ಪ್ರಮೋದ್ ಮುತಾಲಿಕ್ ವಿರುದ್ಧ ಭಟ್ಕಳ ಪೊಲೀಸ್ ಠಾಣೆಗೆ ದೂರು
![ಪ್ರಮೋದ್ ಮುತಾಲಿಕ್ ವಿರುದ್ಧ ಭಟ್ಕಳ ಪೊಲೀಸ್ ಠಾಣೆಗೆ ದೂರು ಪ್ರಮೋದ್ ಮುತಾಲಿಕ್ ವಿರುದ್ಧ ಭಟ್ಕಳ ಪೊಲೀಸ್ ಠಾಣೆಗೆ ದೂರು](https://www.varthabharati.in/sites/default/files/images/articles/2022/06/6/337866-1654528303.jpeg)
ಭಟ್ಕಳ: ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಆರೋಪದಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಖ್ ಅವರು ಭಟ್ಕಳದ ನಗರ ಠಾಣೆಗೆ ದೂರು ನೀಡಿದ್ದು, ಮುತಾಲಿಕ್ ವಿರುದ್ಧ ಕಠಿಣ ಕ್ರಮವನ್ನು ಜರಗಿಸಬೇಕೆಂದು ಆಗ್ರಹಿಸಿದ್ದಾರೆ.
ಸೋಮವಾರ ಇಲ್ಲಿನ ನಗರ ಠಾಣೆಗೆ ತೆರಳಿದ ವೆಲ್ಫೇರ್ ಪಾರ್ಟಿಯ ನಿಯೋಗವು ಡಿವೈಎಸ್ಪಿ ಬೆಳ್ಳಿಯಪ್ಪರನ್ನು ಭೇಟಿಯಾಗಿ ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಅಶಾಂತಿ ಮತ್ತು ಕ್ಷೋಭೆ ಹರಡುವ ಸಾಧ್ಯತೆ ಇದ್ದು ಕೂಡಲೇ ಇವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶೌಕತ್ ಖತೀಬ್, ಮಾಜಿದ್ ಕೋಲಾ, ಅಬ್ದುಲ್ ಜಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.
Next Story