Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ರಾಹ್ಮಣ್ಯ ಸರಿಯಿದ್ದರೆ, ಬಸವಣ್ಣ ಏಕೆ...

ಬ್ರಾಹ್ಮಣ್ಯ ಸರಿಯಿದ್ದರೆ, ಬಸವಣ್ಣ ಏಕೆ ಧಿಕ್ಕರಿಸಿದರು: ನಂಜಾವಧೂತ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ18 Jun 2022 11:47 PM IST
share
ಬ್ರಾಹ್ಮಣ್ಯ ಸರಿಯಿದ್ದರೆ, ಬಸವಣ್ಣ ಏಕೆ ಧಿಕ್ಕರಿಸಿದರು: ನಂಜಾವಧೂತ ಸ್ವಾಮೀಜಿ

ಬೆಂಗಳೂರು, ಜೂ.18: ಬ್ರಾಹ್ಮಣ್ಯದಲ್ಲಿ ಎಲ್ಲವೂ ಸರಿ ಎನ್ನುವುದಾದರೆ, ಸಾಮಾಜಿಕ ಹರಿಕಾರ ಬಸವಣ್ಣನವರು ಏಕೆ ಅದನ್ನು ಧಿಕ್ಕರಿಸಿ ಹೊರಬಂದರು ಎಂದು ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಪೀಠದ ನಂಜಾವಧೂತ ಸ್ವಾಮೀಜಿ ಪ್ರಶ್ನೆ ಮಾಡಿದರು.

ಶನಿವಾರ ಇಲ್ಲಿನ ಫ್ರೀಡಂಪಾರ್ಕಿನಲ್ಲಿ ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯಬೇಕೆಂದು ಆಗ್ರಹಿಸಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಬ್ರಾಹ್ಮಣ್ಯದಲ್ಲಿ ಸಮಾನತೆ, ಕರುಣೆ, ಪ್ರೀತಿ ಉಕ್ಕಿ ಹರಿದು ಎಲ್ಲವೂ ಸರಿಯಿದ್ದರೆ ಬಸವಣ್ಣ ಅವರು ಏಕೆ ಬ್ರಾಹ್ಯಣ್ಯವನ್ನು ಧಿಕ್ಕರಿಸಿ ಎಲ್ಲರಿಗೂ ಲಿಂಗದೀಕ್ಷೆ ನೀಡಿದರು ಎಂದು ಹೇಳಿದರು.

ಸಂವಿಧಾನವನ್ನು ಪ್ರಶ್ನಿಸುವುದು, ಸಂವಿಧಾನವನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು. ತಾವು ಮಾಡಿದ್ದೇ ಸಂವಿಧಾನ ಎನ್ನುವುದಾದರೆ ದೇಶದ ಮಹನೀಯರಿಗೆ ಏನು ಗೌರವ ಬಂತು. ಇದೊಂದು ಎಚ್ಚರಿಕೆಯ ಸಮಾವೇಶ. ಸರಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟಗಾರರು, ಸ್ವಾಮೀಜಿಗಳು ಬೀದಿಗಿಳಿದು ಹೋರಾಡುವ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಾಡ ಬಾವುಟವನ್ನು ಒಳ ಉಡುಪಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಾಗ ಸರಕಾರ ಯೋಚಿಸದಿರುವುದೇ ತಪ್ಪು. ಬಸವಣ್ಣ, ನಾರಾಯಣ ಗುರು ಮುಂತಾದವರಿಗೆ ಗೌರವವೇ ಇಲ್ಲವೆ ಎಂದು ಪ್ರಶ್ನೆ ಮಾಡಿದರು.

ಮೆಕಾಲೆ ಸಮಾನ ಶಿಕ್ಷಣ ನೀತಿಯನ್ನು ಜಾರಿಗೊಳಿಸದೇ ಇದ್ದರೆ ನಾವೆಲ್ಲರೂ ಎಲ್ಲೋ ಜೀತದಲ್ಲೇ ಕಳೆಯಬೇಕಿತ್ತು. ಈಗ ಈ ರೀತಿ ಒಂದು ಸಿದ್ಧಾಂತದ ಹೇರಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ಹೋರಾಟದ ಆರಂಭ. ಸರಕಾರ ತಕ್ಷಣ ಎಚ್ಚೆತ್ತುಕೊಂಡು ಪರಿಷ್ಕøತ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಠ್ಯಪುಸ್ತಕಗಳಲ್ಲಿನ ತಪ್ಪು ಸರಿಪಡಿಸಲು ಶಿಕ್ಷಣ ಸಚಿವರಿಗೆ ನಿರ್ದೇಶನ ನೀಡಿರುವುದಾಗಿ ಹೇಳುತ್ತಾರೆ. ಆದರೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪರಿಷ್ಕøತ ಪಠ್ಯಪುಸ್ತಕಗಳ ವಿತರಣೆಗೆ ಆದೇಶ ಹೊರಡಿಸಿದ್ದಾರೆ. ಇಂತಹ ನಡೆಯನ್ನು ಒಪ್ಪಿಕೊಂಡರೆ ಮುಂದೆ ಒಂದು ದಿನ ಇವರು ಹೇಳಿದ್ದನ್ನೇ ಸಂವಿಧಾನ ಎಂದು ಒಪ್ಪಬೇಕಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X