Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾಂಕ್‌ಗಳು ಸಮರ್ಥವಾಗಿ...

ಬ್ಯಾಂಕ್‌ಗಳು ಸಮರ್ಥವಾಗಿ ಕಾರ್ಯನಿರ್ವಹಿಸಿದಾಗ ದೇಶದ ಆರ್ಥಿಕತೆಯಲ್ಲಿ ಬದಲಾವಣೆ: ಡಿಸಿ ಡಾ.ರಾಜೇಂದ್ರ

ದ.ಕ.ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Jun 2022 8:35 PM IST
share
ಬ್ಯಾಂಕ್‌ಗಳು ಸಮರ್ಥವಾಗಿ ಕಾರ್ಯನಿರ್ವಹಿಸಿದಾಗ ದೇಶದ ಆರ್ಥಿಕತೆಯಲ್ಲಿ ಬದಲಾವಣೆ: ಡಿಸಿ ಡಾ.ರಾಜೇಂದ್ರ

ಮಂಗಳೂರು : ಕರಾವಳಿಯು ಬ್ಯಾಂಕಿಂಗ್ ಕ್ಷೇತ್ರದ ತವರೂರು. ಇಡೀ ದೇಶಕ್ಕೆ ಬ್ಯಾಂಕಿಂಗ್ ಕೊಡುಗೆ ನೀಡಿದ ಹೆಗ್ಗಳಿಕೆಯು ಕರಾವಳಿ ಜಿಲ್ಲೆಗಳಿಗಿದೆ. ಹಾಗಾಗಿ ಕರಾವಳಿಯ ಬ್ಯಾಂಕ್‌ಗಳು ರಾಜ್ಯಕ್ಕೆ ದಿಕ್ಸೂಚಿಯಾಗು ವಂತೆ ಕಾರ್ಯನಿರ್ವಹಿಸಬೇಕು. ಅಲ್ಲದೆ ಸರಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವಲ್ಲಿ ಬ್ಯಾಂಕ್‌ಗಳ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕ್‌ಗಳು ಸಮರ್ಥವಾಗಿ ಕಾರ್ಯನಿರ್ವಹಿಸಿದಾಗ ದೇಶದ ಆರ್ಥಿಕತೆಯಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ದ.ಕ.ಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್‌ಗಳು, ನಬಾರ್ಡ್ ಮತ್ತು ಇತರ ಸರಕಾರಿ ಇಲಾಖೆಗಳ ಆಶ್ರಯದಲ್ಲಿ ನಗರದ ಉರ್ವಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ದ.ಕ. ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸಹಯೋಗದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ದ.ಕ.ಜಿಲ್ಲೆಯ ಬ್ಯಾಂಕ್‌ಗಳು ಮುಂಚೂಣಿಯಲ್ಲಿವೆ. ಇಲ್ಲಿ ಉದ್ಯಮ ಸ್ಥಾಪನೆಗೆ ಸಾಕಷ್ಟು ಅವಕಾಶವಿದ್ದು, ಜಿಲ್ಲಾಡಳಿತ ತನ್ನೆಲ್ಲ ಸಹಕಾರವನ್ನು ನೀಡುತ್ತದೆ. ಆದರೆ ಉದ್ಯಮಿಗಳಿಗೆ ಸಕಾಲದಲ್ಲಿ ಸಾಲ ಸೌಲಭ್ಯ ನೀಡುವಲ್ಲಿ ಬ್ಯಾಂಕ್‌ಗಳು ಮುತುವರ್ಜಿ ವಹಿಸಬೇಕು. ಸಾಲ ಕೊಡುವುದಷ್ಟೆ ಅಲ್ಲ, ಸಾಲ ಮರುಪಾವತಿವರೆಗೆ ಸಾಲ ಸಮರ್ಪಕವಾಗಿ ಬಳಕೆಯಾಗಿದೆಯೇ ಎಂಬುದನ್ನು ಪರಿಶೀಲಿಸುವುದೂ ಕೂಡ ಬ್ಯಾಂಕ್‌ಗಳ ಕರ್ತವ್ಯವಾಗಿದೆ. ಕೋವಿಡ್ ಬಳಿಕ ಬ್ಯಾಂಕ್‌ಗಳ ಜವಾಬ್ದಾರಿ ಹೆಚ್ಚಿದೆ. ಸಾಲಗಾರ ಅಲ್ಲದವರಿಗೆ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕ ಚಟುವಟಿಕೆಯಲ್ಲಿ ಸಕ್ರಿಯಗೊಳಿಸಲು ಬ್ಯಾಂಕ್‌ಗಳು ಪ್ರೇರೇಪಿಸಬೇಕು ಎಂದು ಡಿಸಿ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ದ.ಕ.ಜಿ.ಪಂ.ಸಿಇಒ ಡಾ.ಕುಮಾರ್ ಮಾತನಾಡಿ ದ.ಕ.ಜಿಲ್ಲೆಯಲ್ಲಿ ೬೦೦ ಬ್ಯಾಂಕ್ ಶಾಖೆಗಳಿದ್ದು, ೧,೨೦೦ ಫಲಾನುಭವಿಗಳ ಪಾಲ್ಗೊಳ್ಳುವಿಕೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಕಡಿಮೆ ಸಂಖ್ಯೆಯ ಫಲಾನುಭವಿಗಳು ಹಾಜರಾಗಿದ್ದಾರೆ. ಫಲಾನುಭವಿಗಳ ಆಯ್ಕೆ, ಅವರನ್ನು ತಲುಪುವ ಕಾರ್ಯಕ್ರಮಗಳು ಕ್ರಮಬದ್ಧವಾಗಿ ನಡೆಯಬೇಕು. ಕೃಷಿ, ಕೈಗಾರಿಕೆ ಸಹಿತ ಆದ್ಯತಾ ವಲಯಕ್ಕೆ ಹೆಚ್ಚಿನ ಸಾಲ ನೀಡಿಕೆಗೆ ಒತ್ತು ನೀಡಬೇಕು ಎಂದರು.

