Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಕ್ಷಣ ಸಚಿವರ ವಿರುದ್ಧ ದೋಷಾರೋಪಣಾ...

ಶಿಕ್ಷಣ ಸಚಿವರ ವಿರುದ್ಧ ದೋಷಾರೋಪಣಾ ಪಟ್ಟಿ ಹೊರಡಿಸಿದ ಬಹುತ್ವ ಕರ್ನಾಟಕ

ರಾಜ್ಯದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಕಸಿದುಕೊಂಡ ಆರೋಪ

ವಾರ್ತಾಭಾರತಿವಾರ್ತಾಭಾರತಿ14 Jun 2022 4:15 PM IST
share
ಶಿಕ್ಷಣ ಸಚಿವರ ವಿರುದ್ಧ ದೋಷಾರೋಪಣಾ ಪಟ್ಟಿ ಹೊರಡಿಸಿದ ಬಹುತ್ವ ಕರ್ನಾಟಕ

ಬೆಂಗಳೂರು, ಜೂ.14: ರಾಜ್ಯದ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಕಸಿದುಕೊಂಡ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿಗಳು ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ. ಅವರು ಆಗ್ರಹಿಸಿದರು.

ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಣವು ಏಳು ದಶಕಗಳಲ್ಲೇ ಮಹಾವೈಫಲ್ಯವನ್ನು ಕಂಡಿದೆ. ಇದಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೇರ ಹೊಣೆಗಾರರಾಗಿದ್ದು, ಅಂತರ್‍ರಾಷ್ಟ್ರೀಯ ಕಾನೂನು, ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು ಹಾಗೂ ಸಂವಿಧಾನ ಆಶಯಗಳನ್ನು ವ್ಯವಸ್ಥಿತವಾಗಿ ಉಲ್ಲಂಘನೆ ಮಾಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಭಾರತವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಲಾಗಿದೆ ಎಂದು ಕಿಡಿಕಾರಿದರು. 

ಪಠ್ಯಪರಿಷ್ಕರಣಾ ಹಗರಣದಿಂದಾಗಿ ಇದುವರೆಗೂ ಮಕ್ಕಳಿಗೆ ಪಠ್ಯಪುಸ್ತಕ ನೀಡಿಲ್ಲ. ಆದೇಶ ಇಲ್ಲದಿದ್ದರೂ, ಪರಿಷ್ಕರಣೆಗ ಕೈ ಹಾಕಲಾಗಿದೆ. ಹಾಗಾಗಿ ಒಪ್ಪದ ಪಠ್ಯವನ್ನು ಸೇರಿಸಲಾಗಿದೆ. ಶಿಕ್ಷಣ ಕಾಯ್ದೆಗಳನ್ನು ಉಲ್ಲಂಘಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಹುತ್ವ ಕರ್ನಾಟಕದ ಮುಖ್ಯಸ್ಥೆ ಮೈತ್ರೇಯಿ ಕೃಷ್ಣನ್ ಮಾತನಾಡಿ, ರಾಜ್ಯಾದ್ಯಂತ ಎಲ್ಲಾ ಸರಕಾರಿ ಶಾಲೆಗಳಲ್ಲಿ ವಾರದಲ್ಲಿ 5 ದಿನ ಮೊಟ್ಟೆಯನ್ನು ನೀಡಬೇಕು. ಎಲ್ಲಾ ಮಕ್ಕಳು ಶಾಲೆಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಸರಕಾರವು ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಕಲಿಕೆಯ ಅಂತರವನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡಿನಂತೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಮುಸ್ಲಿಂ ವಿದ್ಯಾರ್ಥಿನಿಯರು ಕಿರುಕುಳಕ್ಕೆ ಒಳಗಾಗದಂತೆ ಮತ್ತು ಅವರ ಶಿಕ್ಷಣದ ಹಕ್ಕು ಮತ್ತು ಇತರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಬೇಕು. ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು ಎಂದು ಅವರು ಸರಕಾರಕ್ಕೆ ಆಗ್ರಹಿಸಿದರು.

ರಾಜ್ಯದಲ್ಲಿ ಶೇ.32.5ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 9 ರಿಂದ 19 ವರ್ಷದ ಮಕ್ಕಳಲ್ಲಿ ಶೇ.17.2ರಷ್ಟು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಈ ದತ್ತಾಂಶವನ್ನು ಕೇಂದ್ರ ಸರಕಾರದ ನೀತಿ ಆಯೋಗವೇ ಪ್ರಕಟಿಸಿದ್ದು, ಇದು ಕೋವಿಡ್‍ನಿಂದ ಉಂಟಾದ ಬಿಕ್ಕಟ್ಟಾಗಿದೆ. ಸರಕಾರವು ಕಲಿಕೆ ಮತ್ತು ಅಪೌಷ್ಟಿಕತೆಯ ಬಿಕ್ಕಟ್ಟನ್ನು ಸರಿಪಡಿಸುವಲ್ಲಿ ವಿಫಲವಾಗಿದೆ.

-ನಿರಂಜನಾರಾಧ್ಯ ವಿ.ಪಿ., ಅಭಿವೃದ್ಧಿ ಶಿಕ್ಷಣ ತಜ್ಞ  


 ‘ಬಹುತ್ವ ಕರ್ನಾಟಕ’ ಹೊರಡಿಸಿರುವ ಚಾರ್ಜ್‍ಶೀಟ್‍ನಲ್ಲಿ ಏನಿದೆ? 

