Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿಯುಸಿ ಫಲಿತಾಂಶ: ವಿದ್ಯೋದಯ...

ಪಿಯುಸಿ ಫಲಿತಾಂಶ: ವಿದ್ಯೋದಯ ಪ.ಪೂ.ಕಾಲೇಜಿಗೆ 16 ಸ್ಥಾನಗಳು

ವಾರ್ತಾಭಾರತಿವಾರ್ತಾಭಾರತಿ18 Jun 2022 7:34 PM IST
share

ಉಡುಪಿ, ಜೂ.೧೮: ಉಡುಪಿಯ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜು ೨೦೨೧-೨೨ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಭಾಗದಲ್ಲಿ ಶೇ. ೧೦೦ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.೯೮.೮೭ ಫಲಿತಾಂಶ ದಾಖಲಿಸಿದೆ.

ವಿಜ್ಞಾನ ವಿಭಾಗದಲ್ಲಿ ಓಂಕಾರ್ ಪ್ರಭು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುವುದು ಸೇರಿದಂತೆ ರಾಜ್ಯಮಟ್ಟದಲ್ಲಿ ಒಟ್ಟು ೧೧  ಸ್ಥಾನಗಳನ್ನು ಕಾಲೇಜು ಪಡೆದಿದೆ. ಅದೇ ರೀತಿ ವಾಣಿಜ್ಯ ವಿಭಾಗದಲ್ಲೂ ಕಾಲೇಜಿನ ವಿದ್ಯಾರ್ಥಿಗಳು ಐದು ಸ್ಥಾನಗಳನ್ನು ಪಡೆದಿದ್ದಾರೆ.

ಈ ಬಾರಿ ವಿಜ್ಞಾನ ವಿಭಾಗದಲ್ಲಿ ೩೨೨ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ೨೧೪ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೧೦೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣ ರಾಗಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿ ಓಂಕಾರ್ ಪ್ರಭು ಹಿಂದಿಯಲ್ಲಿ ೧೦೦, ಇಂಗ್ಲೀಷ್ ೯೮, ಭೌತಶಾಸ್ತ್ರ ೧೦೦, ರಸಾಯನ ಶಾಸ್ತ್ರ ೯೮, ಗಣಿತ ೧೦೦ ಮತ್ತು ಗಣಕಜ್ಞಾನದಲ್ಲಿ ೧೦೦ ಅಂಕ ಗಳಿಸುವ ಮೂಲಕ ಒಟ್ಟು ೫೯೬ ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ ೩ನೇ ಸ್ಥಾನ ಗಳಿಸಿದ್ದಾನೆ.

ಉಳಿದಂತೆ ನಿಯತಾ ೫೯೪ ಅಂಕಗಳೊಂದಿಗೆ ೫ನೇ ಸ್ಥಾನ, ಲಕ್ಷ್ಮೀ ಪಿ. ೫೯೨ ಅಂಕಗಳೊಂದಿಗೆ ೭ನೇ ಸ್ಥಾನ, ಪ್ರಣ್ಯಮ್ಯ ಆಚಾರ್ಯ, ಕೆ.ಎಸ್. ನಿಹಾರಿಕಾ ನವ್ಯಾ ದಿನೇಶ್ ಶೆಟ್ಟಿ ತಲಾ ೫೯೧ ಅಂಕಗಳೊಂದಿಗೆ ೮ನೇ ಸ್ಥಾನ, ಪಾವನ್ ಎ. ಶೆಟ್ಟಿ, ಈಶಾ ಕುಂದರ್, ಅಮರನಾಥ ಭಟ್ ಬಿ. ಮತ್ತು ಚಿನ್ಮಯ ಅಡಿಗ ೫೯೦ ಅಂಕಗಳೊಂದಿಗೆ ೯ ನೇ ಸ್ಥಾನ ಮತ್ತು ಜಾಗೃತಿ ಚಂದ್ರಶೇಖರ್ ೫೮೯ ಅಂಕಗಳೊಂದಿಗೆ ೧೦ನೇ ಸ್ಥಾನ ಪಡೆದಿದ್ದಾರೆ. 

ವಾಣಿಜ್ಯ ವಿಭಾಗದಲ್ಲಿ ಈ ವರ್ಷ ೧೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ ೮೮ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೮೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೭ ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದ ಮೇಘನಾ ಮೆಂಡನ್ ೫೯೧ ಅಂಕಗಳೊಂದಿಗೆ ೬ನೇ ಸ್ಥಾನ, ಹಿರಲ್ ಸುಂದರ್ ೫೯೦ ಅಂಕಗಳೊಂದಿಗೆ ೭ನೇ ಸ್ಥಾನ, ದರ್ಶನ್ ಆರ್. ಶೆಟ್ಟಿ ಮತ್ತು ಲರಿಸ್ಸಾ ಹೆಜಲ್ ನಜರೆತ್ ೫೮೯ ಅಂಕಗಳೊಂದಿಗೆ ೮ನೇ ಸ್ಥಾನ ಮತ್ತು ವಿಥಿಕಾ ವಿ. ಶೆಟ್ಟಿ  ೫೮೭ ಅಂಕಗಳೊಂದಿಗೆ ೧೦ನೇ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X