VIDEO - ಕುವೆಂಪುಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾಗ: ಸಿಚಿವ ಬಿ.ಸಿ. ನಾಗೇಶ್
ಶಿವಮೊಗ್ಗ: 'ಕುವೆಂಪುಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ ಮಖ್ಯಮಂತ್ರಿ ಆಗಿದ್ದಾಗ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಿಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ವಿರೋಧ ಪಕ್ಷ ಹೇಳೋದು ಎಲ್ಲ ಸುಳ್ಳು. ರಾಜಕೀಯಕ್ಕಾಗಿ ದಿನಕ್ಕೊಂದು ಸುಳ್ಳು ಹೇಳುತ್ತಿದ್ದಾರೆ' ಎಂದು ತಿಳಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕುವೆಂಪು ಅವರ ನಾಡಗೀತೆ ತಿರುಚಿದ್ದು . ತಿರುಚಿದ ನಾಡಗೀತೆ ಫಾರ್ವರ್ಡ್ ಮಾಡಿದ್ದ ರೋಹಿತ್ ಚಕ್ರತೀರ್ಥರ ಮೇಲೆ ಕೇಸ್ ಹಾಕಿದ್ದರು. ಅದಕ್ಕೂ ಅವರದ್ದೇ ಸರ್ಕಾರ ಬಿ ರಿಪೋರ್ಟ್ ಕೊಟ್ಟಿತ್ತು. ತಿರುಚಿದವರ ವಿರುದ್ಧ ಯಾವುದೇ ಕ್ರಮ ಕೈಗಿಂಡಿಲ್ಲ. ಹೀಗಾಗಿ ನೈತಿಕತೆ ಇದ್ದರೆ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ನೀಡಿ ಮಾತಾಡಲಿ‘ ಎಂದು ತಿರುಗೇಟು ನೀಡಿದರು.
Next Story