Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುಳಿಗನ ಕಟ್ಟೆ ನಿರ್ಮಾಣ ವಿವಾದ; ಪೊಲೀಸರ...

ಗುಳಿಗನ ಕಟ್ಟೆ ನಿರ್ಮಾಣ ವಿವಾದ; ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯ

ವಾರ್ತಾಭಾರತಿವಾರ್ತಾಭಾರತಿ13 Jun 2022 12:23 PM IST
share

ಪಡುಬಿದ್ರಿ: ಇಲ್ಲಿನ ಕಂಚಿನಡ್ಕ ಮಿಂಚಿನಬಾವಿ ಕೋಡ್ದಬ್ಬು ದೈವಸ್ಥಾನದಲ್ಲಿ ನಿರ್ಮಿಸಿದ ಗುಳಿಗನ ಕಟ್ಟೆ ವಿವಾದಕ್ಕೆ ಕಾರಣವಾಗಿ, ರವಿವಾರ ರಾತ್ರಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯಗೊಂಡಿತು.

ಇಲ್ಲಿನ ಕಂಚಿನಡ್ಕದ ಮಿಂಚಿನಬಾವಿ ಶ್ರೀ ಕೋಡ್ದಬ್ಬು ದೇವಸ್ಥಾನದ ಎದುರಲ್ಲಿ ಪಂಚಾಯತ್ ರಸ್ತೆಗೆ ತಗಡು ಚಪ್ಪರ ನಿರ್ಮಿಸಿ ಗುಳಿಗನ ಕಟ್ಟೆ ಮಾಡಲಾಗಿತ್ತು. ಇದು ಸ್ಥಳೀಯರ ವಿರೋಧಕ್ಕೆ ಕಾರಣವಾಯಿತು. ಈ ವೇಳೆ ಅಲ್ಲಿ ಎರಡು ತಂಡಗಳು ಜಮಾಯಿಸಿದ್ದು, ಒಂದು ತಂಡ "ಕಟ್ಟೆಯನ್ನು ತೆರವುಗೊಳಿಸಬೇಕು, ಇದು ಮಳೆಗಾಲದಲ್ಲಿ ನೀರು ಹೋಗುವ ತೋಡು. ಅಲ್ಲದೆ ಇದುವರೆಗೂ ಇಲ್ಲದ ಕಟ್ಟೆಯನ್ನು ಏಕಾಏಕಿ ಸ್ಥಾಪಿಸಲಾಗಿದೆ. ಇದನ್ನು ತೆರವುಗೊಳಿಸಬೇಕು" ಎಂದು ಪಟ್ಟು ಹಿಡಿದರು.

ಯಾವುದೇ ಕಾರಣಕ್ಕೂ ಇದನ್ನು ತೆರವುಗೊಳಿಸುವುದಿಲ್ಲ ಎಂದು ಮಿಂಚಿನ ಬಾವಿ ಸಮಿತಿ ಹಾಗೂ ಹಿಂದುತ್ವ ಸಂಘಟನೆಗಳು ಪಟ್ಟು ಹಿಡಿಯಿತು. ಸುಮಾರು ಒಂದೂವರೆ ಗಂಟೆ ಪಡುಬಿದ್ರಿ ಪೊಲೀಸರು ಸ್ಥಳದಲ್ಲಿದ್ದು ಪರಿಸ್ಥಿತಿ ನಿಯಂತ್ರಿಸುತ್ತಿದ್ದರು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ವಿವಾದಿತ ಕಟ್ಟೆಯನ್ನು ತೆರವುಗೊಳಿಸಲಾಗಿದೆ.

ಕಂಚಿನಡ್ಕ ಮಿಂಚಿನಬಾವಿ ಕೋಡ್ದಬ್ಬು ದೈವಸ್ಥಾನದ ಎದುರಲ್ಲಿ ಪಂಚಾಯತ್ ರಸ್ತೆಗೆ ತಗಡು ಚಪ್ಪರ ನಿರ್ಮಾಣಕ್ಕೆ ಸಂಬಂಧಿಸಿ ಸಮೀಪದಲ್ಲಿರುವ ಎರಡು ಮನೆಯವರು ಪಡುಬಿದ್ರಿ ಗ್ರಾಮ ಪಂಚಾಯತ್‌ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ಕಂಚಿನಡ್ಕದಲ್ಲಿ ಉಂಟಾಗುತ್ತಿರುವ ಬೆಳವಣಿಗೆ ಸಂಬಂಧಿಸಿ ಕಳೆದ ವಾರ ಮಿಂಚಿನ ಬಾವಿ ಕ್ಷೇತ್ರದ ಬಳಿಯ ನಿವಾಸಿಗಳು ತಗಡು ಚಪ್ಪರ ನಿರ್ಮಾಣದ ಕುರಿತಾಗಿ ನೀಡಿರುವ ಆಕ್ಷೇಪಣೆಗಳನ್ನು ವಾಪಾಸು ಪಡೆದಿದ್ದರು.

ಸಾರ್ವಜನಿಕ ರಸ್ತೆಯಾಗಿರುವುದರಿಂದ ಪಂಚಾಯತ್ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಪಂಚಾಯಿತಿ ಏನು ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಅದು ಅವರಿಗೆ ಬಿಟ್ಟ ವಿಚಾರ. ಮುಂದೆ ಏನಾದರೂ ಅನಾಹುತ ಆದಲ್ಲಿ ಪಂಚಾಯಿತ್ ಹೊಣೆ ಎಂದು ಆಕ್ಷೇಪ ಹಿಂಪಡೆದು ಮನೆಯವರು ಪಂಚಾಯಿತಿಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X