Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಟೋಲ್ ತೆರವುಗೊಳಿಸಿ, ಇಲ್ಲವೇ ರಾಜೀನಾಮೆ...

ಟೋಲ್ ತೆರವುಗೊಳಿಸಿ, ಇಲ್ಲವೇ ರಾಜೀನಾಮೆ ನೀಡಿ; ಸಂಸದ, ಶಾಸಕರಿಗೆ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Jun 2022 5:34 PM IST
share
ಟೋಲ್ ತೆರವುಗೊಳಿಸಿ, ಇಲ್ಲವೇ ರಾಜೀನಾಮೆ ನೀಡಿ; ಸಂಸದ, ಶಾಸಕರಿಗೆ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಒತ್ತಾಯ

ಮಂಗಳೂರು : ಸುರತ್ಕಲ್ ಟೋಲ್‌ಗೇಟ್ ಮುಚ್ಚಲು ನೀಡಿರುವ ಗಡುವು ಮುಗಿಯಲು ಕೆಲವೇ ದಿನಗಳು ಬಾಕಿ ಇದ್ದು, ಟೋಲ್‌ಗೇಟ್ ತೆರವುಗೊಳಿಸಬೇಕು, ಇಲ್ಲವಾದಲ್ಲಿ ಸ್ಥಳೀಯ ಸಂಸದ ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಅವರು, 60 ಕಿ.ಮೀ ಒಳಗಿರುವ ಎಲ್ಲ ಟೋಲ್ ಸಂಗ್ರಹ ಕೇಂದ್ರಗಳನ್ನು 90 ದಿನಗಳ ಒಳಗೆ ತೆರವುಗೊಳಿಸುವುದಾಗಿ ಹೇಳಿದ್ದ ಕೇಂದ್ರ ಸಚಿವರ ಹೇಳಿಕೆಯನ್ನು ಸ್ಥಳೀಯ ಸಂಸದ ನಳಿನ್‌ ಕುಮಾರ್ ಕಟೀಲ್ ಹಾಗೂ ಶಾಸಕ ಡಾ. ವೈ. ಭರತ್ ಶೆಟ್ಟಿ ಪುನರುಚ್ಚರಿಸಿದ್ದರು. ಜೂ.22ಕ್ಕೆ ಅವರು ಹೇಳಿರುವ 90 ದಿನಗಳು ಪೂರ್ಣಗೊಳ್ಳುತ್ತದೆ. ಆದರೆ, ಟೋಲ್ ಕೇಂದ್ರ ತೆರವಿಗೆ ಸಂಬಂಧಿಸಿ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ ಎಂದರು.

ಆರು ತಿಂಗಳ ಅವಧಿಗೆ ತಾತ್ಕಾಲಿಕ ನೆಲೆಯಲ್ಲಿ ಆರಂಭವಾಗಿದ್ದ ಸುರತ್ಕಲ್ ಟೋಲ್ ಕೇಂದ್ರವು ಏಳು ವರ್ಷಗಳಿಂದ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದೆ. ಈ ಬಾರಿ ನಿಗದಿತ ಅವಧಿಯಲ್ಲಿ ಕೇಂದ್ರ ಮುಚ್ಚದಿದ್ದರೆ, ಹೋರಾಟ ಸಮಿತಿ ವತಿಯಿಂದ ಟೋಲ್ ಮುತ್ತಿಗೆ ಕಾರ್ಯಕ್ರಮ ನಡೆಸಲಾಗುವುದು ಮತ್ತು ನಿರಂತರ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕ ಎಂ. ದೇವದಾಸ್, ವಕೀಲ ದಿನೇಶ್ ಹೆಗ್ಡೆ, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಉಡುಪಿ ಜಿಲ್ಲೆ ಟ್ಯಾಕ್ಸಿ ಮೆನ್ಸ್ ಮತ್ತು  ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ದಿನೇಶ್ ಕುಂಪಲ, ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಹೆದ್ದಾರಿ ಹೋರಾಟ ಸಮಿತಿ ಉಡುಪಿ ಸಂಚಾಲಕ ಶೇಖರ ಹೆಜಮಾಡಿ, ದಕ ಜಿಲ್ಲಾ ಲಾರಿ ಮಾಲಕರ ಸಂಘದ ಉಪಾಧ್ಯಕ್ಷ ಮೂಸಬ್ಬ ಪಕ್ಷಿಕೆರೆ, ದಲಿತ ಸಂಘರ್ಷ ಸಮಿತಿ ಸಂಚಾಲಕ ರಘು ಎಕ್ಕಾರು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಟಿ.ಎನ್. ರಮೇಶ್, ಶ್ರೀನಾಥ ಕುಲಾಲ್ ಉಪಸ್ಥಿತರಿದ್ದರು.

ಹೋರಾಟಗಾರರು ಹಣ ಪಡೆದಿರುವ ಬಗ್ಗೆ ಸಾಕ್ಷ್ಯ ನೀಡಿ

"ಸುರತ್ಕಲ್ ಟೋಲ್ ಗೇಟ್ ವಿರೋದಿ ಹೋರಾಟಗಾರರು ಹಣ ಪಡೆದಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಶಾಸಕರು ಸಾಕ್ಷ್ಯಸಮೇತ ಆರೋಪ ಮಾಡಲಿ. ಹಣಪಡೆದವರ ಗುರುತು ಬಹಿರಂಗಪಡಿಸಬೇಕು ಇಲ್ಲದಿದ್ದಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಹಣ ಪಡೆದವರ ಮಾಹಿತಿ ಇದ್ದರೆ, ಅವರ ವಿರುದ್ಧ ದೂರು ದಾಖಲಿಸಿ, ಹಣ ಪಡೆದವರನ್ನು ಜೈಲಿಗೆ ಕಳುಹಿಸಲಿ. ಕ್ಷೇತ್ರದ ಶಾಸಕರಿಗೆ ಯಾವುದೇ ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗಲಿಲ್ಲ. ಟೋಲ್ ಕೇಂದ್ರದ ವಿಷಯ ಪ್ರಸ್ತಾಪಿಸಿದರೆ, ಸಿಡಿಮಿಡಿಗೊಳ್ಳುತ್ತಾರೆ".

ಮುನೀರ್ ಕಾಟಿಪಳ್ಳ, ಸಂಚಾಲಕರು, ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X