Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ...

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೆ ಸ್ಥಾನ ಪಡೆದ ಇಲ್ಹಾಮ್ ಗೆ ಸೈಕಾಲಜಿಸ್ಟ್ ಆಗುವಾಸೆ

ವಾರ್ತಾಭಾರತಿವಾರ್ತಾಭಾರತಿ18 Jun 2022 3:30 PM IST
share
ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೆ ಸ್ಥಾನ ಪಡೆದ ಇಲ್ಹಾಮ್ ಗೆ ಸೈಕಾಲಜಿಸ್ಟ್ ಆಗುವಾಸೆ

ಮಂಗಳೂರು : ‘‘ನನಗೆ ಮೊದಲಿನಿಂದಲೂ ಸೈಕಾಲಜಿಸ್ಟ್ ಆಗುವ ಆಸೆ. ನಾನು ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ದುಕೊಳ್ಳಲು ಕೂಡಾ ಅದೇ ಕಾರಣವಾಗಿತ್ತು. ಮುಂದೆ ಬಿಎಸ್ಸಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಅಧ್ಯಯನ ಮಾಡಬೇಕೆಂದಿರುವೆ.’’

ಇದು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ 597 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿರುವ, ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಇಲ್ಹಾಮ್ ಆಸೆ.

ವೃತ್ತಿಯಲ್ಲಿ ಸೂಪರ್ ಮಾರುಕಟ್ಟೆ ಮ್ಯಾನೇಜರ್ ಆಗಿರುವ ರಫೀಕ್ ಹಾಗೂ ಗೃಹಿಣಿ ಮೊಯ್ಝತುಲ್ ಕುಬ್ರಾ ದಂಪತಿ ಪುತ್ರಿಯಾಗಿರುವ ಇಲ್ಹಾಂ ತನ್ನ ಪೋಷಕರ ಜತೆ ತನ್ನ ಸಾಧನೆಯ ಬಗ್ಗೆ ಸಂತಸ ಹಂಚಿಕೊಂಡರು.

‘‘ಶೇ. ೯೫ಕ್ಕಿಂತ ಅಧಿಕ ಅಂಕ ಗಳಿಸುವ ನಿರೀಕ್ಷೆ ಇತ್ತು. ಅದಕ್ಕಿಂತಲೂ ಹೆಚ್ಚಿನ ಅಂಕ ದೊರಕಿರುವುದು ಖುಷಿ ನೀಡಿದೆ. ತರಗತಿಗೆ ಗೈರಾಗದೆ, ಉಪನ್ಯಾಸಕರ ಪಾಠ ಪ್ರವಚನಗಳ ಬಗ್ಗೆ ಹೆಚ್ಚು ಗಮನ ಕೊಟ್ಟು ಆಲಿಸಿದ್ದಲ್ಲದೆ, ನನ್ನ ಶ್ರಮವನ್ನು ಸಂಪೂರ್ಣವಾಗಿ ನೀಡಿದ್ದೇನೆ. ಪ್ರತಿಯೊಂದು ವಿಷಯದಲ್ಲೂ ಕಾಲೇಜಿನ ಉಪನ್ಯಾಸಕರು ಹೆಚ್ಚಿನ ಪ್ರೋತ್ಸಾಹ, ಪ್ರೇರಣೆ ನೀಡಿರುವುದೇ ಈ ಅಂಕಗಳನ್ನು ಗಳಿಸಲು ಸಾಧ್ಯವಾಗಿದೆ’’ ಎಂದು ಇಲ್ಹಾಮ್  ಹೇಳಿಕೊಂಡಿದ್ದಾರೆ.

‘‘ಸ್ವ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಿದ್ದೆ. ದಿನದಲ್ಲಿ ಕನಿಷ್ಠ ಮೂರು ಗಂಟೆಯನ್ನು ಓದಿಗಾಗಿ ಮೀಸಲಿಡುತ್ತಿದ್ದೆ. ಜತೆಗೆ ನನಗೆ ಸಾಹಸಮಯ ಕಾದಂಬರಿಗಳನ್ನು ಓದುವುದೆಂದರೆ ಇಷ್ಟ. ಪೇಯ್ಟಿಂಗ್ ನನ್ನ ಹವ್ಯಾಸ. ನಾನು ಯಾವುದೇ ರೀತಿಯ ಕೋಚಿಂಗ್ ಅಥವಾ ಟ್ಯೂಶನ್‌ಗೆ ಹೋಗಿರಲಿಲ್ಲ. ನನ್ನ ಗುರಿ ಇಂಜಿನಿಯರಿಂಗ್ ಅಥವಾ ಇತರ ಯಾವುದೇ ಕ್ಷೇತ್ರ ಆಗಿರದ ಕಾರಣ ಇತರ ಪೂರಕ ಪರೀಕ್ಷೆಗಳ ಬಗ್ಗೆಯೂ ನಾನು ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಪಿಯುಸಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರ ನನ್ನ ಗುರಿಯಾಗಿತ್ತು’’ ಎಂದು ಇಲ್ಹಾಮ್ ಅಭಿಪ್ರಾಯಿಸಿದ್ದಾರೆ.

‘‘ಮಗಳು ಬಾಲ್ಯದಿಂದಲೂ ಕಲಿಕೆಯಲ್ಲಿ ಚುರುಕಾಗಿದ್ದ ಕಾರಣ, ಆಕೆ ದ್ವಿತೀಯ ಪಿಯುಸಿಯಲ್ಲಿಯೂ ಉತ್ತಮ ಅಂಕ ಪಡೆಯುವ ನಿರೀಕ್ಷೆ ಇತ್ತು. ಆಕೆ ಸ್ವ ಅಧ್ಯಯನಕ್ಕೆ ಹೆಚ್ಚು ಒತ್ತು, ಆಸಕ್ತಿ ವಹಿಸಿದವಳು. ಇಂಜಿನಿಯರಿಂಗ್ ಬಗ್ಗೆ ನಾವು ಮಾತನಾಡಿದ್ದರೂ ಆಕೆಗೆ ಆಸಕ್ತಿ ಸೈಕಾಲಜಿ ಬಗ್ಗೆ ಇದ್ದ ಕಾರಣ ನಾವು ಆಕೆಗೆ ಪ್ರೋತ್ಸಾಹ ನೀಡಿದ್ದೇವೆ. ಆಕೆ ಪ್ರಾಮಾಣಿಕವಾಗಿ ಶ್ರಮ ವಹಿಸಿದ್ದಾಳೆ. ಸಂತ ಅಲೋಶಿಯಸ್ ಕಾಲೇಜಿನ ಎಲ್ಲಾ ಉಪನ್ಯಾಸಕರು ಪ್ರೋತ್ಸಾಹ ನೀಡಿದ್ದರಿಂದ ಆಕೆ ಉತ್ತಮ ಅಂಕ ಪಡೆಯುವಲ್ಲಿ ಸಹಕಾರಿಯಾಯಿತು’’ ಎಂದು ಇಲ್ಹಾಮ್ ರ ಪೋಷಕರು ಪ್ರತಿಕ್ರಿಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X