Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅದಾನಿ ಸಂಸ್ಥೆಗೆ ಯೋಜನೆಯ ಗುತ್ತಿಗೆ:...

ಅದಾನಿ ಸಂಸ್ಥೆಗೆ ಯೋಜನೆಯ ಗುತ್ತಿಗೆ: ಶ್ರೀಲಂಕಾದಲ್ಲಿ ನಾಗರಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2022 11:50 PM IST
share
ಅದಾನಿ ಸಂಸ್ಥೆಗೆ ಯೋಜನೆಯ ಗುತ್ತಿಗೆ: ಶ್ರೀಲಂಕಾದಲ್ಲಿ ನಾಗರಿಕರ ಪ್ರತಿಭಟನೆ

ಕೊಲಂಬೊ, ಜೂ.16: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀಲಂಕಾ ಅಧ್ಯಕ್ಷರ ನಡುವಿನ ಸಂಶಯಾಸ್ಪದ ಒಪ್ಪಂದದ ಹಿನ್ನೆಲೆಯಲ್ಲಿ ಶ್ರೀಲಂಕಾದ ಇಂಧನ ಯೋಜನೆಯ ಗುತ್ತಿಗೆಯನ್ನು ಭಾರತದ ಉದ್ಯಮಿ ಗೌತಮ್ ಅದಾನಿ ಸಮೂಹ ಸಂಸ್ಥೆಗೆ ನೀಡಲಾಗಿದೆ ಎಂದು ಖಂಡಿಸಿ ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ನಾಗರಿಕರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮನ್ನಾರ್ ನಗರದಲ್ಲಿ 500 ಮೆಗಾವ್ಯಾಟ್ ಸೌರ ಮತ್ತು ಪವನಶಕ್ತಿ ಘಟಕವನ್ನು ಸ್ಥಾಪಿಸುವ ಯೋಜನೆಯನ್ನು ಅದಾನಿ ಸಂಸ್ಥೆಗೆ ವಹಿಸಲಾಗಿದೆ.
ಮೋದಿ ಮತ್ತು ರಾಜಪಕ್ಸ ರೂಪಿಸಿದ ಒಪ್ಪಂದ ಪಾರದರ್ಶಕವಾಗಿಲ್ಲ ಮತ್ತು ಕಾನೂನು ಬಾಹಿರವಾಗಿದೆ. ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅದಾನಿಗೆ ಯೋಜನೆಯ ಗುತ್ತಿಗೆ ದೊರಕಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಪೀಪಲ್ಸ್ ಪವರ್’ ಎಂಬ ನಾಗರಿಕರ ಸಂಘಟನೆ ಈ ಪ್ರತಿಭಟನೆ ಆಯೋಜಿಸಿದೆ. ಸ್ಟಾಪ್ ಅದಾನಿ ಎಂಬ ಘೋಷವಾಕ್ಯದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಮನವಿಗೆ ಉತ್ತಮ ಸ್ಪಂದನೆ ದೊರಕಿದೆ ಎಂದು ವರದಿಯಾಗಿದೆ.

ಬಿಡ್ಡಿಂಗ್ ನಡೆಸದೇ ಅದಾನಿಗೆ ಯೋಜನೆ ವಹಿಸಿಕೊಡಲು ಅನುಕೂಲವಾಗುವಂತೆ ಶ್ರೀಲಂಕಾ ಸರಕಾರ ವಿದ್ಯುತ್ಶಕ್ತಿ ಕಾಯ್ದೆಗೆ ಸರ್ವಾನುಮತದಿಂದ ತಿದ್ದುಪಡಿ ತಂದಿದೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂಝ್ಲಿ ಹಮೀಮ್ ಕೊಲಂಬೊದಿಂದ ಫೋನ್ ಮೂಲಕ ಹೇಳಿರುವುದಾಗಿ ಎನ್ಡಿ ಟಿವಿ ವರದಿ ಮಾಡಿದೆ. ಭಾರತ ನೀಡಿದ ನೆರವಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ. ಆದರೆ ಬಿಡ್ಡಿಂಗ್ ನಡೆಸದೆ ಬೃಹತ್ ಯೋಜನೆಯನ್ನು ವಹಿಸಿಕೊಟ್ಟಿರುವುದು ಸರಿಯಲ್ಲ. ನಾವು ಬಹುರಾಷ್ಟ್ರೀಯ ಸಂಸ್ಥೆಗಳು ಬಿಡ್ಡಿಂಗ್ ನಲ್ಲಿ ಪಾಲ್ಗೊಳ್ಳುವ ಪರವಾಗಿದ್ದೇವೆ, ಆದರೆ ಭ್ರಷ್ಟ ಮುಖಂಡರ ಭ್ರಷ್ಟ ಉಪಕ್ರಮಗಳ ಮೂಲಕ ನಮ್ಮ ದೇಶವನ್ನು ಬರಿದಾಗಿಸುವುದಕ್ಕೆ ನಮ್ಮ ಬೆಂಬಲವಿಲ್ಲ ಎಂದವರು ಹೇಳಿದ್ದಾರೆ.

ಅದಾನಿ ಸಂಸ್ಥೆಗೆ ಯೋಜನೆಯ ಗುತ್ತಿಗೆಯನ್ನು ನೇರವಾಗಿ ವಹಿಸಿಕೊಡುವಂತೆ ಪ್ರಧಾನಿ ಮೋದಿ ಒತ್ತಡ ಹೇರುತ್ತಿರುವುದಾಗಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಹೇಳಿದ್ದರು ಎಂದು ಶ್ರೀಲಂಕಾದ ವಿದ್ಯುಛ್ಚಕ್ತಿ ಮಂಡಳಿಯ ಅಧ್ಯಕ್ಷ ಎಂಎಂಸಿ ಫೆರ್ಡಿನಾಂಡೊ ಸಂಸದೀಯ ಸಮಿತಿಯ ಎದುರು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ರಾಜಪಕ್ಸ ನಿರಾಕರಿಸಿದ್ದರು. ಮರುದಿನ ಫೆರ್ಡಿನಾಂಡೊ ತಮ್ಮ ಹೇಳಿಕೆಯನ್ನು ವಾಪಾಸು ಪಡೆದಿದ್ದರು.

ಆದರೆ , ತನಗೆ ದೊರಕಿರುವ ಪತ್ರದಲ್ಲಿರುವ ಮಾಹಿತಿಯಂತೆ, ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಶ್ರೀಲಂಕಾದ ವಿತ್ತ ಇಲಾಖೆಯನ್ನು ಕೋರಿದ್ದ ಫರ್ಡಿನಾಂಡೊ, ಅದಾನಿ ಸಮೂಹದ ಪ್ರಸ್ತಾವನೆಯನ್ನು ಭಾರತ ಸರಕಾರದ ಪ್ರಸ್ತಾವನೆಯಂತೆ ಪರಿಗಣಿಸುವಂತೆ ರಾಜಪಕ್ಸ ನಿರ್ದೇಶಿಸಿದ್ದಾರೆಂದು ಉಲ್ಲೇಖಿಸಿದ್ದರು ಎಂದು ಎನ್ಡಿ ಟಿವಿ ವರದಿ ಮಾಡಿದೆ.ಈ ಆರೋಪವನ್ನು ಅದಾನಿ ಸಂಸ್ಥೆ ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X