Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2 ವರ್ಷದ ಬಳಿಕ ಸೌದಿಗೆ ಆಗಮಿಸಿದ ವಿದೇಶಿ...

2 ವರ್ಷದ ಬಳಿಕ ಸೌದಿಗೆ ಆಗಮಿಸಿದ ವಿದೇಶಿ ಹಜ್ ಯಾತ್ರಿಕರ ಗುಂಪು

ವಾರ್ತಾಭಾರತಿವಾರ್ತಾಭಾರತಿ4 Jun 2022 10:51 PM IST
share
2 ವರ್ಷದ ಬಳಿಕ ಸೌದಿಗೆ ಆಗಮಿಸಿದ ವಿದೇಶಿ ಹಜ್ ಯಾತ್ರಿಕರ ಗುಂಪು

 ರಿಯಾದ್, ಜೂ.4: ಇಂಡೋನೇಶ್ಯಾದ ಹಜ್ ಯಾತ್ರಿಕರ ತಂಡವೊಂದು ಮದೀನಾ ತಲುಪಿದ್ದು ಅಲ್ಲಿಂದ ಅವರು ಪವಿತ್ರ ನಗರ ಮಕ್ಕಾಕ್ಕೆ ಪ್ರಯಾಣಿಸಲಿದ್ದಾರೆ. ಕೊರೋನ ಸಾಂಕ್ರಾಮಿಕದ ಕಾರಣದಿಂದ, 2 ವರ್ಷದ ಬಳಿಕ ವಿದೇಶಿ ಹಜ್ ಯಾತ್ರಿಕರ ಪ್ರಥಮ ತಂಡ ದೇಶಕ್ಕೆ ಆಗಮಿಸಿದೆ ಎಂದು ಸರಕಾರಿ ಸ್ವಾಮ್ಯದ ಸುದ್ಧಿಮಾಧ್ಯಮ ವರದಿ ಮಾಡಿದೆ.

 ಈ ವರ್ಷ, ವಿದೇಶಿಯರು ಸೇರಿದಂತೆ 1 ಮಿಲಿಯನ್ ಜನರಿಗೆ ಹಜ್ ಯಾತ್ರೆ ಕೈಗೊಳ್ಳಲು ಅವಕಾಶ ನೀಡುವುದಾಗಿ ಸೌದಿ ಅರೆಬಿಯಾ ಕಳೆದ ತಿಂಗಳು ಘೋಷಿಸಿದೆ. ಕೊರೋನ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020ರಲ್ಲಿ 1,000ಕ್ಕೂ ಕಡಿಮೆ ಯಾತ್ರಿಕರಿಗೆ ಮತ್ತು 2021ರಲ್ಲಿ ಸುಮಾರು 60,000 ಯಾತ್ರಿಕರಿಗೆ ಅವಕಾಶ ನೀಡಲಾಗಿತ್ತು.

ಈ ವರ್ಷದ ಹಜ್‌ಗೆ ಪ್ರಥಮ ಯಾತ್ರಿಗಳ ತಂಡ ಇಂಡೋನೇಶ್ಯಾದಿಂದ ಆಗಮಿಸಿದೆ. ಮಲೇಶ್ಯಾ ಮತ್ತು ಭಾರತದಿಂದಲೂ ವಿಮಾನಗಳು ಆಗಮಿಸಲಿದೆ. ಸಾಂಕ್ರಾಮಿಕದಿಂದಾಗಿ 2 ವರ್ಷದ ಅಡಚಣೆಯ ಬಳಿಕ ವಿದೇಶದಿಂದ ಆಗಮಿಸುತ್ತಿರುವ ಅತಿಥಿಗಳನ್ನು ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ಅವರಿಗೆ ಸರ್ವ ವ್ಯವಸ್ಥೆಗಳನ್ನೂ ಮಾಡಲು ಸನ್ನದ್ಧರಾಗಿದ್ದೇವೆ ಎಂದು ಸೌದಿಯ ಹಜ್ ಸಚಿವ ಮುಹಮ್ಮದ್ ಅಲ್ ಬಿಜಾವಿಯವರನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ ಅಲ್- ಎಖ್‌ಬರಿಯಾ ಚಾನೆಲ್ ವರದಿ ಮಾಡಿದೆ.

ಕೊರೋನ ಸಾಂಕ್ರಾಮಿಕದ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲು, ಅಂದರೆ 2019ರ ಹಜ್ ಯಾತ್ರೆಯಲ್ಲಿ ಸುಮಾರು 2.5 ಮಿಲಿಯನ್ ಜನತೆ ಪಾಲ್ಗೊಂಡಿದ್ದರು. ಮುಸ್ಲಿಮ್ ಯಾತ್ರಾರ್ಥಿಗಳಿಂದ ಸೌದಿಗೆ ವಾರ್ಷಿಕ ಸುಮಾರು 12 ಬಿಲಿಯನ್ ಡಾಲರ್ ಆದಾಯ ಸಂಗ್ರಹವಾಗುತ್ತದೆ.

 ಈ ವರ್ಷದ ಹಜ್ ಯಾತ್ರೆ ಲಸಿಕೆ ಪಡೆದ, 65 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದೆ. ಸೌದಿ ಅರೆಬಿಯಾದ ಹೊರಗಿನಿಂದ ಆಗಮಿಸುವವರು ಪ್ರಯಾಣಕ್ಕೆ 72 ಗಂಟೆ ಮೊದಲು ನಡೆಸಿದ ಕೋವಿಡ್-19 ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಹಜ್ ವೀಸಾದ ಅರ್ಜಿಯ ಜತೆ ಲಗತ್ತಿಸಬೇಕು ಎಂದು ಹಜ್ ಇಲಾಖೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X