಟೋವನ್ನು ಜೀತು ಶೆಟ್ಟಿ ಮತ್ತವರ ಜೊತೆಯಲ್ಲಿದ್ದವರು ಮಾರಕ ಆಯುಧಗಳನ್ನು ಸ್ವಾಧೀನದಲ್ಲಿ ಇಟ್ಟುಕೊಂಡು ಮತ್ತು ಸಾರ್ವಜನಿಕರಿಗೆ  ಭಯಭೀತಿ ಹುಟ್ಟಿಸುವ  ಮತ್ತು ಪ್ರಚೋದನೆ ನೀಡುವ ಉದ್ದೇಶದಿಂದ ಆಯುಧಗಳ ಪ್ರದರ್ಶನವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಭಯಬೀತಿ ಉಂಟು ಮಾಡುವ ಕೃತ್ಯ ಎಸಗಿರುವುದಾಗಿ ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಜಿತೇಂದ್ರ ಶೆಟ್ಟಿಯ ಮನೆಯನ್ನು ಶೋಧನೆ ನಡೆಸಿ ಮಾರಕ ಆಯುಧಗಳಾದ ಕಬ್ಬಿಣದ ಮಚ್ಚು, ಕಬ್ಬಿಣದ ತಲವಾರ್, ಮತ್ತು ಕಬ್ಬಿಣದ ಕೊಡಲಿಯನ್ನು ಸ್ವಾಧಿನಪಡಿಸಿಕೊಂಡು, ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X