Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್...

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಬದಲಾವಣೆಯ ದಿಕ್ಸೂಚಿ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Jun 2022 6:04 PM IST
share
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಬದಲಾವಣೆಯ ದಿಕ್ಸೂಚಿ: ಸಿದ್ದರಾಮಯ್ಯ

ಬೆಂಗಳೂರು, ಜೂ.16: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಸುಮಾರು 12,205 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಗಳು ಶಿಕ್ಷಕರ ಕ್ಷೇತ್ರದಿಂದ ಈ ಹಿಂದೆ ಗೆದ್ದಿದ್ದರು. ಆದರೆ ಯಾವತ್ತೂ ದಕ್ಷಿಣ ಪದವೀಧರ ಕ್ಷೇತ್ರದಿಂದ ಗೆದ್ದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿ ಪದವೀಧರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ಅವರಿಗೆ 33,878 ಮತಗಳು, ನಮ್ಮ ಅಭ್ಯರ್ಥಿಗೆ 46,082 ಮತಗಳು ಬಂದಿವೆ, ಜೆಡಿಎಸ್‍ಗೆ 19,630 ಮತ ಬಂದಿದೆ. ಎರಡು ಬಾರಿ ಜೆಡಿಎಸ್‍ನ ಶ್ರೀಕಂಠೇಗೌಡ ಇಲ್ಲಿ ಗೆದ್ದಿದ್ದರು. ಈ ಬಾರಿ ರಾಮು ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಬಹುಶಃ ಸೋಲಿನ ಭಯದಿಂದ ಶ್ರೀಕಂಠೇಗೌಡರು ಸ್ಪರ್ಧಿಸಿರಲಿಲ್ಲ ಎಂದು ಕಾಣುತ್ತೆ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಅವರು ಈ ಕ್ಷೇತ್ರವನ್ನು ನಮ್ಮ ಭದ್ರಕೋಟೆ ಎಂದು ಹೇಳುತ್ತಿದ್ದರು. ಇಂಥಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಅಭ್ಯರ್ಥಿ ಮಧು ಮಾದೇಗೌಡ ಗೆದ್ದಿದ್ದಾರೆ. 1 ಲಕ್ಷ 33 ಸಾವಿರ ಪದವೀಧರ ಮತದಾರರಿದ್ದರು. ನಮ್ಮ ಅಭ್ಯರ್ಥಿ ಇವರ ಮನ ಗೆಲ್ಲಲು ಯಶಸ್ವಿಯಾಗಿದ್ದಾರೆ. ನಮ್ಮ ಅಭ್ಯರ್ಥಿಯ ಗೆಲುವಿಗೆ ಸಂಘಟಿತ ಹೋರಾಟ ಕಾರಣ ಎಂದು ಸಿದ್ದರಾಮಯ್ಯ ಹೇಳಿದರು. 

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಪದವೀಧರ ಮತದಾರರು ಮತ ಚಲಾಯಿಸಿದ್ದಾರೆ. ಈ ನಾಲ್ಕು ಜಿಲ್ಲೆಗಳ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರು, ಮಾಜಿ ಸಂಸದರು, ಶಾಸಕರು ಇವರೆಲ್ಲರ ಸಂಘಟಿತ ಹೋರಾಟದ ಮೂಲಕ ಚುನಾವಣೆ ಗೆದ್ದಿದ್ದೇವೆ ಎಂದು ಅವರು ತಿಳಿಸಿದರು. 

ಇದೇ ರೀತಿ ಬೆಳಗಾವಿಯ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಮೊದಲ ಸುತ್ತಿನಲ್ಲೇ ಗೆಲುವಿನ ಕೋಟಾ ತಲುಪಿ ಗೆದ್ದಿದ್ದಾರೆ. ಚಲಾವಣೆಯಾದ 20 ಸಾವಿರ ಮತಗಳಲ್ಲಿ ನಮ್ಮ ಅಭ್ಯರ್ಥಿ 11 ಸಾವಿರಕ್ಕೂ ಅಧಿಕ ಮತ ಪಡೆದಿದ್ದಾರೆ. ಕಳೆದ ಎರಡು ಬಾರಿ ಅಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ ಗೆದ್ದಿದ್ದರು. ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ ಬೆಳಗಾವಿ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳ ಎಲ್ಲ ಶಿಕ್ಷಕ ಬಂಧುಗಳಿಗೆ, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಸಿದ್ದರಾಮಯ್ಯ ಹೇಳಿದರು. 