ಚಾರ್ಜ್‍ಶೀಟ್‍ನಲ್ಲಿ ಶಾಲಾ ಮಕ್ಕಳನ್ನು ಸಂತ್ರಸ್ತರನ್ನಾಗಿ ಉಲ್ಲೇಖಿಸಿದ್ದು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನಾಂಕದಿಂದ ಇಲ್ಲಿಯವರೆಗೆ ಸಚಿವರು ಉಲ್ಲಂಘಿಸಿರುವ ಕಾನೂನುಗಳ ಪಟ್ಟಿಯನ್ನು ನಮೂದಿಸಲಾಗಿದೆ. 

ಕೋವಿಡ್ ಸೋಂಕಿನಿಂದ ಉಂಟಾಗಿರುವ ಕಲಿಕಾ ಕುಂಠಿತವನ್ನು ಸರಿಪಡಿಸಲು ವಿಫಲವಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಬಿ.ಸಿ. ನಾಗೇಶ್ ಅವರು ಭಾರತ ಸಂವಿಧಾನದ ಅನುಚ್ಚೇಧ 14, 15, 21, 21ಎ, 24, 39ಉ, 41, 46, 47ನ್ನು ಹಾಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2005ರ ಪರಿಚ್ಚೇದ 3, 4, 8, 25, 26, 29 ಮತ್ತು 34ನ್ನು ಉಲ್ಲಂಘಿಸಿದ್ದಾರೆ ಎಂದು ದೋಷಾರೋಪಣಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ರಾಜ್ಯದ ಎಲ್ಲಾ ಜಿಲ್ಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ವಾರದ ಎಲ್ಲಾ ದಿನಗಳಲ್ಲಿ ಮೊಟ್ಟೆ ನೀಡಲು ವಿಫಲವಾಗಿರುವುದು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2005ರ ಪರಿಚ್ಚೇದ 3, 4, 8, 25, 26, 29 ಮತ್ತು 34ರ ಉಲ್ಲಂಘನೆ ಆಗಿದೆ ಎಂದು ಚಾರ್ಜ್‍ಶೀಟ್‍ನಲ್ಲಿ ಬರೆದಿದ್ದಾರೆ. 

ಮುಸ್ಲಿಂ ಹೆಣ್ಣುಮಕ್ಕಳು ಪರೀಕ್ಷೆಗೆ ಹಿಜಾಬ್ ಧರಿಸುವುದನ್ನು ತಡೆಯುವ ಮತ್ತು ಹಿಜಾಬ್ ಧರಿಸಿದ ಹೆಣ್ಣುಮಕ್ಕಳು ಪರೀಕ್ಷೆಗೆ ಹಾಜರಾಗಲು ಅನುಮತಿಸಿದ ಶಿಕ್ಷಕರನ್ನು ಅಮಾನತ್ತುಗೊಳಿಸುವ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಮತ್ತು ಶಿಕ್ಷಣ ಇಲಾಖೆಯು ಹೊರಡಿಸಿದ್ದ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದು ಭಾರತ ಸಂವಿಧಾನದ ಅನುಚ್ಚೇದ 14, 15 ಮತ್ತು 19ರ ಉಲ್ಲಂಘನೆ ಆಗಿದೆ.

ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿ ಮತ್ತು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005 ಅನ್ನು ಪಾಲಿಸದ ರೀತಿಯಲ್ಲಿ ಪಠ್ಯವನ್ನು ಪರಿಷ್ಕರಿಸಿರುವುದು. ಇದು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2005ರ ಪರಿಚ್ಛೇದ 29 ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005ರ ಉಲ್ಲಂಘನೆ ಆಗಿದೆ.

ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲು ವಿಫಲವಾಗಿದೆ. ಇದು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2005ರ ಪರಿಚ್ಚೇದ 3ಮತ್ತು ನಿಯಮ 23ರ ಉಲ್ಲಂಘನೆಯಾಗಿದೆ. 

ಭಾರತದ ಸಂವಿಧಾನದ ಮೌಲ್ಯಗಳಲ್ಲಿ ನಂಬಿಕೆಯಿರಿಸಿ ಅದರಂತೆ ನಡೆದುಕೊಳ್ಳುವೆ ಎಂದು ಸಂವಿಧಾನಾತ್ಮಕವಾಗಿ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿ, ಈಗ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು ಸಂಪೂರ್ಣವಾಗಿ ವಿಫಲರಾಗಿರುವುದು. ಎಲ್ಲ ನಾಗರಿಕರಿಗೆ ಸಂವಿಧಾನವು ಖಾತ್ರಿಪಡಿಸುವ ಹಕ್ಕುಗಳನ್ನು ಮತ್ತು ಯಾವುದೇ ರೀತಿಯ ಭಯಕ್ಕೆ ಯಾರ ಕೃಪೆಗೂ ಒಳಗಾಗದೆ ಕಾನೂನನ್ನು ಎತ್ತಿಹಿಡಿಯುವಲ್ಲಿ ವಿಫಲವಾಗಿರುವುದು, ಭಾರತ ಸಂವಿಧಾನದ ಮೂರನೇ ಅನುಸೂಚಿಯ ಉಲ್ಲಂಘನೆಯಾಗಿದೆ ಎಂದು ಚಾರ್ಜ್‍ಶೀಟ್‍ನಲ್ಲಿ ತಿಳಿಸಿದೆ.
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X