Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರವಾದಿ ನಿಂದಕರಿಗೆ ತಕ್ಕ ಪಾಠ...

ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸುವೆವು: ಇರಾನ್ ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಧೋವಲ್ ಭರವಸೆ

ಇರಾನಿ ವಿದೇಶಾಂಗ ಸಚಿವಾಲಯದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ9 Jun 2022 9:16 PM IST
share
ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸುವೆವು: ಇರಾನ್ ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಧೋವಲ್ ಭರವಸೆ

ಟೆಹರಾನ್,ಜೂ.9: ಪ್ರವಾದಿ ಮುಹಮ್ಮದರ ಬಗ್ಗೆ ಇಬ್ಬರು ಬಿಜೆಪಿ ನಾಯಕರು ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಉಭಯದೇಶಗಳ ನಡುವೆ ವಾಣಿಜ್ಯ, ಸಂಪರ್ಕಶೀಲತೆ ಹಾಗೂ ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿ ಭಾರತ ಹಾಗೂ ಇರಾನ್ ಬುಧವಾರ ವಿಸ್ತೃತವಾದ ಮಾತುಕತೆಗಳನ್ನು ನಡೆಸಿದವು.

ಪ್ರವಾದಿ ಮುಹಮ್ಮದರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿದ ಕುವೈತ್, ಕತರ್, ಯುಎಇ, ಸೌದಿ ಆರೇಬಿಯ ಹಾಗೂ ಇತರ ಗಲ್ಫ್ ರಾಷ್ಟ್ರಗಳ ಜತೆಗೆ ಇರಾನ್ ಕೂಡಾ ಸೇರ್ಪಡೆಗೊಂಡ ಕೆಲವು ದಿನಗಳ ಬಳಿಕ ಇರಾನಿ ವಿದೇಶಾಂಗ ಸಚಿವ ಹೊಸ್ಸೆನ್ ಆಮೀರ್ ಅಬ್ದೊಲ್ಲಾಹಿಯಾನ್ ಹೊಸದಿಲ್ಲಿಗೆ ಭೇಟಿ ನೀಡಿದ್ದಾರೆ.

"ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಹಾಗೂ ಇತರ ಭಾರತೀಯ ಅಧಿಕಾರಿಗಳು ನಮ್ಮ ದ್ವಿಪಕ್ಷೀಯ ವ್ಯೂಹಾತ್ಮಕ ಮಾತುಕತೆಗಳನ್ನು ಮುನ್ನಡೆಸಲಿದ್ದಾರೆ. ಧರ್ಮಗಳನ್ನು ಹಾಗೂ ಇಸ್ಲಾಮಿನ ಪಾವಿತ್ರವನ್ನು ಗೌರವಿಸುವ ಹಾಗೂ ವಿಭಜನವಾದಿ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸುವುದಕ್ಕೆ ಟೆಹರಾನ್ ಹಾಗೂ ಹೊಸದಿಲ್ಲಿ ಸಮ್ಮತಿಸಿವೆ. ಉಭಯದೇಶಗಳ ಬಾಂಧವ್ಯಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ದೃಢ ಸಂಕಲ್ಪ ಮಾಡಲಾಗಿದೆ" ಎಂದು ಆಮೀರ್ ಅಬ್ದೊಲ್ಲಾಹಿಯಾನ್ ಕಳೆದ ರಾತ್ರಿ ಟ್ವೀಟ್ ಮಾಡಿದ್ದಾರೆ.

 ಬಿಜೆಪಿಯ ಇಬ್ಬರು ಮುಖಂಡರು ಪ್ರವಾದಿಯರ ಬಗ್ಗೆ ಅಗೌರವಯುತವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಬಳಿ ನಕಾರಾತ್ಮಕ ವಾತಾವರಣ ಉಂಟಾಗಿರುವ ಬಗ್ಗೆ ಅಬ್ದುಲ್ಲಾಹಿಯಾನ್ ಮಾತುಕತೆಯ ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

‘‘ಇಸ್ಲಾಮಿನ ಸ್ಥಾಪಕರಾದ ಪ್ರವಾದಿ ಮುಹಮ್ಮದರ ಬಗ್ಗೆ ಭಾರತ ಸರಕಾರವು ಅಪಾರ ಗೌರವವನ್ನು ಹೊಂದಿದೆಯೆಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಮಾತುಕತೆಯ ವೇಳೆ ಮರುದೃಢಪಡಿಸಿದ್ದಾರೆ ’’ಎಂದು ಇರಾನ್‌ನವಿದೇಶಾಂಗ ಸಚಿವಾಲಯದ ಪತ್ರಿಕಾಹೇಳಿಕೆಯೊಂದು ತಿಳಿಸಿದೆ. ಇತರರು ಕೂಡಾ ಪಾಠ ಕಲಿಯುವಂತಾಗುವ ರೀತಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಧೋವಲ್ ಹೇಳಿದ್ದಾರೆಂದು ಹೇಳಿಕೆ ತಿಳಿಸಿದೆ.

ಇರಾನ್ ವಿದೇಶಾಂಗ ಸಚಿವಾಲಯದ ಈ ಹೇಳಿಕೆಯ ಬಗ್ಗೆ ಕೇಂದ್ರ ಸರಕಾರದಿಂದ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲವೆಂದು ಮೂಲಗಳು ತಿಳಿಸಿವೆ.ಪ್ರವಾದಿ ಮುಹಮ್ಮದರ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಭಾರತೀಯ ಜನರು ಹಾಗೂ ಸರಕಾರವನ್ನು ಇರಾನ್ ಸಚಿವರು ಪ್ರಶಂಸಿಸಿದ್ದಾರೆಂದು ಇರಾನಿ ಹೇಳಿಕೆ ತಿಳಿಸಿದೆ. ಇರಾನ್‌ನಲ್ಲಿರುವ ವಿವಿಧ ಧರ್ಮಗಳ ಅನುಯಾಯಿಗಳೊಂದಿಗೆ ಭಾರತದ ಐತಿಹಾಸಿಕ ಮೈತ್ರಿಯನ್ನು ಕೂಡಾ ಇರಾನ್ ವಿದೇಶಾಂಗ ಸಚಿವರು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X