Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ...

ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ ಆರೋಪ: ಡಿಆರ್‌ಡಿಒ ಲ್ಯಾಬ್‍ ಇಂಜಿನಿಯರ್ ಮಲ್ಲಿಕಾರ್ಜುನ ರೆಡ್ಡಿ ಬಂಧನ

ವಾರ್ತಾಭಾರತಿವಾರ್ತಾಭಾರತಿ18 Jun 2022 3:21 PM IST
share
ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ ಆರೋಪ: ಡಿಆರ್‌ಡಿಒ ಲ್ಯಾಬ್‍ ಇಂಜಿನಿಯರ್ ಮಲ್ಲಿಕಾರ್ಜುನ ರೆಡ್ಡಿ ಬಂಧನ

ಹೈದರಾಬಾದ್: ಭಾರತದ ಕ್ಷಿಪಣಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ಶಂಕಿತ ಪಾಕಿಸ್ತಾನಿ ಗೂಢಚಾರಿಣಿಗೆ ಮಾಹಿತಿ ನೀಡಿದ ಆರೋಪದ ಮೇಲೆ ಹೈದರಾಬಾದ್‍ನ ಡಿಆರ್‌ಡಿಒ ಲ್ಯಾಬೊರೇಟರಿ- ಡಿಫೆನ್ಸ್ ರಿಸರ್ಚ್ ಎಂಡ್ ಡೆವಲೆಪ್ಮೆಂಟ್ ಲ್ಯಾಬೊರೇಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇಂಜಿನಿಯರ್ ಒಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು indianexpress.com ವರದಿ ಮಾಡಿದೆ.

ಇಂಗ್ಲೆಂಡ್ ಮೂಲದ ರಕ್ಷಣಾ ಜರ್ನಲ್ ಒಂದಕ್ಕೆ ಕೆಲಸ ಮಾಡುತ್ತಿರುವ ಮಹಿಳೆ ಎಂಬಂತೆ ಪಾಕಿಸ್ತಾನಿ ಗೂಢಚಾರಿಣಿ ತನ್ನನ್ನು ಈ ಇಂಜಿನಿಯರ್ ಗೆ ಪರಿಚಯಿಸಿಕೊಂಡಿದ್ದಳೆಂದು ಪೊಲೀಸರು ಹೇಳಿದ್ದಾರೆ.

ಆರೋಪಿ ದುಕ್ಕ ಮಲ್ಲಿಕಾರ್ಜುನ ರೆಡ್ಡಿ (29) ಮೂಲತಃ ವಿಶಾಖಪಟ್ಣಂನವನಾಗಿದ್ದು ಬಾಲಾಪುರ್‍ನಲ್ಲಿರುವ ರಿಸರ್ಚ್ ಸೆಂಟರ್ ಇಮಾರತ್‍ನಲ್ಲಿ ಡಿಆರ್‍ಡಿಎಲ್‍ನ ಅಡ್ವಾನ್ಸ್ ನೇವಲ್ ಸಿಸ್ಟಂ ಪ್ರೋಗ್ರಾಂನ ಗುಣಮಟ್ಟ ನಿರ್ವಹಣೆ ಇಂಜಿನಿಯರ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ.

ಆತನನ್ನು ಮೀರ್ಪತೆ ಎಂಬಲ್ಲಿರುವ ಆತನ ನಿವಾಸದಿಂದ ರಚಕೊಂಡ ಪೊಲೀಸ್ ಹಾಗೂ ಬಾಲಾಪುರ್ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಬಂಧಿಸಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 409,  ಅಧಿಕೃತ ಗೌಪ್ಯತೆಗಳ ಕಾಯಿದೆ, 1923 ಅನ್ವಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಎರಡು ಮೊಬೈಲ್ ಫೋನ್‍ಗಳು, ಒಂದು ಸಿಮ್ ಕಾರ್ಡ್ ಮತ್ತು ಒಂದು ಲ್ಯಾಪ್‍ಟಾಪ್ ಅನ್ನು ವಶಕಪಡಿಸಿಕೊಳ್ಳಲಾಗಿದೆ.

ಡಿಆರ್‍ಡಿಎಲ್ ಯೋಜನೆಗಾಗಿ ಖಾಸಗಿ ಕಂಪನಿಯೊಂದರಲ್ಲಿ ಎರಡು ವರ್ಷ ಕೆಲಸ ಮಾಡಿದ್ದ ನಂತರ ಆತ 2020ರಲ್ಲಿ ಡಿಆರ್‍ಡಿಎಲ್ ಸೇವೆಗೆ ಸೇರ್ಪಡೆಗೊಂಡಿದ್ದ ಹಾಗೂ ನಟಾಶ ರಾವ್ ಆಲಿಯಾಸ್ ಸಿಮ್ರಾನ್ ಚೋಪ್ರಾ ಆಲಿಯಾಸ್ ಒಮಿಶಾ ಅಡ್ಡಿ ಎಂಬಾಕೆಯೊಂದಿಗೆ  ಆತ ಎರಡು ವರ್ಷಗಳಿಂದ ಸಂಪರ್ಕದಲ್ಲಿದ್ದ ಹಾಗೂ ಹನಿ ಟ್ರ್ಯಾಪ್‍ಗೊಳಗಾದ ನಂತರ ಮಹತ್ವದ ಮಾಹಿತಿಯನ್ನು ಆಕೆಗೆ ಸೋರಿಕೆ ಮಾಡುತ್ತಿದ್ದ ಎನ್ನಲಾಗಿದೆ.

ಕ್ಷಿಪಣಿ ಅಭಿವೃದ್ಧಿ ಯೋಜನೆಯ ಫೋಟೋಗಳು ಮತ್ತು ದಾಖಲೆಗಳನ್ನು ಆತ ಫೇಸ್ಬುಕ್ ಸಂವಾದದ ನಡುವೆ ಹಂಚಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಆತನಿಗೆ ಮಾರ್ಚ್ 2020ರಲ್ಲಿ ನಟಾಶ ರಾವ್ ಎಂಬಾಕೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು ಹಾಗೂ ಆತ ಅದನ್ನು ಒಪ್ಪಿದ್ದ ಆಕೆ ತಾನು ಒಂದೊಮ್ಮೆ ಬೆಂಗಳೂರಿನಲ್ಲಿ ವಾಸವಾಗಿದ್ದು ನಂತರ ತನ್ನ ತಂದೆ ಭಾರತೀಯ ವಾಯು ಪಡೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹಾಗೂ ಇಂಗ್ಲೆಂಡ್‍ಗೆ ತಾನು ಸ್ಥಳಾಂತರಗೊಂಡಿದ್ದಾಗಿ ತಿಳಿಸಿದ್ದಳು. ಆರೋಪಿ ಆಕೆಯೊಂದಿಗೆ ತನ್ನ ಬ್ಯಾಂಕ್ ಖಾತೆ ವಿವರಗಳನ್ನೂ ಹಂಚಿಕೊಂಡಿದ್ದ ಹಾಗೂ ಡಿಸೆಂಬರ್ 2021ರ ತನಕ ಆಕೆಯೊಂದಿಗೆ  ಸಂಪರ್ಕದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X