Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಪ್ರತಿ 36 ಶಿಶುಗಳಲ್ಲಿ ಒಂದು...

ಭಾರತದಲ್ಲಿ ಪ್ರತಿ 36 ಶಿಶುಗಳಲ್ಲಿ ಒಂದು ತನ್ನ ಮೊದಲ ಹುಟ್ಟುಹಬ್ಬಕ್ಕೆ ಮುನ್ನವೇ ಸಾಯುತ್ತಿದೆ: ವರದಿ

ವಾರ್ತಾಭಾರತಿವಾರ್ತಾಭಾರತಿ4 Jun 2022 9:37 PM IST
share
ಭಾರತದಲ್ಲಿ ಪ್ರತಿ 36 ಶಿಶುಗಳಲ್ಲಿ ಒಂದು ತನ್ನ ಮೊದಲ ಹುಟ್ಟುಹಬ್ಬಕ್ಕೆ ಮುನ್ನವೇ ಸಾಯುತ್ತಿದೆ: ವರದಿ

ಹೊಸದಿಲ್ಲಿ,ಜೂ.4: ಕಳೆದ ಕೆಲವು ದಶಕಗಳಲ್ಲಿ ಶಿಶು ಮರಣ ದರ (ಐಎಂಆರ್)ದಲ್ಲಿ ಇಳಿಕೆಯಾಗಿದ್ದರೂ ಭಾರತದಲ್ಲಿ ಪ್ರತಿ 36 ಶಿಶುಗಳ ಪೈಕಿ ಒಂದು ತನ್ನ ಮೊದಲ ಹುಟ್ಟುಹಬ್ಬಕ್ಕೆ ಮುನ್ನವೇ ಸಾವನ್ನಪ್ಪುತ್ತಿದೆ ಎನ್ನುವುದನ್ನು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ (ಆರ್‌ಜಿಐ) ಬಿಡುಗಡೆಗೊಳಿಸಿರುವ ದತ್ತಾಂಶಗಳು ತೋರಿಸಿವೆ.

1971ಕ್ಕೆ ಹೋಲಿಸಿದರೆ ಭಾರತದಲ್ಲಿ ಈಗಿನ ಐಎಂಆರ್ ಆಗಿನ ದರದ ಕಾಲುಭಾಗಕ್ಕಿಂತಲೂ ಕಡಿಮೆಯಿದೆ. 1971ರಲ್ಲಿ ಪ್ರತಿ ಸಾವಿರ ಸಜೀವ ಜನನಗಳಲ್ಲಿ 129 ಶಿಶುಗಳು ಒಂದು ವರ್ಷ ತುಂಬುವ ಮೊದಲೇ ಮೃತಪಟ್ಟಿದ್ದರೆ 2020ನೇ ಸಾಲಿನಲ್ಲಿ ಈ ಪ್ರಮಾಣ 28ಕ್ಕೆ ಇಳಿದಿದೆ.

ಕಳೆದ 10 ವರ್ಷಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ ಐಎಂಆರ್ 44ರಿಂದ 28ಕ್ಕೆ ತಗ್ಗಿದೆ,ಅಂದರೆ ಸುಮಾರು ಶೇ.36ರಷ್ಟು ಇಳಿಕೆಯನ್ನು ಕಂಡಿದೆ.

ಆರ್‌ಜಿಐ ದತ್ತಾಂಶಗಳಂತೆ ಈ ಅವಧಿಯಲ್ಲಿ ಎಂಐಆರ್ ಗ್ರಾಮೀಣ ಪ್ರದೇಶಗಳಲ್ಲಿ 48ರಿಂದ 31ಕ್ಕೆ ಮತ್ತು ನಗರ ಪ್ರದೇಶಗಳಲ್ಲಿ 29ರಿಂದ 19ಕ್ಕೆ ಇಳಿಕೆಯಾಗಿದೆ,ಅಂದರೆ ಅನುಕ್ರಮವಾಗಿ ಸುಮಾರು ಶೇ.35 ಮತ್ತು ಶೇ.34ರಷ್ಟು ಕಡಿಮೆಯಾಗಿದೆ.

ಆದಾಗ್ಯೂ ಕಳೆದ ಕೆಲವು ದಶಕಗಳಲ್ಲಿ ಐಎಂಆರ್ ಇಳಿಕೆಯಾಗಿದ್ದರೂ ರಾಷ್ಟ್ರಮಟ್ಟದಲ್ಲಿ (ನಗರ ಮತ್ತು ಗ್ರಾಮೀಣ ಭೇದವನ್ನು ಪರಿಗಣಿಸದೆ) ಪ್ರತಿ 36 ಶಿಶುಗಳ ಪೈಕಿ ಒಂದು ತನ್ನ ಮೊದಲ ಹುಟ್ಟುಹಬ್ಬಕ್ಕೆ ಮುನ್ನವೇ ಸಾವನ್ನಪ್ಪುತ್ತಿದೆ ಎಂದು ದತ್ತಾಂಶಗಳು ಸೂಚಿಸಿವೆ.

