Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನವ ತ್ಯಾಜ್ಯ ನಿರ್ವಹಣೆ ಇನ್ನು ಸುಗಮ :...

ಮಾನವ ತ್ಯಾಜ್ಯ ನಿರ್ವಹಣೆ ಇನ್ನು ಸುಗಮ : ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Jun 2022 10:44 PM IST
share
ಮಾನವ ತ್ಯಾಜ್ಯ ನಿರ್ವಹಣೆ ಇನ್ನು ಸುಗಮ : ಸಚಿವ ಸುನೀಲ್ ಕುಮಾರ್

ಕಾರ್ಕಳ : ಪರಸಭಾ ವ್ಯಾಪ್ತಿಯಲ್ಲಿ ಮಾನವ ತ್ಯಾಜ್ಯ ನಿರ್ವಹಣೆ ಇನ್ನು ಸುಗಮವಾಗಲಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.

ಪುಲ್ಕೇರಿ ಲಕ್ಷ್ಮೀದೇವಿ ಸಭಾಭವನದಲ್ಲಿ ಶನಿವಾರ ಸ್ಲಡ್ಜ್ ಹಾಗೂ ಸೆಪ್ಟೇಜ್ ಮ್ಯಾನೇಜ್ ಮೆಂಟ್ ಯೋಜನೆಯ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲ ಬಾರಿ ಪುರಸಭಾ ವ್ಯಾಪ್ತಿಯಲ್ಲಿ ವಿನೂತನವಾದ ಮಾನವ ತ್ಯಾಜ್ಯ ನಿರ್ವಹಣೆಯ ಸ್ಲಡ್ಜ್ ಹಾಗೂ ಸೆಪ್ಟೇಜ್ ಮ್ಯಾನೇಜ್‌ಮೆಂಟ್ ಯೋಜನೆ ಕಾರ್ಯಗತವಾಗುತ್ತಿದೆ. ಕಾರ್ಕಳದಲ್ಲಿ ಹಳೆಯ ಯುಜಿಡಿ ಪದ್ಧತಿ ಕೇವಲ ಪ್ರಧಾನ ರಸ್ತೆ, ಕಾಬೆಟ್ಟು ಮೊದಲಾದ ಎರಡು ಮೂರು ಕಡೆ ಮಾತ್ರವಿದ್ದು ವಿಸ್ತಾರವಾಗಿ ಬಳೆದ ನಗರಕ್ಕೆ ಅದು ಸಾಕಾಗುತ್ತಿರಲಿಲ್ಲ. ಯುಜಿಡಿ ಪದ್ಧತಿಯನ್ನು ಮತ್ತೂ ವಿಸ್ತರಿಸಬೇಕಾಗಿತ್ತು. ಅದರ ಖರ್ಚೂ ಕೂಡಾ ರೂ.130 ಕೋಟಿಗೂ ಅಧಿಕವಾಗಿ ವಿನಿಯೋಗಿಸಬೇಕಾಗಿತ್ತು. ಅದೇ ಸಮಯದಲ್ಲಿ ಈ ಹೊಸ ಸ್ಲಡ್ಜ್ ಹಾಗೂ ಸೆಪ್ಟೇಜ್ ಮ್ಯಾನೇಜ್ ಮೆಂಟ್ ಯೋಜನೆಯ ಮಾಹಿತಿ ತಿಳಿಯಿತು.

ರಾಜ್ಯದ ದೇವನಹಳ್ಳಿಯಲ್ಲಿ ಈ ಯೋಜನೆ ಯಶಸ್ವಿಯಾಗಿ ನಿರ್ವಹಣೆಯಾಗುತ್ತಿದ್ದ ವಿಚಾರವನ್ನೂ ಅಲ್ಲಿಗೆ ತೆರಳಿ ಗಮನಿಸಿದ ನಂತರ ಈ ಯೋಜನೆಯನ್ನು ಕಾರ್ಕಳದಲ್ಲಿ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದನ್ನು ಸರ್ಕಾರ ಮಂಜೂರು ಮಾಡಿದೆ. ಯುಜಿಡಿ ಎಲ್ಲ ಕಡೆ ಯಶಸ್ವಿಯಾಗಿಲ್ಲ. ಹಿಂದಿನ ಯುಜಿಡಿ ಇದ್ದಂತೆಯೇ ಬಳಸಿ ಅದಿಲ್ಲದ ಕಡೆ ಹಾಗೂ ಇತರೆಡೆ ನೂತನ ಮನೆ, ನಿವೇಶನಗಳಿಗೆ ಈಗಿನ ಸ್ಲಡ್ಜ್ ಹಾಗೂ ಸೆಪ್ಟೇಜ್ ಮ್ಯಾನೇಜ್‌ಮೆಂಟ್ ಯೋಜನೆ ಬಳಸಲಾಗುತ್ತಿದೆ. ಇದರಿಂದ ಮನಯ ಪಿಟ್‌ಗಳ ನಿರ್ವಹಣೆ ಸುಗಮವಾಗಲಿದ್ದು, ಗೊಬ್ಬರ ನಿರ್ಮಾಣದಿಂದ ಪುರಸಭೆಗೂ ಉತ್ತಮ ಆದಾಯ ದೊರೆಯಲಿದೆ. ಕಲ್ಮಶ ರಹಿತ ಪರಿಸರ ಸ್ನೇಹಿ ಯೋಜನೆ ಇದಾಗಿದ್ದು ಸ್ವಚ್ಛ ಕಾರ್ಕಳ ಸ್ವರ್ಣ ಕಾರ್ಕಳ ಪರಿಕಲ್ಪನೆಗೆ ಪೂರಕವಾಗಿದೆ ಎಂದರು.

ರಾಜ್ಯ ಗೇರು ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಪುರಸಭಾಧ್ಯಕ್ಷೆ ಸುಮಾಕೇಶವ್, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್ ಇದ್ದರು. ಮುಖ್ಯಾಧಿಕಾರಿ ರೂಪಾ ಶೆಟ್ಟಿ ಸ್ವಾಗತಿಸಿದರು. ಸುಹಾಸ ಶೆಟ್ಟಿ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X