Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸರ್ಕಾರದ ಕಾನೂನು, ಏಕಮುಖ...

ಬಿಜೆಪಿ ಸರ್ಕಾರದ ಕಾನೂನು, ಏಕಮುಖ ತೀರ್ಮಾನದಿಂದ ಯುವಕರ ಭವಿಷ್ಯ ನಾಶ: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ11 Jun 2022 10:55 PM IST
share
ಬಿಜೆಪಿ ಸರ್ಕಾರದ ಕಾನೂನು, ಏಕಮುಖ ತೀರ್ಮಾನದಿಂದ ಯುವಕರ ಭವಿಷ್ಯ ನಾಶ: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ

ಮೈಸೂರು,ಜೂ.11: 'ಬಿಜೆಪಿ ಸರ್ಕಾರದ ನಿರ್ಧಾರ ಕಾನೂನು, ಏಕಮುಖ ತೀರ್ಮಾನ ದೇಶದ ಯುವಕರ ಭವಿಷ್ಯ ನಾಶ ಮಾಡಿವೆ. ಅವರ ವಿರುದ್ಧ ಮತ ನೀಡುವ ಮೂಲಕ ಸಂದೇಶ ಕಳುಹಿಸುವ ಅವಶ್ಯಕತೆ ಇದೆ' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಕಾಂಗ್ರಸ್ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್  13ರಂದು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಇದೆ. ಮತದಾರರನ್ನ ಭೇಟಿ ಮಾಡಿ ಇಂದಿನ ಬಿಜೆಪಿ ಸರ್ಕಾರ ಆಡಳಿತದ ವೈಖರಿ ಬಗ್ಗೆ ತಿಳಿಸಲಾಗಿದೆ. ಈ ಚುನಾವಣಾ ಫಲಿತಾಂಶ ರಾಜ್ಯ ಹಾಗೂ ದೇಶಕ್ಕೆ ಸ್ಪಷ್ಟ ಸಂದೇಶ ಕಳುಹಿಸುವ ಚುನಾವಣೆ. ಈ ನಾಡಿನ ಹಿತ ಕಾಯುವ ಗುರುತರ ಜವಾಬ್ದಾರಿ ಪದವೀಧರ ಮತದಾರರ ಮೇಲೆ ಇದೆ. ರಾಜಕೀಯ ಪಕ್ಷದ ಪ್ರಭಾವ ಜನರು ಹಾಗೂ ಸಮಾಜದ ಮೇಲಿನ ಪರಿಣಾಮ, ದುಷ್ಪರಿಣಾಮ ಗ್ರಹಿಸಿ ಸ್ಪಷ್ಟ ಸಂದೇಶ ರವಾನೆ ಮಾಡುವ ಚುನಾವಣೆ ಎಂದರು.

ಇಂದಿರಾಗಾಂಧಿ ಪ್ರಧಾನಿ ಆಗಿದ್ದಾಗ ಶೇ 12.13 ರಷ್ಟು ಮಾತ್ರ ಶಿಕ್ಷಣ ಇತ್ತು. ವಿಶೇಷ ಶಿಕ್ಷಣ ನೀಡುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿತ್ತು. ರಾಜೀವ್ ಗಾಂಧಿ ಕೊಟಾರಿಯಾ ಕಮಿಷನ್ ವರದಿಯಂತೆ ಶಿಕ್ಷಣ ವ್ಯವಸ್ಥೆ ಕಲ್ಪಿಸಿಕೊಡಲಾಯ್ತು. ಇಂದು 20:20 ಪಾಲಿಸಿಯಲ್ಲಿ ಯಾವ ಚರ್ಚೆ ಆಗದೆ ಏಕಮುಖ ಶಿಕ್ಷಣ ನೀತಿ ತಂದಿದ್ದಾರೆ. ಕೃಷಿಕರು, ಕಾರ್ಮಿಕರು, ಬಡವರಿಗೆ ಈ ನೀತಿ ಮಾರಕವಾಗಿದೆ. ಈ ಶಿಕ್ಷಣ ನೀತಿ ಅವೈಜ್ಞಾನಿಕ. ಇದರಿಂದ ಯುವಕರು, ಭಾರತದ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಎಚ್.ಸಿ.ಮಹದೇವಪ್ಪ ಗುಡುಗಿದರು.

ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ಚರಿತ್ರೆ ತಿರುವು ಹಾಕಲಾಗುತ್ತಿದೆ. ಅಂಬೇಡ್ಕರ್, ಬಸವಣ್ಣ, ಸಂತರು, ಸಾಹಿತಿಗಳ ಇತಿಹಾಸ ತಿರುಚಲಾಗುತ್ತಿದೆ. ಮನುವಾದದ ಧರ್ಮ, ಜಾತಿ ಸೃಷ್ಟಿ ಮಾಡುವ ಕೆಲಸ ಮಾಡಿ ಶಿಕ್ಷಣವನ್ನು ಗೊಂದಲದ ಗೂಡಾಗಿಸಿದ್ದಾರೆ. ಧರ್ಮ ಜಾತಿ ಆಧಾರಿತ ಶಿಕ್ಷಣ ನೀಡಲು ಮುಂದಾಗಿದೆ. ಸುಗ್ರೀವಾಜ್ಞೆ ಮೂಲಕ ಕಾನೂನು ಬಲವಂತವಾಗಿ ಹೇರುವ ಕೆಲಸ ಮಾಡಲಾಗುತ್ತಿದೆ. ಇವೆಲ್ಲವನ್ನ ಗಮನದಲ್ಲಿಟ್ಟುಕೊಂಡು ಮತದಾನ ಮಾಡಬೇಕು. ಬಿಜೆಪಿ ಸರ್ಕಾರ ತನ್ನ ಅಂಗ ಸಂಸ್ಥೆಗಳ ಮೂಲ ಅವರನ್ನು ಕೆಲಸ ಮಾಡಲು ಬಿಟ್ಟು ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಹರಿಹಾಯ್ದರು. 

ಇದೇ ವೇಳೆ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ವಾಗ್ದಾಳಿ ನಡೆಸಿದ ಎಚ್.ಸಿ.ಮಹದೇವಪ್ಪ, ಪ್ರತಾಪ್ ಸಿಂಹ ಒಬ್ಬ ಅಂಕಣಕಾರ ಅಷ್ಟೆ. ಸಿದ್ದರಾಮಯ್ಯ ಬೆಸ್ಟ್ ಚೀಫ್ ಮಿನಿಸ್ಟರ್ ಆಫ್ ದಿ ಕಂಟ್ರಿ. ಅವರಿಗೆ ಆರ್ಥಿಕತೆ ಏನು ಗೊತ್ತು ಅಂತ ಪ್ರತಾಪ್ ಸಿಂಹ ಪ್ರಶ್ನಿಸುತ್ತಾರೆ. ಮೈಸೂರು ಬೆಂಗಳೂರು ರಸ್ತೆಯನ್ನ ಯುಪಿಎ ಸರ್ಕಾರ ಅವಧಿಯಲ್ಲಿ ಸ್ಟೇಟ್ ಹೈವೆಯನ್ನ ನ್ಯಾಷನಲ್ ಹೈವೆ ಆಗಿ ಅಪ್ ಗ್ರೇಡ್ ಮಾಡಲು ತೀರ್ಮಾನ ಮಾಡಲಾಗಿತ್ತು. 2500 ಕಿಮೀ ರಸ್ತೆ ಅಭಿವೃದ್ಧಿ ಮಾಡಲು ಯುಪಿಎ ಸರ್ಕಾರ ನಿರ್ಧಾರ ಮಾಡಲಾಗಿತ್ತು. ಆಗ ನಾನು ಲೋಕೋಪಯೋಗಿ ಸಚಿವ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಈ ತೀರ್ಮಾನ ಮಾಡಿದ ಮೇಲೆ ಮುಂದಿನ ಸರ್ಕಾರ ಮಾಡಲೇಬೇಕಾಯಿತು. ಆಗ ಅವರು ಎಂಪಿನೇ ಆಗಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X