2020ರಲ್ಲಿ ಗರಿಷ್ಠ ಐಎಂಆರ್ (43) ಮಧ್ಯಪ್ರದೇಶದಲ್ಲಿ ಮತ್ತು ಕನಿಷ್ಠ ಐಎಂಆರ್ (3) ಮಿಜೋರಾಮ್‌ನಲ್ಲಿ ವರದಿಯಾಗಿವೆ.

ಕಳೆದ ಐದು ದಶಕಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ ಜನನ ದರ ಗಣನೀಯವಾಗಿ ಕುಸಿದಿದೆ. 1971ರಲ್ಲಿ 36.9 ಇದ್ದ ಅದು 2020ರಲ್ಲಿ 19.5ಕ್ಕೆ ಇಳಿದಿದೆ.

ಈ ಅವಧಿಯಲ್ಲಿ ಗ್ರಾಮೀಣ-ನಗರ ಅಂತರವೂ ಕಡಿಮೆಯಾಗಿದೆ. ಆದಾಗ್ಯೂ ಕಳೆದ ಐದು ದಶಕಗಳಲ್ಲಿ ನಗರ ಪ್ರದೇಶಗಳಿಗೆ ಹೋಲಿಸಿದರೆ ಜನನ ದರವು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮಟ್ಟದಲ್ಲಿಯೇ ಮುಂದುವರಿದಿದೆ.

 ಕಳೆದೊಂದು ದಶಕದಲ್ಲಿ ಜನನ ದರವು ಸುಮಾರು ಶೇ.11ರಷ್ಟು ಕಡಿಮೆಯಾಗಿದೆ. 2011ರಲ್ಲಿ ಶೇ.21.8ರಷ್ಟಿದ್ದ ಅದು 2020ರಲ್ಲಿ ಶೇ.19.5ಕ್ಕೆ ಇಳಿದಿದೆ. ಈ ಅವಧಿಯಲ್ಲಿ ಜನನ ದರವು ಗ್ರಾಮೀಣ ಪ್ರದೇಶಗಳಲ್ಲಿ ಶೇ.23.3ರಿಂದ ಶೇ.21.1ಕ್ಕೆ (ಸುಮಾರು ಶೇ.9ರಷ್ಟು ಇಳಿಕೆ) ಮತ್ತು ನಗರ ಪ್ರದೇಶಗಳಲ್ಲಿ ಶೇ.17.6ರಿಂದ ಶೇ.16.1ಕ್ಕೆ (ಸುಮಾರು ಶೇ.9ರಷ್ಟು ಇಳಿಕೆ) ತಗ್ಗಿದೆ.

ಶಿಶು ಮರಣ ದರವು ಒಂದು ದೇಶ ಅಥವಾ ಒಂದು ಪ್ರದೇಶದ ಒಟ್ಟಾರೆ ಆರೋಗ್ಯ ಸನ್ನಿವೇಶದ ಕಚ್ಚಾ ಸೂಚಕವಾಗಿ ವ್ಯಾಪಕವಾಗಿ ಅಂಗೀಕರಿಸಲ್ಪಟ್ಟಿದ್ದು,ನಿರ್ದಿಷ್ಟ ಅವಧಿಯಲ್ಲಿ ಮತ್ತು ನಿರ್ದಿಷ್ಟ ಪ್ರದೇಶದಲ್ಲಿ ಪ್ರತಿ ಸಾವಿರ ಸಜೀವ ಜನನಗಳಲ್ಲಿ ಒಂದು ವರ್ಷಕ್ಕೂ ಕಡಿಮೆ ಪ್ರಾಯದ ಶಿಶುಗಳ ಸಾವುಗಳ ಸಂಖ್ಯೆ ಎಂದು ವ್ಯಾಖ್ಯಾನಿಸಲಾಗಿದೆ.

ಜನನ ದರವು ಜನಸಂಖ್ಯೆಯ ಫಲವತ್ತತೆಯ ಮಾಪಕ ಮತ್ತು ಜನಸಂಖ್ಯಾ ಬೆಳವಣಿಗೆಯನ್ನು ಗುರುತಿಸುವಲ್ಲಿ ನಿರ್ಣಾಯಕವಾಗಿದೆ. ಅದು ನಿರ್ದಿಷ್ಟ ಪ್ರದೇಶದಲ್ಲಿ ಮತ್ತು ವರ್ಷದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ ಸಜೀವ ಜನನಗಳ ಸಂಖ್ಯೆಯನ್ನು ತಿಳಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X