Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧದ ಅವಧಿಯಲ್ಲಿ ತೈಲ ರಫ್ತಿನಿಂದ 98...

ಯುದ್ಧದ ಅವಧಿಯಲ್ಲಿ ತೈಲ ರಫ್ತಿನಿಂದ 98 ಬಿಲಿಯನ್ ಡಾಲರ್ ಆದಾಯ ಗಳಿಸಿದ ರಶ್ಯ

ವಾರ್ತಾಭಾರತಿವಾರ್ತಾಭಾರತಿ13 Jun 2022 11:48 PM IST
share
ಯುದ್ಧದ ಅವಧಿಯಲ್ಲಿ ತೈಲ ರಫ್ತಿನಿಂದ 98 ಬಿಲಿಯನ್ ಡಾಲರ್ ಆದಾಯ ಗಳಿಸಿದ ರಶ್ಯ

ಪ್ಯಾರಿಸ್, ಜೂ.13: ಉಕ್ರೇನ್‌ನಲ್ಲಿನ ಯುದ್ಧದ ಆರಂಭವಾದ 100 ದಿನಗಳಲ್ಲಿ ರಶ್ಯವು ಪಳೆಯುಳಿಕೆಯ ಇಂಧನ ರಫ್ತಿನಿಂದ 98 ಬಿಲಿಯನ್ ಡಾಲರ್‌ನಷ್ಟು ಆದಾಯ ಗಳಿಸಿದ್ದು ಇದರಲ್ಲಿ ಬಹುತೇಕ ತೈಲ ಯುರೋಪಿಯನ್ ಯೂನಿಯನ್‌ಗೆ ರಫ್ತಾಗಿದೆ ಎಂದು ಸೋಮವಾರ ಪ್ರಕಟವಾದ ವರದಿ ಹೇಳಿದೆ.

ರಶ್ಯ ಗಳಿಸಿದ 89 ಮಿಲಿಯನ್ ಡಾಲರ್ ಮೊತ್ತದಲ್ಲಿ ಯುರೋಪಿಯನ್ ಯೂನಿಯನ್‌ನ ಪಾಲು ಸುಮಾರು 60 ಬಿಲಿಯನ್ ಡಾಲರ್ (61%) ಆಗಿದೆ. ಉಳಿದಂತೆ ಚೀನಾ 13.48 ಬಿಲಿಯನ್ ಡಾಲರ್, ಜರ್ಮನಿ 12.94 ಬಿಲಿಯನ್ ಡಾಲರ್, ಇಟಲಿ 8.16 ಬಿಲಿಯನ್ ಡಾಲರ್ ಮೌಲ್ಯದ ತೈಲವನ್ನು ರಶ್ಯದಿಂದ ಆಮದು ಮಾಡಿಕೊಂಡಿದೆ ಎಂದು ವರದಿ ಹೇಳಿದೆ. ಕಚ್ಛಾ ತೈಲದ ರಫ್ತಿನಿಂದ 46 ಬಿಲಿಯನ್ ಡಾಲರ್ ಗಳಿಸಿದ್ದರೆ ಉಳಿದ ಆದಾಯ ಪೈಪ್‌ಲೈನ್ ಗ್ಯಾಸ್, ತೈಲೋತ್ಪನ್ನಗಳು, ಎಲ್‌ಎನ್‌ಜಿ ಮತ್ತು ಕಲ್ಲಿದ್ದಲು ರಫ್ತಿನಿಂದ ಸಂಗ್ರಹವಾಗಿದೆ.

 ಮೇ ತಿಂಗಳಿನಲ್ಲಿ ರಶ್ಯದ ರಫ್ತಿಗೆ ತುಸು ಹಿನ್ನಡೆಯಾದರೂ ಪಳೆಯುಳಿಕೆ ಇಂಧನದ ಜಾಗತಿಕ ದರ ಗಗನಕ್ಕೇರಿದ್ದು ರಶ್ಯಕ್ಕೆ ವರದಾನವಾಗಿದ್ದು ರಫ್ತು ಆದಾಯ ದಾಖಲೆ ಮಟ್ಟಕ್ಕೇರಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಶ್ಯದ ಸರಾಸರಿ ರಫ್ತು ದರ 60% ಏರಿಕೆಯಾಗಿದೆ. ಚೀನಾ, ಭಾರತ, ಯುಎಇ ಮತ್ತು ಫ್ರಾನ್ಸ್ ಸೇರಿದಂತೆ ಕೆಲವು ದೇಶಗಳು ರಶ್ಯದಿಂದ ಖರೀದಿ ಹೆಚ್ಚಿಸಿವೆ. ಅಲ್ಲದೆ ಇದರಲ್ಲಿ ಬಹುತೇಕ ಖರೀದಿ ಪ್ರಕ್ರಿಯೆ ತಕ್ಷಣ ಹಣ ಪಾವತಿಸಿ ನಡೆದಿದೆ ಎಂದು ವರದಿ ಹೇಳಿದೆ.

ರಶ್ಯದೊಂದಿಗಿನ ಎಲ್ಲಾ ವ್ಯವಹಾರಗಳನ್ನೂ ರದ್ದುಗೊಳಿಸಿದರೆ ಮಾತ್ರ ಆ ದೇಶದ ಆದಾಯ ಮೂಲಕ್ಕೆ ಧಕ್ಕೆಯಾಗಲಿದೆ ಎಂದು ಉಕ್ರೇನ್ ಹಲವು ಬಾರಿ ಆಗ್ರಹಿಸಿರುವಂತೆಯೇ ಫಿನ್ಲ್ಯಾಂಡ್ ಮೂಲದ ‘ಸೆಂಟರ್ ಫಾರ್ ರಿಸರ್ಚ್ ಆನ್ ಎನರ್ಜಿ ಆ್ಯಂಡ್ ಕ್ಲೀನ್ ಏರ್(ಸಿಆರ್‌ಇಎ)’ ಈ ವರದಿ ಬಿಡುಗಡೆಗೊಳಿಸಿದೆ. ರಶ್ಯದಿಂದ ಆಮದಾಗುವ ತೈಲವನ್ನೇ ಬಹುತೇಕ ಅವಲಂಬಿಸಿರುವ ಯುರೋಪಿಯನ್ ಯೂನಿಯನ್ ಈ ತಿಂಗಳ ಆರಂಭದಲ್ಲಿ ತೈಲ ಆಮದನ್ನು ಕಡಿಮೆಗೊಳಿಸುವುದಾಗಿ ಘೋಷಿಸಿತ್ತು. ರಶ್ಯದಿಂದ ಆಮದಾಗುವ ಅಡುಗೆ ಅನಿಲವನ್ನು ಈ ವರ್ಷಾಂತ್ಯದೊಳಗೆ ಮೂರನೇ ಎರಡರಷ್ಟು ಕಡಿತಗೊಳಿಸುವುದಾಗಿ ಯುರೋಪಿಯನ್ ಯೂನಿಯನ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X