Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಮಾರಸ್ವಾಮಿ ಅವಕಾಶವಾದಿ ತರ್ಕದಲ್ಲೇ...

ಕುಮಾರಸ್ವಾಮಿ ಅವಕಾಶವಾದಿ ತರ್ಕದಲ್ಲೇ ಕಾಂಗ್ರೆಸ್‍ನ ಉತ್ತರವೂ ಅಡಗಿದೆ: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ12 Jun 2022 7:41 PM IST
share
ಕುಮಾರಸ್ವಾಮಿ ಅವಕಾಶವಾದಿ ತರ್ಕದಲ್ಲೇ ಕಾಂಗ್ರೆಸ್‍ನ ಉತ್ತರವೂ ಅಡಗಿದೆ: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು, ಜೂ. 12: ‘ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕೆಂಬ ತರ್ಕ ಬಳಸುವ ಕುಮಾರಸ್ವಾಮಿ ಅವರಿಗೆ 2018ರ ಮೈತ್ರಿಯ ವೇಳೆ ಕಾಂಗ್ರೆಸ್ ಪಕ್ಷವು ಹೆಚ್ಚು ಮತ ಹೊಂದಿತ್ತು ಎಂಬ ಅಂಶವನ್ನು ಬದಿಗೆ ಸರಿಸಿ ತಾವೇ ಮುಖ್ಯಮಂತ್ರಿ ಆಗುತ್ತಾರೆ' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ದಿನಕ್ಕೊಮ್ಮೆ ಗಂಟೆಗೊಮ್ಮೆ ಬದಲಾಗುವ ಇವರ ರೀತಿಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸ್ವತಃ ಜೆಡಿಎಸ್ ಪಕ್ಷದ ಕಾರ್ಯಕರ್ತರೇ ಸೋತಿದ್ದು ಇವರ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಮೈತ್ರಿ ಇಲ್ಲದಿದ್ದರೆ ರಾಜ್ಯಸಭೆಯಲ್ಲಿ ಸಂಖ್ಯೆಯ ಆಧಾರಿತವಾಗಿ ಬಿಜೆಪಿಯೇ ಗೆಲ್ಲುತ್ತಿತ್ತು ಎಂಬುದು ಎಲ್ಲರಿಗೂ ಗೊತ್ತಿದ್ದ ವಿಚಾರವಾಗಿತ್ತು. ಆದರೆ, ಬಿಜೆಪಿ ಗೆಲ್ಲಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳುತ್ತಿರುವ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಬೆಂಬಲ ಸಿಗಲಿಲ್ಲ ಎಂದು ಅವರ ಮೇಲೆಯೇ ಗೂಬೆ ಕೂರಿಸಲು ಹೊರಟಿರುವುದು ಹಾಸ್ಯಾಸ್ಪದ ಸಂಗತಿ' ಎಂದು ಆರೋಪಿಸಿದ್ದಾರೆ.

‘ರೈತ ವಿರೋಧಿಯಾಗಿದ್ದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ವಿರುದ್ಧ ಸದನದ ಹೊರಗೆ ಪ್ರತಿಭಟಿಸಿ ಸದನದ ಒಳಗೆ ಬೆಂಬಲಿಸುವ ಮೂಲಕ ಮಹಾ ನಾಟಕ ಆಡಿದ್ದ ಜೆಡಿಎಸ್‍ನವರು, ನಿರ್ದಿಷ್ಟ ಕೋಮಿನ ಜನರನ್ನು ಟಾರ್ಗೆಟ್ ಮಾಡಿಕೊಂಡು ಈಗಾಗಲೇ ಜಾರಿಯಲ್ಲಿದ್ದರೂ ಮತ್ತೊಮ್ಮೆ ಅದೇ ಕಾನೂನನ್ನು ರೂಪಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ದನಿ ಎತ್ತದೇ ಬೆಂಬಲಿಸಿದರು' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಜೊತೆಗೆ ಅತಿ ಹೆಚ್ಚಿನ ಗೋಮಾಂಸ ರಫ್ತು ಮಾಡುತ್ತಲೇ ಗೋಹತ್ಯೆ ನಿಷೇಧ ಎಂಬ ನಾಟಕವಾಡಿದ ಬಿಜೆಪಿಗರ ದ್ವಿಮುಖ ನೀತಿಯ ವಿರುದ್ದ ಮಾತನ್ನೇ ಆಡದ ಜೆಡಿಎಸ್‍ನಲ್ಲಿ ಜಾತ್ಯತೀತತೆ ಮತ್ತು ಜನಪರ ನೀತಿ ಉಳಿದಿದೆ ಎಂದು ನಾವು ಭಾವಿಸುವುದಾದರೂ ಹೇಗೆ? ಅಧಿಕಾರ ಪಡೆಯುವದಕ್ಕೆ ಮಾತ್ರ ಜಾತ್ಯತೀತತೆ ಎಂಬ ಪದವನ್ನು ಬಳಸಿಕೊಳ್ಳುವ ಕುಮಾರಸ್ವಾಮಿಗೆ, ಜಾತ್ಯಾತೀತತೆ ಎಂಬುದು ಅಧಿಕಾರವನ್ನು ಬಿಟ್ಟು ಕೊಡಬೇಕಾದಾಗಲೂ ಸಮನಾಗಿರುತ್ತದೆ ಎಂಬ ಅಂಶವು ಅರ್ಥ ಅರ್ಥವಾಗಬೇಕಲ್ಲವೇ?' ಎಂದು ಮಹದೇವಪ್ಪ ಕೇಳಿದ್ದಾರೆ.

‘ಲೋಕಸಭೆಯಲ್ಲಿ ಸೋತ ದೇವೇಗೌಡರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿ ರಾಜ್ಯಸಭೆಗೆ ಕಳಿಸಿದೆ. 37 ಸ್ಥಾನವಿದ್ದ ಜೆಡಿಎಸ್‍ಗೆ ಮುಖ್ಯಮಂತ್ರಿ ಸ್ಥಾನವನ್ನೂ ನೀಡಿದೆ. ಈ ನಡೆಯನ್ನು ಜೆಡಿಎಸ್ ಗೌರವಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸದೇ ಇದ್ದ ಮೇಲೆ, ಅವರು ಯಾವ ಜಾತ್ಯತೀತತೆ ಬಗ್ಗೆ ಮಾತನಾಡುತ್ತಿದ್ದಾರೆ? ಜಾತ್ಯತೀತ ರಾಜಕಾರಣ ಎಂಬುದು ಗಂಟೆಗೊಂದು ಸಲ ಬದಲಿಸುವ ಇವರ ಅಧಿಕಾರ ಮೋಹಿ ಮನಸ್ಥಿತಿಗೆ ಬಲಿಯಾಗುತ್ತದೆಯಲ್ಲಾ ಎಂದು ನೆನೆದು ಬೇಸರವಾಗುತ್ತಿದೆ. ಈ ಹಿಂದೆ ಜಾತ್ಯತೀತತೆ ಎಂದರೆ ಏನು ಎಂದು ಕೇಳಿದ್ದ ಕುಮಾರಸ್ವಾಮಿ ಜಾತ್ಯತೀತತೆಯ ಬ್ಯಾನರ್ ಮತ್ತು ಅದರ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯ ಸಾಕಷ್ಟಿದೆ' ಎಂದು ಮಹದೇವಪ್ಪ ತಿರುಗೇಟು ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X