Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಐಟಿಡಿಪಿಯಡಿ ವೈದ್ಯಕೀಯ ವೆಚ್ಚ ಪಾವತಿ...

ಐಟಿಡಿಪಿಯಡಿ ವೈದ್ಯಕೀಯ ವೆಚ್ಚ ಪಾವತಿ ರದ್ದತಿಗೆ ವಿರೋಧ : ಕೊರಗರಿಂದ ದ.ಕ. ಡಿಸಿ ಕಚೇರಿಗೆ ಕಾಲ್ನಡಿಗೆ ಜಾಥಾ

ವಾರ್ತಾಭಾರತಿವಾರ್ತಾಭಾರತಿ14 Jun 2022 12:08 PM IST
share
ಐಟಿಡಿಪಿಯಡಿ ವೈದ್ಯಕೀಯ ವೆಚ್ಚ ಪಾವತಿ ರದ್ದತಿಗೆ ವಿರೋಧ : ಕೊರಗರಿಂದ ದ.ಕ. ಡಿಸಿ ಕಚೇರಿಗೆ ಕಾಲ್ನಡಿಗೆ ಜಾಥಾ

ಮಂಗಳೂರು, ಜೂ.14: ಸಮಗ್ರ ಗಿರಿಜನ ಅಭಿವೃದ್ಧಿ  ಯೋಜನೆ(ಐಟಿಡಿಪಿ) ಯಡಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಕೊರಗ ಸಮುದಾಯದ ಜನರ ಪೂರ್ಣ ಪ್ರಮಾಣದ ವೈದ್ಯಕೀಯ ವೆಚ್ಚವನ್ನು ಪಾವತಿಸಲಾಗುತ್ತಿದ್ದು ಇತ್ತೀಚೆಗೆ ಅದನ್ನು ರದ್ದುಪಡಿಸಿರುವುದನ್ನು ಆಕ್ಷೇಪಿಸಿ ಕೊರಗ ಸಮುದಾಯದವರು ಮಂಗಳವಾರ ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಕಾಲ್ನಡಿಗೆ ಜಾಥಾ ನಡೆಸಿದರು.

ನಗರದ ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಮುದಾಯದ ನೂರಾರು ಮಂದಿ ಜಮಾಯಿಸಿದರು.

ಸಮುದಾಯದ ಮುಖಂಡರು, ಮಹಾತ್ಮ ಗಾಂಧಿ,  ಡಾ.ಬಿ.ಆರ್. ಅಂಬೇಡ್ಕರ್, ಕೊರಗ ಸಮುದಾಯದ ಹಿರಿಯ ಮುಖಂಡ ದಿ. ಗೋಕುಲದಾಸ್, ಕುದ್ಮುಲ್ ರಂಗರಾವ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಾಯಿತು.

ದ.ಕ. ಜಿಲ್ಲಾ ಕೊರಗರ ಸಂಘದ ವತಿಯಿಂದ ಆಯೋಜಿಸಲಾದ ಜಾಥಾದಲ್ಲಿ ಸಮುದಾಯದ ಆರೋಗ್ಯಕ್ಕಾಗಿನ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಿತ್ತಿಪತ್ರಗಳನ್ನು ಹಿಡಿದು ಮೌನವಾಗಿ ಕಾಲ್ನಡಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಸುಂದರ ಮಾತನಾಡಿ, ಸರಕಾರದ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆಯದೆ ನಮ್ಮ ಜನರು ಸಾಯುತ್ತಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿ ಚರ್ಚಿಸಿ ಕೆಲವು ಖಾಸಗಿ ಆಸ್ಪತ್ರೆಗಳನ್ನು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯೊಂದಿಗೆ (ITDP) ಒಪ್ಪಂದ ಮಾಡಿಕೊಳ್ಳಲು ತೀರ್ಮಾನಿಸಲಾಗಿತ್ತು. ಅದರಂತೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಸಮುದಾಯದ ಜನರ ಪೂರ್ಣ ಪ್ರಮಾಣದ ವೈದ್ಯಕೀಯ ವೆಚ್ಚವನ್ನು ಸರಕಾರ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮೂಲಕ ಮರು ಪಾವತಿ ಮಾಡಿಕೊಂಡು ಬಂದಿರುತ್ತದೆ. ಆದರೆ ಇದೀಗ ಆರೋಗ್ಯಕ್ಕೆ ಸಂಬಂಧಪಟ್ಟ ಮಹತ್ವಾಕಾಂಕ್ಷಿಯ ಯೋಜನೆಯನ್ನು ರದ್ದುಗೊಳಿಸಿರುವುದರಿಂದ ನಶಿಸುತ್ತಿರುವ ಜನಾಂಗವನ್ನು ಮತ್ತಷ್ಟು ಕಡೆಗಣಿಸಿದಂತಾಗಿದೆ ಎಂದು ಆಕ್ಷೇಪಿಸಿದರು.

ಸರಕಾರ ಈ ರದ್ದತಿ  ಹಿಂಪಡೆದು, ಆರೋಗ್ಯಕ್ಕಾಗಿ ವಿಶೇಷ ಅನುದಾನ ಬಿಡುಗಡೆ ಮಾಡಿ ಮೊದಲಿನಂತೆ ಖಾಸಗಿ ಆಸ್ಪತ್ರೆಗಳಲ್ಕಿ ಚಿಕಿತ್ಸೆಗೆ ಅನುವು ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಜಾಥಾದಲ್ಲಿ ಮುಖಂಡರಾದ ರಮೇಶ್ ಕೊರಗ, ಸುಶೀಲಾ ಕಿನ್ನಿಗೋಳಿ, ಸುಮತಿ, ಬಾಬು ಕುಂಬ್ರ, ಚಂದ್ರಾವತಿ, ಕಿರಣ್, ಬಾಬು ಪಾಂಗಳ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X