Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸ್ವಚ್ಛ ಭಾರತ್ ಶೌಚಾಲಯಗಳ ನಿರ್ಮಾಣ...

ಸ್ವಚ್ಛ ಭಾರತ್ ಶೌಚಾಲಯಗಳ ನಿರ್ಮಾಣ ಯೋಜನೆಗೆ 145 ಕೋಟಿ ರೂ. ಬಿಡುಗಡೆ ಮಾಡಿಲ್ಲ

ಜಿ.ಮಹಾಂತೇಶ್ಜಿ.ಮಹಾಂತೇಶ್7 Jun 2022 8:18 AM IST
share
ಸ್ವಚ್ಛ ಭಾರತ್ ಶೌಚಾಲಯಗಳ ನಿರ್ಮಾಣ ಯೋಜನೆಗೆ 145 ಕೋಟಿ ರೂ. ಬಿಡುಗಡೆ ಮಾಡಿಲ್ಲ

ಬೆಂಗಳೂರು: ದೇವಾಲಯಕ್ಕಿಂತ ಶೌಚಾಲಯ ಮುಖ್ಯ ಎಂದು ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ್ ಶೌಚಾಲಯಗಳ ನಿರ್ಮಾಣಕ್ಕೆ ಚಾಲನೆ ನೀಡಿ ಗಾಂಧೀಜಿ ಬಳಸುತ್ತಿದ್ದ ಕನ್ನಡಕವನ್ನೇ ಲಾಂಛನವಾಗಿ ಬಳಸಿಕೊಂಡು ಪ್ರಚಾರ ಗಿಟ್ಟಿಸಿಕೊಂಡಿರುವ ಕೇಂದ್ರ ಸರಕಾರವು ರಾಜ್ಯಕ್ಕೆ ಕಳೆದೊಂದು ವರ್ಷದಲ್ಲಿ ಇದೇ ಯೋಜನೆಗೆ ಹಂಚಿಕೆ ಮಾಡಿದ್ದ ಒಟ್ಟು ಅನುದಾನದ ಪೈಕಿ 145 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ.

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ಸ್ವಚ್ಛ ಭಾರತ ಯೋಜನೆಯೂ ಸೇರಿದಂತೆ ಆರೋಗ್ಯ, ವಸತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಟ್ಟು 921.22 ಕೋಟಿ ರು. ಅನುದಾನ ಬಿಡುಗಡೆಯಾಗಿಲ್ಲ.

 ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಲಕ್ಷಾಂತರ ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಇತ್ತೀಚೆಗಷ್ಟೇ ಜಾಹೀರಾತು ನೀಡಿ ಭರ್ಜರಿ ಪ್ರಚಾರ ಗಿಟ್ಟಿಸಿಕೊಂಡಿದ್ದರ ಬೆನ್ನಲ್ಲೇ ನಾಲ್ಕು ಇಲಾಖೆಗಳಲ್ಲಿ 921. 22 ಕೋಟಿ ರೂ. ಬಿಡುಗಡೆಯಾಗಿಲ್ಲ ಎಂಬ ಅಂಶ ಬಹಿರಂಗವಾಗಿದೆ.

ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ಕುರಿತು 2022ರ ಮೇ 20ರಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಕೇಂದ್ರ ಸರಕಾರವು 921.22 ಕೋಟಿ ರೂ.ಬಿಡುಗಡೆ ಮಾಡಿಲ್ಲ ಎಂದು ಅಧಿಕಾರಿಗಳು ಮಾಹಿತಿ ಒದಗಿಸಿದ್ದಾರೆ. ಅಧಿಕಾರಿಗಳು ಒದಗಿಸಿರುವ ಮಾಹಿತಿಯು ''the-file.in''ಗೆ ಲಭ್ಯವಾಗಿದೆ.  