ನಾವು ಈ ಮೊದಲು ನಾಲ್ಕೂ ಸ್ಥಾನಗಳಲ್ಲೂ ಇರಲಿಲ್ಲ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಸವರಾಜ್ ಗುರಿಕಾರ್ ಅವರಿಗೆ ಸುಮಾರು 4,597 ಮತಗಳನ್ನು ಹಾಗೂ ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಸುನೀಲ್ ಸಂಕ ಅವರಿಗೆ 10,122 ಮತಗಳನ್ನು ನೀಡಿದ್ದಾರೆ. ಇಲ್ಲಿ ನಮ್ಮ ಅಭ್ಯರ್ಥಿಗಳು ಸೋತಿದ್ದರೂ, ಇಷ್ಟು ಮತಗಳನ್ನು ನೀಡಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ತಿಳಿಸಿದರು. 

ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಕರು ಮತ್ತು ಪದವೀಧರ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಸ್ಪಷ್ಟವಾಗುತ್ತದೆ. ಬಿಜೆಪಿ ಪಕ್ಷ ನಾಲ್ಕೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂಬ ಜಂಭ ಹೊಡೆದಿದ್ದರು, ಮುಖ್ಯಮಂತ್ರಿಗಳೇ ಹೋಗಿ ಪ್ರಚಾರ ಮಾಡಿದ್ದರು. ಪದವೀಧರರು ಮತ್ತು ಶಿಕ್ಷಕರು ನಮಗೆ ಆಶೀರ್ವಾದ ಮಾಡಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ದೇಶದ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಬಿಜೆಪಿ ಸರಕಾರಗಳು ಅಧೋಗತಿಗೆ ತಂದಿವೆ. ರೈತರು, ಮಹಿಳೆಯರು, ಯುವಕರ ಸಮಸ್ಯೆಗಳು ಇಂದು ಬಹಳ ಬೃಹದಾಕಾರವಾಗಿ ಬೆಳೆಯುತ್ತಿದೆ. ಇದರಿಂದ ರಾಜಕೀಯ ಪ್ರಬುದ್ಧತೆ ಇರುವ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿಯವರ ಕೋಮುವಾದ, ಧರ್ಮ ರಾಜಕಾರಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳು, ಸಂವಿಧಾನ ವಿರೋಧಿ ಕ್ರಮಗಳು, ಸೇಡಿನ ರಾಜಕೀಯದ ವಿರುದ್ಧವಾಗಿ ಜನ ನಮಗೆ ಮತ ನೀಡಿದ್ದಾರೆ. ಸೇಡಿನ ರಾಜಕೀಯವನ್ನು, ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು ಜನ ಈ ಹಿಂದೆಯೂ ಒಪ್ಪಿಲ್ಲ, ಮುಂದೆಯೂ ಒಪ್ಪಲ್ಲ. ದೇಶ, ಸಂವಿಧಾನ, ರಾಜ್ಯ ಹಾಗೂ ಪ್ರಜಾಪ್ರಭುತ್ವಕ್ಕೆ ಆಪತ್ತು ಬಂದಾಗ ಜನ ಅವುಗಳ ರಕ್ಷಣೆಗೆ ನಿಲ್ಲುತ್ತಾರೆ ಎಂದು ಎಂದು ಸಿದ್ದರಾಮಯ್ಯ ಹೇಳಿದರು. 

