Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಬೈಂದೂರು ನಂದನವನದಲ್ಲಿ ಕೃಷ್ಣದೇವರಾಯನ...

​ಬೈಂದೂರು ನಂದನವನದಲ್ಲಿ ಕೃಷ್ಣದೇವರಾಯನ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ15 Jun 2022 9:13 PM IST
share
​ಬೈಂದೂರು ನಂದನವನದಲ್ಲಿ ಕೃಷ್ಣದೇವರಾಯನ ಶಾಸನ ಪತ್ತೆ

ಉಡುಪಿ, ಜೂ.15: ವಿಜಯನಗರ ಸಾಮ್ರಾಜ್ಯದ ತುಳುವ ದೊರೆ ಕೃಷ್ಣದೇವರಾಯನ ಕಾಲದ 15ನೇ ಶತಮಾನಕ್ಕೆ ಸೇರಿದ ಶಿಲಾ ಶಾಸನವೊಂದು ಬೈಂದೂರು ತಾಲೂಕಿನ ನಂದನವನ ಗ್ರಾಮದಲ್ಲಿ ಪತ್ತೆಯಾಗಿದೆ.

ಈ ಶಾಸನವನ್ನು ಉಡುಪಿಯ ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ (ಎನ್‌ಟಿಸಿ-ಎಓಎಂನ ಅಂಗಸಂಸ್ಥೆ) ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್. ಎ.ಕೃಷ್ಣಯ್ಯ ಹಾಗೂ ಕಡಿಯಾಳಿ ಯು. ಕಮಲಬಾಯಿ ಪೌಢ ಶಾಲೆಯ ನಿವೃತ್ತ ಅಧ್ಯಾಪಕರಾದ ಕೆ. ಶ್ರೀಧರ ಭಟ್ ಇವರ ನೇತೃತ್ವದಲ್ಲಿ ಸೈಂಟ್ ಅಲೋಶಿಯಸ್ ಕಾಲೇಜಿನ ವಸ್ತುಸಂಗ್ರಹಾಲಯದ ನಿರ್ದೇಶಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನ ಮಾಡಿದ್ದಾರೆ.

ಪ್ರಸ್ತುತ ಸಿಕ್ಕಿರುವ ಈ ಶಾಸನವು ಸಂಜೀವ ಪ್ರಭು ಎಂಬವರ ಜಾಗದಲ್ಲಿದ್ದು, ಕಣ ಶಿಲೆಯಲ್ಲಿ ಕೊರೆಯಲ್ಪಟ್ಟಿದೆ. ಶಾಸನವು 5 ಅಡಿ ಎತ್ತರ ಮತ್ತು 2.5 ಅಡಿ ಅಗಲವಿದೆ. ಕನ್ನಡ ಲಿಪಿ ಮತ್ತು ಭಾಷೆಯ 38 ಸಾಲುಗಳನ್ನು ಹೊಂದಿರುವ ಈ ಶಾಸನದ ಮೇಲ್ಭಾಗದಲ್ಲಿರುವ ವಾಮನ ಮೂರ್ತಿಯ ಇಕ್ಕೆಲಗಳಲ್ಲಿ ಶಂಖ-ಚಕ್ರ, ಸೂರ್ಯ-ಚಂದ್ರರ ಉಬ್ಬು ಕೆತ್ತನೆಯಿದೆ.

‘ಸ್ವಸ್ತಿ ಶ್ರೀಗಣಾಧಿಪತಯೆ ನಮ’ ಎಂಬ ಶ್ಲೋಕದಿಂದ ಪ್ರಾರಂಭವಾಗುವ ಈ ಶಾಸನವು ಶಕವರುಷ 1442 ವರ್ತಮಾನ ಪ್ರಮಾಧಿ ಸಂವತ್ಸರದ ಶ್ರಾವಣ ಶುದ್ಧ 15 ಬುಧವಾರ ಅಂದರೆ ಕ್ರಿ.ಶ.1519 ಆಗಸ್ಟ್ 21ರ ಬುಧವಾರಕ್ಕೆ ಸೇರುತ್ತದೆ. ಈ ಕಾಲಮಾನವು ವಿಜಯನಗರದ ತುಳುವ ದೊರೆ ಕೃಷ್ಣದೇವರಾಯನಿಗೆ ಸೇರಿದ್ದು, ಈ ಸಂದರ್ಭದಲ್ಲಿ ಬಾರಕೂರ ರಾಜ್ಯವನ್ನು ರತ್ನಪ್ಪ ಒಡೆಯನ ಕುಮಾರನಾದ ವಿಜಯಪ್ಪ ಒಡೆಯನು ಆಳ್ವಿಕೆ ನಡೆಸುತ್ತಿದ್ದ ಎಂಬುದು ಶಾಸನದಿಂದ ತಿಳಿಯುತ್ತದೆ.

