Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳಲಿ ಮಸೀದಿ ವಿವಾದ; ಜೂ.14ಕ್ಕೆ‌...

ಮಳಲಿ ಮಸೀದಿ ವಿವಾದ; ಜೂ.14ಕ್ಕೆ‌ ವಿಚಾರಣೆ‌ ಮುಂದೂಡಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ10 Jun 2022 7:56 PM IST
share
ಮಳಲಿ ಮಸೀದಿ ವಿವಾದ; ಜೂ.14ಕ್ಕೆ‌ ವಿಚಾರಣೆ‌ ಮುಂದೂಡಿದ ನ್ಯಾಯಾಲಯ

ಮಂಗಳೂರು: ಮಳಲಿ ‌ಮಸೀದಿ ವಿವಾದ ವಿಚಾರಣೆಯನ್ನು ಮೂರನೇ ಸಿವಿಲ್‌ ನ್ಯಾಯಾಲಯ ಜೂ.14ಕ್ಕೆ ವಿಚಾರಣೆ‌ಯನ್ನು ಮುಂದೂಡಿದೆ.

ಗುರುವಾರ ವಾದ ಮಂಡಿಸಿದ್ದ ವಿಶ್ವ ಹಿಂದೂ ಪರಿಷತ್ ಪರ ವಕೀಲರು, ಮಳಲಿ ಪೇಟೆ ಮಸೀದಿ ವಕ್ಫ್ ಆಸ್ತಿ ಎಂದು ಹೇಳಿದರೆ ಸಾಲದು ಅದಕ್ಕೆ ಪೂರಕ ಸಾಕ್ಷಿಗಳನ್ನು ನ್ಯಾಯಾಲಯದ‌ ಮುಂದಿರಿಸಿ ತನಿಖೆ  ನಡೆಸಿ ನ್ಯಾಯಾಲಯ ತೀರ್ಪು ನೀಡಿದರೆ ಒಪ್ಪಬಹುದು. ಮಸೀದಿಗೂ  ವಕ್ಫ್ ಆಸ್ತಿಗೂ ಸಂಬಂಧವಿಲ್ಲ ಎಂದು ವಾದಿಸಿದ್ದರು.

ಆ ಸಂಬಂಧ‌ ಇಂದು ವಾದ ಮಂಡಿಸಿದ ಮಸೀದಿ ಪರ ವಕೀಲರು, ಪ್ರಕರಣವೊಂದರ‌ ಸಂಬಂಧ ದಿಲ್ಲಿ ನ್ಯಾಯಾಲಯವು‌ ನೀಡಿದ್ದ ತೀರ್ಪೊಂದರಲ್ಲಿ ಹೇಳಿದಂತೆ,  ರಾಜ್ಯ ಸರಕಾರ ನೀಡುವ ಗೆಜೆಟ್ ನೋಟಿಫಿಕೇಶನ್‌ ಅಂದರೆ‌ ಅದು ನ್ಯಾಯಾಲಯದ ಆದೇಶಕ್ಕೆ ಸಮನಾಗಿದೆ. ಆದ್ದರಿಂದ ಮಸೀದಿ ವಕ್ಫ್ ಆಸ್ತಿಯೋ ಅಲ್ಲವೇ ಎಂಬ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಅಲ್ಲದೇ, ಕೇರಳ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಒಂದೆಡೆ ಮಸೀದಿಯ ರಚನೆ‌, ಅದರಲ್ಲಿ ಅದಕ್ಕೆ ಸಂಬಂಧಿಸಿದ‌ ಕಾರ್ಯಗಳು ನಡೆಯುತ್ತಿದ್ದರೆ, ಅದು ವಕ್ಫ್ ಆಸ್ತಿಯಾಗಿ ಪರಿವರ್ತನೆಯಾಗುತ್ತದೆ ಎಂದು ವಾದ ಮಂಡಿಸಿದರು.

ಮಳಲಿ ಪೇಟೆ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಜಾಗದಲ್ಲಿರುವುದು ಮಸೀದಿ ಎಂದು ಎದುರು ಕಕ್ಷಿಯ ಅರ್ಜಿದಾರರು ಒಪ್ಪಿದ್ದಾರೆ. ಆದೂದರಿಂದ ಅದು ವಕ್ಫ್ ಆಸ್ತಿ ಎನ್ನುವುದನ್ನು ಮತ್ತೆ ತನಿಖೆ ನಡೆಸಿ ಸಾಬೀತು ಪಡಿಸುವ ಆವಶ್ಯಕತೆ ಇಲ್ಲ ಎಂದು ಮಸೀದಿ ಪರ ವಾದ ಮಂಡಿಸಿರು.

ಬಳಿಕ ವಾದಿಸಿದ ವಿಹಿಂಪ ಪರವಕೀಲರು, ಮಸೀದಿ ಪರ ವಕೀಲರು  ಹೊಸ ವಿವಾದ ಹಾಗೂ ಪಾಯಿಂಟ್ ಗಳನ್ನು ಮುಂದಿಟ್ಟಿದ್ದಾರೆ. ಆದ್ದರಿಂದ‌ ಆ ಕುರಿತು ವಾದಿಸಲು ಅವಕಾಶ ನೀಡಬೇಕೆಂದು ಮನವಿ‌‌ ಮಾಡಿಕೊಂಡರು.‌‌
ಎರಡೂ ಕಡೆಯ ವಾದ‌ ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜೂ. 14ಕ್ಕೆ ಮುಂದೂಡಿತು.
 
ಮಸೀದಿ ವಿರುದ್ಧ ಮತ್ತೊಂದು ಅರ್ಜಿ ದಾಖಲು

ಮಳಲಿ‌ ಪೇಟೆ ಮಸೀದಿ ನವೀಕರಣದ‌ ಸಂದರ್ಭ ದೇವಸ್ಥಾನವಿದೆ ಎಂದು ಆರೋಪಿಸಿ, ಸ್ಥಳೀಯರಾದ‌ ದನಂಜಯ ಮತ್ತು ಮನೋಜ್ ಕುಮಾರ್ ಎಂಬವರು ನ್ಯಾಯಾಲಯದಲ್ಲಿ‌ ದಾವೆ‌ ಹೂಡಿದ್ದರು.

ಈ ಸಂಬಂಧ ಮಂಗಳೂರಿನ 3ನೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಂತೆಯೇ, ಎಸಿ ನ್ಯಾಯಾಲಯದಲ್ಲಿ ಹೊಸ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಮಳಲಿ ಮಸೀದಿಗೆ ಸಂಬಂಧಿಸಿದ ಆರ್ ಟಿಸಿ ಸರಿಯಾದ ಕ್ರಮದಲ್ಲಿಲ್ಲ. ಅದನ್ನು ಅಕ್ರಮವಾಗಿ ಮಾಡಲಾಗಿದೆ‌ ಎಂದು ಪ್ರಕರಣ ದಾಖಲಾಗಿದೆ‌ ಎಂದು ತಿಳಿದು ಬಂದಿದ್ದು, ಈ ಪ್ರಕರಣದ‌ ವಿಚಾರಣೆಯೂ ಜೂ.14 ರಂದು ಎಸಿ ನ್ಯಾಯಾಲಯದಲ್ಲಿ ನಡೆಯಲಿದೆ‌ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X