ಬಸವರಾಜ ಹೊರಟ್ಟಿ ವೈಯಕ್ತಿಕ ವರ್ಚಸ್ಸಿನಿಂದ ಗೆದ್ದಿರುವುದು, ಬಿಜೆಪಿಯಿಂದ ನಿಂತಿದ್ದಕ್ಕಾಗಿ ಗೆದ್ದಿದ್ದಲ್ಲ. ವಾಯವ್ಯ ಪದವೀಧರರ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ನಮ್ಮಿಂದ ಹಾಕಲು ಆಗಲಿಲ್ಲ. ಕೊನೆ ಕ್ಷಣದಲ್ಲಿ ಒಬ್ಬರು ಲಾಯರ್ ಅವರನ್ನು ನಿಲ್ಲಿಸಿದ್ವಿ. ಗೆದ್ದ ಕಡೆಗಳೆಲ್ಲೆಲ್ಲ ದೊಡ್ಡ ಅಂತರದಲ್ಲಿ ಗೆದ್ದಿದ್ದೀವಿ ಎಂದು ಅವರು ತಿಳಿಸಿದರು. 

ನಮ್ಮ ಅಭ್ಯರ್ಥಿ ಒಂದು ಬಾರಿ ಗೆದ್ದಿದ್ದಕ್ಕೆ ಹಣ ಖರ್ಚು ಮಾಡಿ ಗೆದ್ದಿದ್ದು ಎನ್ನುವುದಾದರೆ ಈ ಹಿಂದೆ ಅರುಣ್ ಶಹಾಪುರ್ ಎರಡು ಬಾರಿ ಗೆದ್ದಿದ್ರಲ್ಲ ಎಷ್ಟು ಹಣ ಖರ್ಚು ಮಾಡಿ ಗೆದ್ದಿದ್ದಂತೆ? ಇದು ಮತದಾರರಿಗೆ ಅವಮಾನ ಮಾಡಿದಂತೆ ಆಗಲ್ವಾ? ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದವರು ಬಿಜೆಪಿಯವರು, ನಾವಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ಕೋಲಾರ, ಬಾದಾಮಿ, ಕೊಪ್ಪಳ, ವರುಣಾ, ಚಾಮರಾಜಪೇಟೆ ಈ ಎಲ್ಲ ಕಡೆ ನನಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹತ್ತಾರು ಕಡೆ ಜನ ಕರೆಯುತ್ತಿದ್ದಾರೆ ಎಂದರೆ ನಾನು ಗೆಲ್ಲುತ್ತೇನೆ ಎಂದೇ ತಾನೇ ಕರೆಯುತ್ತಿರೋದು. ಕಾಲು ಎಳೆಯುವವರು ರಾಜಕೀಯದಲ್ಲಿ ಇದ್ದೇ ಇರುತ್ತಾರೆ ಎಂದು ಅವರು ಹೇಳಿದರು. 

ನಮ್ಮ ಪಕ್ಷದಲ್ಲಿ ಯಾರೂ ಈ ತರದವರು ಇಲ್ಲ, ಯಾರನ್ನು ಕಂಡರೆ ಭಯ ಇರುತ್ತೆ ಅಂತವರ ಕಾಲೆಳೆಯೋಕೆ ಅಂತಲೇ ಪ್ರಯತ್ನ ಮಾಡುತ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆಕಿಚ್ಚು ಪಡುವವರು ಮಾತ್ರ ಈ ರೀತಿ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ಎಲ್ಲರೂ ಅಭಿಮಾನದಿಂದ ಕಾಣ್ತಾರೆ, ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ನಮ್ಮ ಪಕ್ಷದಲ್ಲಿ ಯಾರೂ ನನ್ನ ವಿರೋಧಿಗಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‍ನವರು ನನ್ನ ಸಂಪರ್ಕದಲ್ಲಿ ಇರೋದು ನಿಜ. ಅದನ್ನು ಈಗಲೇ ಹೇಳೋಕಾಗಲ್ಲ. ಮುಂದೆ ಸಮಯ ಬಂದಾಗ ಹೇಳುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X