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಡಿಯಲ್ಲಿ ಜಾರಿಗೊಳಿಸಿರುವ ಸ್ವಚ್ಛಭಾರತ ಯೋಜನೆಯಡಿ 145 ಕೋಟಿ ರೂ., ಪಿಎಂಜಿಎಸ್‌ವೈ ಯೋಜನೆಯಡಿ 151 ಕೋಟಿ ರೂ. ಬಿಡುಗಡೆ ಮಾಡಿಲ್ಲ. ಈ ಅವಧಿಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಹಣ ಬಿಡುಗಡೆಗೆ ಕೇಂದ್ರ ಸರಕಾರಕ್ಕೆ ಒತ್ತಡವನ್ನೇ ಹಾಕಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ವಸತಿ ಇಲಾಖೆಯ ಪಿಎಂವೈ (ನಗರ) ಯೋಜನೆಯಡಿ 51 ಕೋಟಿ ರೂ., ಪಿಎಂಎವೈ (ಗ್ರಾಮೀಣ) ಯೋಜನೆಯಡಿ 253 ಕೋಟಿ ರೂ., ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ 224.57 ಕೋಟಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಎಸ್ಸಿಪಿ ಮತ್ತು ಟಿಎಸ್ಪಿ ಅಡಿಯಲ್ಲಿ 50 ಕೋಟಿ ರೂ., ಆರ್ಟಿಕಲ್ 275ರ ಅಡಿ ಕಾಲನಿ ಅಭಿವೃದ್ಧಿಗೆ 26 ಕೋಟಿ ರೂ. ಬಿಡುಗಡೆ ಮಾಡಿಲ್ಲ.

921.22 ಕೋಟಿ ರೂ. ಬಿಡುಗಡೆಯಾಗದ ಕಾರಣ ಈ ಯೋಜನೆಗಳಡಿಯಲ್ಲಿ ಶೇ.100ರಷ್ಟು ವೆಚ್ಚ ಮಾಡಿಲ್ಲ ಎಂದು ಇಲಾಖೆಯು ಸಭೆಗೆ ಮಾಹಿತಿ ಒದಗಿಸಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ 2021-22ನೇ ಸಾಲಿನಲ್ಲಿ ಬಿಡುಗಡೆಯಾಗದೇ ಇರುವ ಅನುದಾನವನ್ನು ಬಳಕೆಯಾಗದೇ ಇರುವ ಅನುದಾನವೆಂದು ಪರಿಗಣಿಸಿ ಮುಂದಿನ ಆರ್ಥಿಕ ವರ್ಷದಲ್ಲಿ ಒದಗಿಸಲು ಅವಕಾಶವಿಲ್ಲ ಎಂದೂ ಸಭೆಗೆ ಮಾಹಿತಿ ಒದಗಿಸಿದ್ದಾರೆ.

‘ನರೇಗಾ ಅಡಿಯಲ್ಲಿ 308.48 ಕೋಟಿ ರೂ. ಹಂಚಿಕೆ’

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಡಿ ಎಸ್ಸಿಪಿ ಮತ್ತು ಟಿಎಸ್ಪಿ ಅಡಿಯಲ್ಲಿ 2021-22ನೇ ಸಾಲಿನಲ್ಲಿ 3,460.33 ಕೋಟಿ ರೂ. ಹಂಚಿಕೆಯಾಗಿತ್ತು. ಈ ಪೈಕಿ 3,163.67 ಕೋಟಿ ರೂ. ಬಿಡುಗಡೆ ಅಗಿತ್ತು. ಇದರಲ್ಲಿ 3,158.94 ಕೋಟಿ ರೂ. ಖರ್ಚಾಗಿತ್ತು.

2022-23ನೇ ಸಾಲಿಗೆ ಈ ಇಲಾಖೆಗೆ 3,108.15 ಕೋಟಿ ರೂ. ಹಂಚಿಕೆಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಹೆಚ್ಚು ಇರುವ ಗ್ರಾಮಗಳಿಗೆ ಸಂಪರ್ಕ ರಸ್ತೆಗಳಿಗೆ ಗ್ರಾಮ ಸಡಕ್ ಯೋಜನೆಗೆ 156.65 ಕೋಟಿ ರೂ., ಗ್ರಾಮೀಣ ಸುಮಾರ್ಗ, ನಮ್ಮ ಗ್ರಾಮ ನಮ್ಮ ರಸ್ತೆಗೆ 250 ಕೋಟಿ ರೂ., ಜಲಜೀವನ್ ಮಿಷನ್‌ಗೆ 2,200.45 ಕೋಟಿ ರೂ., ಸ್ವಚ್ಛ ಭಾರತ ಅಭಿಯಾನಕ್ಕೆ 145.60 ಕೋಟಿ ರೂ., ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ 20,000 ರೂ.ನಂತೆ ಪ್ರೋತ್ಸಾಹಧನ ನೀಡಲು ಹೆಚ್ಚುವರಿಯಾಗಿ 20.41 ಕೋಟಿ ರೂ., ನರೇಗಾ ಅಡಿಯಲ್ಲಿ 308.48 ಕೋಟಿ ರೂ. ಹಂಚಿಕೆ ಮಾಡಿರುವುದು ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X