Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತ ಕವಿ ಇಲ್ಲದಿದ್ದರೆ, ಕಸ್ತೂರಿ...

ದಲಿತ ಕವಿ ಇಲ್ಲದಿದ್ದರೆ, ಕಸ್ತೂರಿ ಮಾತ್ರೆ ಮಾರುತ್ತಿದ್ದೆ: ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ11 Jun 2022 9:22 PM IST
share
ದಲಿತ ಕವಿ ಇಲ್ಲದಿದ್ದರೆ, ಕಸ್ತೂರಿ ಮಾತ್ರೆ ಮಾರುತ್ತಿದ್ದೆ: ಸಚಿವ ವಿ.ಸೋಮಣ್ಣ

ಬೆಂಗಳೂರು, ಜೂ.11: ಹಿರಿಯ ಡಾ.ಸಿದ್ದಲಿಂಗಯ್ಯ ಅವರು ಇಲ್ಲದೆ ಇದ್ದರೆ ನಾನು ಇಂದಿಗೂ ಕಸ್ತೂರಿ ಮಾತ್ರೆ ಮಾರಬೇಕಿತ್ತು ಎಂದು ಸಚಿವ ವಿ.ಸೋಮಣ್ಣ ನೆನಪು ಮಾಡಿಕೊಂಡರು.

ಶನಿವಾರ ನಗರದ ಕಲಾಗ್ರಾಮದಲ್ಲಿ ನಡೆದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ಮೊದಲನೆ ವರ್ಷದ ಪುಣ್ಯಸ್ಮರಣೆಯಲ್ಲಿ ಮಾತನಾಡಿದ ಅವರು, ನಾನು ಮೊದಲು ಬೆಂಗಳೂರಿಗೆ ಬಂದಾಗ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಕಸ್ತೂರಿ ಮಾತ್ರೆ ಮಾರಾಟ ಮಾಡುತ್ತಿದ್ದೆ. ಆ ದಿನಗಳಲ್ಲಿ ನನಗೆ ಪರಿಚಯವಾದ ಸಿದ್ದಲಿಂಗಯ್ಯ ಅವರು, ನನ್ನನ್ನು ಒಬ್ಬ ವ್ಯಕ್ತಿಯ ಬಳಿಗೆ ಕರೆದೊಯ್ದರು. 

ಅವರ ನೆರವಿನಿಂದ ನಾನು ಈಗ ಎಲ್ಲವೂ ಆಗಿದ್ದೇನೆ. ನನ್ನ ಪ್ರಾಣ ಇರುವವರೆಗೆ ಸಿದ್ದಲಿಂಗಯ್ಯ ಅವರ ಕುಟುಂಬದ ನೆರವಿಗೆ, ಅವರ ಕನಸಿನ ಸಾಕಾರದ ಕ್ಷಣಗಳಿಗೆ ನಾನು ಸಾಕ್ಷಿಯಾಗುತ್ತೇನೆ ಎಂದು ನುಡಿದರು.

ಜನರ ಕಿವಿಯಾಗಿ ಗುರುತಿಸಿಕೊಂಡು, ಬಡವರ ಪರವಾಗಿ ತಮ್ಮ ಜೀವನದ ದಿನಗಳನ್ನು ಕಳೆದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರನ್ನು ನೆನಪಿಸಿಕೊಳ್ಳಲು ಒಂದು ಸ್ಮಾರಕ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಸರಕಾರದಿಂದ 1 ಕೋಟಿ ಅನುದಾನ ಕೊಡಿಸುವುದು ನಮ್ಮ ಜವಾಬ್ದಾರಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಮುನಿರತ್ನ ಮಾತನಾಡಿ, ಸಿದ್ದಲಿಂಗಯ್ಯ ಅವರು ನನ್ನ ಅಣ್ಣನಂತಿದ್ದರು. ಅಂತಹವರಿಗೆ ಕೊನೆಯ ಕ್ಷಣದಲ್ಲಿ ಒಂದಷ್ಟು ಗೌರವ ಸಲ್ಲಿಸಿದ್ದೇವೆ ಎಂಬ ಹೆಮ್ಮೆಯಿದೆ. ಆದರೆ, ಮುಂದಿನ ದಿನಗಳಲ್ಲಿ ಅವರ ಸ್ಮಾರಕ ನಿರ್ಮಾಣ ಮತ್ತು ಸೋಮಣ್ಣ ಅವರು ಹೇಳಿದಂತೆ ಸ್ಟಡಿ ಸೆಂಟರ್ ನಿರ್ಮಾಣಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದರು.

ಕಾರ್ಯಕ್ರಮದಲ್ಲಿ ಸಿದ್ದಲಿಂಗಯ್ಯ ಅವರ ನೆನಪಿನಲ್ಲಿ ಡಾ. ಬ್ಯಾಡರಹಳ್ಳಿ ಶಿವರಾಜು ಮತ್ತು ಕವಿ ಮುದಲ್ ವಿಜಯ್ ಅವರ ಸಂಪಾದಕತ್ವದಲ್ಲಿ ಹೊರತಂದಿರುವ ಸಾವಿರಾರು ದನಿಗಳು ಪುಸ್ತಕ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೊಂಡಜ್ಜಿ ಮೋಹನ್, ಸಾಹಿತಿ ಶೂದ್ರ ಶ್ರೀನಿವಾಸ್, ವಿಮರ್ಶಕ ಬೈರಮಂಗಲ ರಾಮೇಗೌಡ, ಗಾಯಕ ಜನ್ನಿ, ಕವಿ ಮುದಲ್ ವಿಜಯ್, ಬ್ಯಾಡರಹಳ್ಳಿ ಶಿವರಾಜ್, ಸಿದ್ದಲಿಂಗಯ್ಯ ಪುತ್ರಿ ಡಾ. ಮಾನಸಾ ಸಿದ್ದಲಿಂಗಯ್ಯ, ಸಹೋದರ ಶಿವಶಂಕರ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X