Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು; ಅಕ್ರಮ ಕಲ್ಲು ಗಣಿಗಾರಿಕೆಗೆ...

ಬೈಂದೂರು; ಅಕ್ರಮ ಕಲ್ಲು ಗಣಿಗಾರಿಕೆಗೆ ಅಧಿಕಾರಿಗಳ ದಾಳಿ: 80 ಸಾವಿರ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ4 Jun 2022 8:24 PM IST
share
ಬೈಂದೂರು; ಅಕ್ರಮ ಕಲ್ಲು ಗಣಿಗಾರಿಕೆಗೆ ಅಧಿಕಾರಿಗಳ ದಾಳಿ: 80 ಸಾವಿರ ರೂ. ದಂಡ

ಬೈಂದೂರು : ಆಲೂರು ಸರಕಾರಿ ಜಾಗದಲ್ಲಿನ ಅಕ್ರಮ ಕೆಂಪುಕಲ್ಲು ಗಣಿಗಾರಿಕೆಗೆ ಆರೋಪದಲ್ಲಿ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ನಡೆಸಿದ್ದು, ಗಣಿ ಮಾಲಕರಿಗೆ 80 ಸಾವಿರ ರೂ. ದಂಡ ವಿಧಿಸಿದೆ.

ಖಚಿತ ಮಾಹಿತಿಯಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಸಂಧ್ಯಾ ಕುಮಾರಿ, ಕಂದಾಯ ಇಲಾಖೆ ವಂಡ್ಸೆ ವಲಯ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗ್ರಾಮ ಕರಣಿಕ ಉದಯ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿರುವ ಕಲ್ಲುಕ್ವಾರಿ ಹೊಂಡವನ್ನು ಮುಚ್ಚಿ ಶಾಲಾ ಮಕ್ಕಳು ತಿರುಗಾಟಕ್ಕೆ ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಆಲೂರು ಗ್ರಾಮ ಐದು ಸೆಂಟ್ಸ್ ಪರಿಸರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸರಕಾರಿ ಜಾಗವಿದ್ದು, ಗಣಿ ಇಲಾಖೆ ಪರವಾನಿಗೆ ಕೂಡಾ ಪಡೆಯದೆ ಕುಮ್ಕಿಹಕ್ಕಿನ ಜಾಗದಲ್ಲಿ ಎರಡು ಕಲ್ಲುಕೊರೆಯುವ ಯಂತ್ರ, ಒಂದು ಕಲ್ಲೆತ್ತುವ ಯಂತ್ರದ ಮೂಲಕ ವ್ಯಾಪಕವಾಗಿ ಕೆಂಪುಕಲ್ಲು ಕಿತ್ತು ಹೊಂಡ ಹಾಗೆ ಬಿಡಲಾಗಿತ್ತು. ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು, ಹೊಂಡ ಮುಚ್ಚಿ ಕಲ್ಲು ಕೀಳದಂತೆ ಖಡಕ್ ಎಚ್ಚರಿಕೆ ನೀಡಿದರು.  

ಇಲ್ಲಿನ ಭೂಮಿ ಹಕ್ಕು ರದ್ದತಿಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ನಂತರ ಎಲ್ಲಾ ಸರಕಾರಿ ಜಾಗಕ್ಕೆ ಬೇಲಿ ನಿರ್ಮಿಸಿ ಕಲ್ಲುಕ್ವಾರಿಗೆ ಕಡಿವಾಣ ಹಾಕಲಾಗು ವುದು. ಅತಿಕ್ರಮ ಕಲ್ಲುಗಣಿ ಮತ್ತೆ ಆರಂಭಿಸಿದರೆ, ಅವರ ವಿರುದ್ಧ ನ್ಯಾಯಾ ಲಯದಲ್ಲಿ ಖಾಸಗಿ ದೂರು ದಾಖಲಿಸಿ, ದುಪ್ಪಟ್ಟು ದಂಡ ವಸೂಲಿ ಮಾಡಲಾ ಗುವುದು ಎಂದು ಕಂದಾಯ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಅಧಿಕಾರಿಗಳ ವಿರುದ್ಧ ಅಸಮಾಧಾನ

ಗಣಿ ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆ ದಂಡ ಹಾಕಿದ್ದು, ಸ್ಥಳೀಯರ ಅಹವಾಲು ಆಲಿಸದೆ, ಯಂತ್ರಗಳ ವಶಪಡಿಸಿಕೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.

ತಹಸೀಲ್ದಾರ್ ಸ್ಥಳಕ್ಕೆ ಬಂದಾಗ ಕಲ್ಲು ಕರೆಯುವ ಹಾಗೂ ಕಲ್ಲೆತ್ತುವ ಯಂತ್ರ ಗಳ ವಶಪಡಿಸಿಕೊಳ್ಳುವಂತೆ ಸೂಚಿಸಿದ್ದರೂ, ಗಣಿ ಇಲಾಖೆ ಅಧಿಕಾರಿಗಳು ಯಂತ್ರ ವಶಪಡಿಸಿಕೊಳ್ಳಲು ಆಗಲ್ಲ ಎಂದು ಹೇಳಿ ಜಾರಿಕೊಂಡಿದ್ದಾರೆ. ಕಲ್ಲು ಗಣಿಗಾರಿಕೆ ಬಳಿಯೇ ಕೃಷಿ ಭೂಮಿಗೆ ಗೊಬ್ಬರ, ಸೊಪ್ಪು ತಲೆಹೊರೆಯಲ್ಲಿ ಹೋಗಬೇಕು ಮತ್ತು ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ಶಾಲೆಗೆ ತೆರಳುತ್ತಾರೆ. ರಸ್ತೆಯಲ್ಲೇ ಕಲ್ಲುಗಣಿ ನಡೆಯುತ್ತಿದ್ದರೂ ನಮ್ಮ ಅಹವಾಲು ಕೇಳಲಿಲ್ಲ ಎಂದು ಸ್ಥಳೀಯ ಗ್ರಾಮಸ್ಥರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X