ಈ ಕಾಲದಲ್ಲಿ ಸಂಗರಸ ನಾಯಕನ ಮನೆಯ ದೇವಪೂಜೆಯ ಕರುಣಾಕರ ಹಾಗೂ ಅಂಗೀರಸ ಗೋತ್ರದ ಯವನಾಶ್ವ ಪ್ರವರದ ಈಶನ ಉಪಾಧ್ಯಾಯರ ಮಗ ಕೇಶವ ಉಪಾಧ್ಯಾಯರು ವಿಜಯಪ್ಪ ಒಡೆಯರಿಗೆ ಆಯುರಾರೋಗ್ಯ ಮತ್ತು ಐಶ್ವರ್ಯ ಅಭಿವೃದ್ಧಿಗಾಗಿ ಸೋಮೊಪರಾಗ ಪುಣ್ಯ ಕಾಲದಲ್ಲಿ ಸಹಿರಣ್ಯೋದಕ ದಾನವನ್ನು ಮಾಡಿರುವ ಹಾಗೂ ಇದಕ್ಕೆ ಘಟ್ಟಿ ವರಹ ಗದ್ಯಾಣ 24ನೂ ಕುಳವ ಕಡಿದು ಬರೆಸಿಕೊಟ್ಟ ದಾನ ಶಾಸನ ಇದಾಗಿದೆ.

ಶಾಸನದಲ್ಲಿ ಚತುಸೀಮೆಯ ಉಲ್ಲೇಖವಿದ್ದು ಮುಖ್ಯವಾಗಿ ಕೆಳ ಸಾಲಿಗ್ರಾಮ, ನಾಯಕನಕಟ್ಟೆ, ನೇರಳಕಟ್ಟೆ ಇನ್ನಿತರ ಸ್ಥಳಗಳ ಉಲ್ಲೇಖವಿದೆ. ಹಾಗೆಯೇ ಗದ್ದೆ ಹಾನೆ 60, ಮುಡಿ 42, ಶುದ್ಧ ಆದಾಯದ ವೆಚ್ಚಳಕ್ಕೆ ವರಹಾ ಗದ್ಯಾಣ 24ನ್ನು ಶ್ರೀಹೆಮ್ಮಾಡ (ಪ್ರಸ್ತುತ ಹೆಮ್ಮಾಡಿ ಆಗಿರಬಹುದು) ಗೋಪಿನಾಥ ದೇವರ ಅಮ್ರುತಪಡಿ ಮತ್ತು ನಂದಾದೀಪ್ತಿಗೆ ದಾನವನ್ನು ಬಿಟ್ಟಿರುವುದು. ಇದು ವರ್ಷಂಪ್ರತಿ ನಡೆಯುವ ರೀತಿ ನೋಡಿಕೊಳ್ಳಬೇಕೆಂಬ ಉಲ್ಲೇಖವಿದೆ.

ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವಿದ್ದು ಈ ಶಾಸನಕ್ಕೆ ಸೋಮನಾಥ ಹೆಬ್ಬರ, ಕುರುವಾಲ ದುರ್ಗಾ ದೇವಿಯ ಒಪ್ಪವಿದ್ದು ಈ ಶಾಸನವನ್ನು ಬರೆದವ ಬಾರಕೂರ ಕರಣಿಕನಾದ ಮಲರಸರ ಎಂದು ಉಲ್ಲೇಖಿಸುತ್ತದೆ.

ಶಾಸನದ ಪ್ರಾಥಮಿಕ ಮಾಹಿತಿಯನ್ನು ಸರ್ವೋತ್ತಮ ಭಟ್ ಉಪ್ಪುಂದ ಇವರು ನೀಡಿದ್ದು, ಕ್ಷೇತ್ರಕಾರ್ಯ ಸಂದರ್ಭದಲ್ಲಿ ರವಿ ಸಂತೋಷ್ ಆಳ್ವ, ವೆಂಕಟರಮಣ ದೇವಾಲಯದ ಧರ್ಮದರ್ಶಿ ರಮೇಶ್ ಪೈ ಹಾಗೂ ದೇವಾಲಯ ಆಡಳಿತ ಮಂಡಳಿ ಸಹಕಾರ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X