Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದಲ್ಲಿ ಯೋಜಿತ ಹತ್ಯೆಗಳನ್ನು...

ಕಾಶ್ಮೀರದಲ್ಲಿ ಯೋಜಿತ ಹತ್ಯೆಗಳನ್ನು ಖಂಡಿಸಿದ ಪ್ರಧಾನ ಮುಫ್ತಿ : ಶಾಂತಿ, ಸಹೋದರತೆ ಕಾಪಾಡುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ4 Jun 2022 11:26 PM IST
share
ಕಾಶ್ಮೀರದಲ್ಲಿ ಯೋಜಿತ ಹತ್ಯೆಗಳನ್ನು ಖಂಡಿಸಿದ ಪ್ರಧಾನ ಮುಫ್ತಿ : ಶಾಂತಿ, ಸಹೋದರತೆ ಕಾಪಾಡುವಂತೆ ಮನವಿ

ಶ್ರೀನಗರ, ಜೂ.4: ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಯೋಜಿತ ಹತ್ಯೆಗಳು ನಡೆದಿರುವುದನ್ನು ಕಾಶ್ಮೀರದ ಪ್ರಧಾನ ಮುಫ್ತಿ ನಸೀರ್ ಉಲ್ ಇಸ್ಲಾಂ ಅವರು ಬಲವಾಗಿ ಖಂಡಿಸಿದ್ದಾರೆ. ಇಂತಹ ಹೇಯ ಅಪರಾಧಗಳ ಬಗ್ಗೆ ತನಿಖೆಯನ್ನು ನಡೆಸುವಂತೆಯೂ ಅವರು ಆಗ್ರಹಿಸಿದ್ದಾರೆ. ಪ್ರತಿಯೊಂದು ಧರ್ಮವೂ ಪ್ರತಿಯೊಬ್ಬ ಮಾನವನ ಸುರಕ್ಷತೆಯನ್ನು ಪ್ರತಿಪಾದಿಸುತ್ತಿದ್ದು, ಸಮುದಾಯಗಳ ನಡುವೆ ಭ್ರಾತೃತ್ವವನ್ನು ಕಾಪಾಡಿಕೊಳ್ಳುವಂತೆ ಜನತೆಗೆ ಅವರು ಮನವಿ ಮಾಡಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ ನಸೀರ್ ಉಲ್ ಇಸ್ಲಾಂ ಅವರು, ಕಾಶ್ಮೀರದಲ್ಲಿ ಮಾನವರ ರಕ್ತ ಹಾಗೂ ಮಾನವೀಯತೆ ಅತ್ಯಂತ ಅಗ್ಗವಾಗಿ ಬಿಟ್ಟಿದೆ ಎಂದವರು ವಿಷಾದಿಸಿದರು.

