Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷ್ಕೃತ ಪಠ್ಯಪುಸ್ತಕಗಳ ಮೂಲ ಉದ್ದೇಶವೇ...

ಪರಿಷ್ಕೃತ ಪಠ್ಯಪುಸ್ತಕಗಳ ಮೂಲ ಉದ್ದೇಶವೇ ಪ್ರಾದೇಶಿಕ ಸಂಸ್ಕೃತಿಯನ್ನು ಗೌಣಗೊಳಿಸುವುದು: ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ12 Jun 2022 10:08 PM IST
share
ಪರಿಷ್ಕೃತ ಪಠ್ಯಪುಸ್ತಕಗಳ ಮೂಲ ಉದ್ದೇಶವೇ ಪ್ರಾದೇಶಿಕ ಸಂಸ್ಕೃತಿಯನ್ನು ಗೌಣಗೊಳಿಸುವುದು: ಪುರುಷೋತ್ತಮ ಬಿಳಿಮಲೆ

ಬೆಂಗಳೂರು, ಜೂ. 12: ‘ಪರಿಷ್ಕೃತ ಪಠ್ಯಪುಸ್ತಕಗಳ ಮೂಲ ಉದ್ದೇಶವೇ ಪ್ರಾದೇಶಿಕ ಸಂಸ್ಕೃತಿಯನ್ನು ಗೌಣಗೊಳಿಸುವುದು ಎಂಬ ಅರ್ಥದಲ್ಲಿ, ಪ್ರಾದೇಶಿಕ ಅಸ್ಮಿತೆಯನ್ನು ತ್ಯಜಿಸಿ ರಾಷ್ಟ್ರೀಯ ಅಸ್ಮಿತೆಯನ್ನು ಕಟ್ಟಬೇಕು ಎಂದು ಮಂಗಳೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಪಿ.ಎಲ್.ಧರ್ಮ ಕರೆಕೊಟ್ಟಿರುವುದು ಖಂಡನಾರ್ಹ' ಎಂದು ಲೇಖಕ ಪುರುಷೋತ್ತಮ ಬಿಳಿಮಲೆ ಅವರು ಕಿಡಿಕಾರಿದ್ದಾರೆ. 

ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ‘ಪರಿಷ್ಕೃತ ಪಠ್ಯ ಪುಸ್ತಕಗಳ ಪರವಾಗಿ ಮಾಜಿ ಸಚಿವ ಸಿ.ಟಿ. ರವಿ ಅವರ ಜೊತೆ ಕುಳಿತುಕೊಂಡು ಈ ಮಾತುಗಳನ್ನು ಪ್ರೊ.ಪಿ.ಎಲ್.ಧರ್ಮ ಅವರು ಹೇಳಿದ್ದಾರೆ. ಅವರ ರಾಷ್ಟ್ರೀಯತೆಯ ಪರಿಕಲ್ಪನೆಯಲ್ಲಿ ಕುವೆಂಪು, ಬಸವಣ್ಣ ಮತ್ತು ಅಂಬೇಡ್ಕರ್ ಅವರಿಗೆ ಸ್ಥಾನವಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಾದೇಶಿಕವಲ್ಲದ ರಾಷ್ಟ್ರೀಯತೆ ಎಂದರೇನು, ಅದನ್ನು ಕಟ್ಟುವ ಪರಿಕರಗಳು ಯಾವುವು, ಅದರಲ್ಲಿ ಯಾರಿಗೆಲ್ಲ ಜಾಗ ಇರುತ್ತದೆ. ರಶಿಯಾ ಉಕ್ರೇನಿನ ಗಡಿಯನ್ನು ನಮ್ಮ ಕಣ್ಣೆದುರೇ ಬದಲಾಯಿಸುತ್ತಿರುವ ಈ ಸನ್ನಿವೇಶದಲ್ಲಿ ರಾಷ್ಟ್ರದ ಗಡಿರೇಖೆಗಳನ್ನು ಎಲ್ಲಿಗೆ ನಿಲ್ಲಿಸೋಣ, ಕನ್ನಡ, ತುಳು, ಕೊಡವ, ಅರೆಭಾಷೆ, ಪಂಪ, ಬಸವ,ಅಕ್ಕ,  ಕುವೆಂಪು, ಯಕ್ಷಗಾನ, ಮಲೆಯ ಮಾದೇಶ್ವರ, ಜುಂಜಪ್ಪ, ಬೀರಪ್ಪ, ಮೈಲಾರ, ಮೊದಲಾದುವುಗಳನ್ನು  ಗೌಣಗೊಳಿಸಿ ಕಟ್ಟುವ ರಾಷ್ಟ್ರೀಯತೆಯಲ್ಲಿ ಸ್ವತ: ಪ್ರೊ. ಧರ್ಮ ಎಲ್ಲಿರುತ್ತಾರೆ' ಎಂದು ಪ್ರಶ್ನಿಸಿದ್ದಾರೆ.

‘ಭಾರತದಂಥ ಬಹುಭಾಷಾ ಸಂಸ್ಕೃತಿಯ ನೆಲದಲ್ಲಿ ಕಟ್ಟಲಾಗುವ ರಾಷ್ಟ್ರೀಯತೆಗೆ ಪ್ರಾದೇಶಿಕತೆಯೇ ಬಲವಾದ ತಳಹದಿ ಆಗಿದೆ. ಪ್ರಾದೇಶಿಕತೆಯೇ ಇಲ್ಲದೆ ಕಟ್ಟುವ ಯಾವುದೇ ಕಟ್ಟಡ ಬಹುಬೇಗ ಕುಸಿಯುತ್ತದೆ' ಎಂದು ಪುರುಷೋತ್ತಮ ಬಿಳಿಮಲೆ ಅವರು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X