ಪ್ರಧಾನಮಂತ್ರಿ ಉದ್ಯೋಗ ನಿರ್ಮಾಣ ಯೋಜನೆ (ಪಿಎಂಇಜಿಪಿ)ಯಲ್ಲಿ ದ.ಕ.ಜಿಲ್ಲೆಯು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿದೆ. ೪೧೬ ಫಲಾನುಭವಿಗಳಿಗೆ ೧೯ ಸಾವಿರ ಕೋ.ರೂ.  ಸಾಲ ಮಂಜೂರು ಆಗಿದೆ. ಸಾಲ ನೀಡಿಕೆಯಂತೆ ಸಾಲ ವಸೂಲಾತಿಯೂ ಮುಖ್ಯ. ಜಿಲ್ಲೆಯಲ್ಲಿ ೫೭ ಸಾವಿರ ಕೋ.ರೂ. ಹೊರಬಾಕಿ ಸಾಲ ಇದೆ. ಮುದ್ರಾ, ಜನಧನ್ ಯೋಜನೆಯಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ಮಾಡಲಾಗಿದೆ ಎಂದು ಡಾ. ಕುಮಾರ್ ಹೇಳಿದರು.

ವಿಮಾ ಯೋಜನೆಯಲ್ಲಿ ದ.ಕ.ಜಿಲ್ಲೆ ರಾಜ್ಯಕ್ಕೆ ೫ನೇ ಸ್ಥಾನದಲ್ಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಮೀನುಗಾರಿಕೆಗೆ ಕೂಡ ಆದ್ಯತೆ ನೀಡಲಾಗುತ್ತಿದೆ. ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಗಮನಾರ್ಹ ಸಾಧನೆ ಮಾಡಬೇಕು ಎಂದು ಡಾ. ಕುಮಾರ್ ಸಲಹೆ ನೀಡಿದರು. ಈ ಸಂದರ್ಭ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಅಲ್ಲದೆ ಸಾಧಕ ಬ್ಯಾಂಕ್‌ಗಳ ಪ್ರಮುಖರನ್ನು ಗೌರವಿಸಲಾಯಿತು.

ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯಕ ಮಹಾಪ್ರಬಂಧಕ ವೆಂಕಟೇಶ್, ಕೆನರಾ ಬ್ಯಾಂಕ್ ಡಿಜಿಎಂ ರಾಘವ ನಾಯ್ಕ, ಭಾರತೀಯ ಸ್ಟೇಟ್‌ಬ್ಯಾಂಕ್‌ನ ಉಪ ಮಹಾಪ್ರಬಂಧಕ ರಾಜೇಶ್ ಗುಪ್ತಾ, ಕರ್ಣಾಟಕ ಬ್ಯಾಂಕ್ ಮಹಾಪ್ರಬಂಧಕ ವಿನಯ ಭಟ್, ಕೆವಿಜಿವಿ ಪ್ರಾದೇಶಿಕ ವ್ಯವಸ್ಥಾಪಕ ಸೂರ್ಯನಾರಾಯಣ, ಐಒಬಿ ಪ್ರಾದೇಶಿಕ ವ್ಯವಸ್ಥಾಪಕ ಅಮಿತ್ ಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ಪ್ರವೀಣ್ ಎಂ.ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬ್ಯಾಂಕ್‌ಗಳು ಗ್ರಾಹಕ ಸ್ನೇಹಿಯಾಗಬೇಕು. ಕನ್ನಡ ಭಾಷೆಯನ್ನು ಕಲಿಯುವುದರ ಜೊತೆಗೆ ಸ್ಥಳೀಯ ಭಾಷೆಗಳ ಪರಿಚಯವೂ ಅಧಿಕಾರಿ/ಸಿಬ್ಬಂದಿಗೆ ಇರಬೇಕು. ಸ್ಥಳೀಯ ಸಂಸ್ಕೃತಿ, ಸ್ಥಳಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ಗ್ರಾಹಕರೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸಿ ಬಾಂಧವ್ಯ ಬೆಳಸಬೇಕು. ಈ ಬಗ್ಗೆ ಶಾಖಾ ಹಂತದಲ್ಲಿ ಮೇಲಾಧಿಕಾರಿಗಳು ತಿಳಿವಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಸಲಹೆ ನೀಡಿದರು.

ಬ್ಯಾಂಕ್‌ಗೆ ಆಗಮಿಸುವ ಗ್ರಾಹಕರನ್ನು ಯಾವುದೇ ಕಾರಣಕ್ಕೂ ಸತಾಯಿಸಬಾರದು. ಅವರ ಕೆಲಸವನ್ನು ಕ್ರಮಬದ್ಧವಾಗಿ ಮಾಡಿಕೊಡಬೇಕು. ಗಾಹಕರನ್ನು ಸೆಳೆಯುವಲ್ಲಿ ಬ್ಯಾಂಕ್‌ಗಳು ಚುರುಕುತನ ತೋರಿಸಬೇಕು. ಗ್ರಾಹಕರು ಬ್ಯಾಂಕ್‌ಗೆ ತೆರಳಲು ಹಿಂಜರಿಕೆ ಪಡುವಂತೆ ಆಗಬಾರದು. ಬ್ಯಾಂಕ್‌ಗಳಲ್ಲಿ ಸೌಹಾರ್ದ ವಾತಾವರಣ ಇರಬೇಕಾಗಿದ್ದು, ಆಗ ಮಾತ್ರ ಬ್ಯಾಂಕ್ ಕೂಡ ಸದೃಢವಾಗಿ ಬೆಳೆಯಲು ಸಾಧ್ಯವಿದೆ ಎಂದು ಜಿಪಂ ಸಿಇಒ ಡಾ.ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X