‘‘ಇಸ್ಲಾಂ ಸೇರಿದಂತೆ ಪ್ರತಿಯೊಂದು ಧರ್ಮವು ಪ್ರತಿಯೊಬ್ಬ ಮಾನವನ ಪ್ರಾಣದ ಸುರಕ್ಷತೆಗೆ ಮಹತ್ವವನ್ನು ನೀಡುತ್ತದೆ. ಸಮಸ್ಯೆಯೇನಾದರೂ ಇದ್ದಲ್ಲಿ ಅದನ್ನು ಬಗೆಹರಿಸಬೇಕಾಗಿದೆ. ಆದರೆ ರಕ್ತವನ್ನು ಚೆಲ್ಲುವ ಮೂಲಕ ಪರಿಹಾರವನ್ನು ಹುಡುಕುವುದು ಮಾನವತೆಗೆ ವಿರುದ್ಧವಾಗಿದೆ’’ ನಸೀರ್ ಉಲ್ ಇಸ್ಲಾಂ ಹೇಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ದುಡಿಯುವ ವ್ಯಕ್ತಿಗಳ ಭದ್ರತೆಯು ಸ್ಥಳೀಯ ನಿವಾಸಿಗಳ ಹೊಣೆಗಾರಿಕೆಯಾಗಿದೆ ಎಂದವರು ಹೇಳಿದರು. ‘‘ಇಂತಹ ಯೋಜಿತ ಹತ್ಯೆಗಳ ಬಗ್ಗೆ ತನಿಖೆ ನಡೆಯಬೇಕಾಗಿದೆ. ಅಪರಾಧಿಗಳ ಗುರುತುಹಿಡಿಯಬೇಕಾಗಿದೆ ಹಾಗೂ ಅವರ ದುರುದ್ದೇಶಗಳನ್ನು ಕಂಡುಹಿಡಿಯಬೇಕಾಗಿದೆ. ಬಿಹಾರಿ ಕಾರ್ಮಿಕರು ಸೇರಿದಂತೆ ಕಣಿವೆಯಲ್ಲಿ ದುಡಿಯುತ್ತಿರುವ ಸುರಕ್ಷತೆಯು ನಮ್ಮ ಹೊಣೆಗಾರಿಕೆಯಾಗಿದೆ ಎಂದರು.ಸಮುದಾಯಗಳ ನಡುವೆ ಸೌಹಾರ್ದತೆ ಹಾಗೂ ಭ್ರಾತೃತ್ವವನ್ನು ಕಾಪಾಡುವ ಅಗತ್ಯವನ್ನು ಅವರು ಸಂದರ್ಭದಲ್ಲಿ ಒತ್ತಿ ಹೇಳಿದರು.

ಕಾಶ್ಮೀರಿ ಪಂಡಿತರ ಬಗ್ಗೆ ಪ್ರಸ್ತಾಪಿಸಿದ ಪ್ರಧಾನ ಮುಫ್ತಿಯವರು, ಅವರು ಹೊರಹೋಗಕೂಡದು ಹಾಗೂ ಕಣಿವೆಯಲ್ಲಿ ಉಳಿದುಕೊಳ್ಳುವಂತೆ ಮನವಿ ಮಾಡಿದರು. ‘‘ಕಾಶ್ಮೀರಿ ಪಂಡಿತರ ವಾಪಸಾತಿಗಾಗಿ ನಾವು ಕಳೆದ 30 ವರ್ಷಗಳಿಂದ ಗೋಗರೆಯುತ್ತಲೇ ಇದ್ದೆವು. ಇದೀಗ ಅವರು ವಾಪಸ್ ಬಂದಿದ್ದಾರೆ ಹಾಗೂ ಅವರು ನಮ್ಮಾಂದಿಗೆ ಶಾಂತಿ ಹಾಗೂ ಘನತೆಯೊಂದಿಗೆ ಉಳಿದುಕೊಳ್ಳಬೇಕಾಗಿದೆ’’ ಎಂದು ತಿಳಿಸಿದರು.

‘‘ಕಾಶ್ಮೀರ ಕಣಿವೆಯಲ್ಲಿ ಸಂಪೂರ್ಣ ಶಾಂತಿ ನೆಲೆಸಿರುವುದು ನನಗೆ ಕಾಣುತ್ತಿಲ್ಲ. ಪ್ರವಾಸಿಗರು ಮರಳುತ್ತಿದ್ದಾರೆ ಹಾಗೂ ಒಂದು ಹಂತಕ್ಕೆ ಕಾಶ್ಮೀರದಲ್ಲಿ ಸಹಜತೆ ಮರಳಿದೆ. ಆದರೆ ಕಾಶ್ಮೀರದಲ್ಲಿ ಸಂಪೂರ್ಣ ಶಾಂತಿ ಹಾಗೂ ಪ್ರಗತಿಯನ್ನು ನಾವು ಕಾಣಬಯಸುತ್ತಿದ್ದೇವೆ. ಆದರೆ ಇಲ್ಲಿನ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದೆ ’’ಎಂದು ನಾಸೀರುಲ್ ಇಸ್ಲಾಂ ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X