Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಠ್ಯ ಪರಿಷ್ಕರಣೆ ವಿವಾದ | ಸರಕಾರಕ್ಕೆ...

ಪಠ್ಯ ಪರಿಷ್ಕರಣೆ ವಿವಾದ | ಸರಕಾರಕ್ಕೆ ಹೆದರಿ ಸ್ವಾಮೀಜಿಗಳು ಕೈಕಟ್ಟಿ ಕೂರಬಾರದು: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Jun 2022 5:26 PM IST
share
ಪಠ್ಯ ಪರಿಷ್ಕರಣೆ ವಿವಾದ | ಸರಕಾರಕ್ಕೆ ಹೆದರಿ ಸ್ವಾಮೀಜಿಗಳು ಕೈಕಟ್ಟಿ ಕೂರಬಾರದು: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ. 19: ‘ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಸರಕಾರ ಬಾಲಗಂಗಾಧರನಾಥ ಸ್ವಾಮಿ, ಶಿವಕುಮಾರ ಸ್ವಾಮಿ, ಕುವೆಂಪು, ನಾರಾಯಣ ಗುರು ಸೇರಿ ಅನೇಕ ಗಣ್ಯರ ಇತಿಹಾಸ ತಿರುಚಿ, ಅಪಮಾನ ಮಾಡಲಾಗಿದೆ. ಕೆಲ ಸ್ವಾಮೀಜಿಗಳು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇಂತಹ ವಿಚಾರಗಳು ಬಂದಾಗ ಸರಕಾರಕ್ಕೆ ಹೆದರಿ ಕೂರಬಾರದು. ಸರಕಾರ ಏನು ಮಾಡಲು ಸಾಧ್ಯ? ಹೀಗಾಗಿ ಸ್ವಾಮೀಜಿಗಳು ಈ ವಿಚಾರದಲ್ಲಿ ಧ್ವನಿ ಎತ್ತಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಮನವಿ ಮಾಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನ ಸಿದ್ದಗಂಗಾ ಶ್ರೀಗಳು, ಮುರುಘಾ ಮಠದ ಶರಣರು, ಆದಿಚುಂಚನಗಿರಿ ಶ್ರೀಗಳು ಸೇರಿದಂತೆ ಹಲವು ಸ್ವಾಮೀಜಿಗಳು ಅಸಮಾಧಾನ ಹೊರಹಾಕಿದ್ದಾರೆ. ಪರಿಷ್ಕರಣೆ ಮಾಡಿದ ಪಠ್ಯಕ್ಕೆ ವಿರೋಧ ಎಂದರೆ ಅದು ನಮ್ಮ ರಾಜಕಾರಣಕ್ಕೆ ಬೆಂಬಲ ನೀಡುವ ವಿಚಾರವಲ್ಲ ಅಥವಾ ಕೇವಲ ಹೇಳಿಕೆಯ ವಿಚಾರವಲ್ಲ. ಸ್ವಾಮೀಜಿಗಳು ಇರುವುದೇ ಈ ದೇಶದ ಧರ್ಮ, ಸಂಸ್ಕೃತಿ, ನ್ಯಾಯ, ನೀತಿ ಉಳಿಸಲು' ಎಂದು ಹೇಳಿದರು.

‘ಸ್ವಾಮೀಜಿಗಳು ಈ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಬೇಕು. ಇದು ಒಂದು ಜಾತಿ, ಸಮುದಾಯದ ವಿಚಾರವಲ್ಲ. ಒಟ್ಟು ಸಮಾಜದ ವಿಚಾರ. ಎಲ್ಲರೂ ಸಂವಿಧಾನ ಒಪ್ಪಿ ಶಾಂತಿಯಿಂದ ಇರಬೇಕು. ಆದರೆ ಸರ್ಕಾರ ಈಗ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕು. ಹಿಂದೆ ನಮ್ಮ ಸರಕಾರದ ನಿರ್ಧಾರಗಳ ವಿರುದ್ಧ ಇದೇ ಬಿಜೆಪಿಯವರು ಎಷ್ಟು ದೊಡ್ಡ  ಹೋರಾಟ ಮಾಡಿದ್ದರು? ಸರಕಾರ ಸ್ವಾಮೀಜಿಗಳನ್ನು ಹೆದರಿಸುತ್ತಿದೆಯೆ? ಎಂಬ ಬಗ್ಗೆ ಸ್ವಾಮೀಜಿಗಳನ್ನೆ ಕೇಳಬೇಕು' ಎಂದು ಶಿವಕುಮಾರ್ ತಿಳಿಸಿದರು.

‘ಬುದ್ಧ, ಬಸವಣ್ಣ, ಕುವೆಂಪು, ಅಂಬೇಡ್ಕರ್, ನಾರಾಯಣ ಗುರುಗಳಿಗೆ ಅಪಮಾನ ಆಗಿರುವ ಬಗ್ಗೆ ಅವರನ್ನು ಕೇಳಬೇಕು. ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದು ಆರಾಧಿಸುತ್ತೇವೆ. ಅಂತವರಿಗೆ ಈ ರೀತಿ ಅಪಮಾನ ಮಾಡಿರುವಾಗ ಸಂಬಂಧಪಟ್ಟ ಸಮುದಾಯದ ಸಂಘಟನೆಗಳಿಗೆ ಏನಾಗಿದೆ? ಒಕ್ಕಲಿಗರ ಸಂಘ ಇರಲಿ, ವೀರಶೈವ ಸಂಘ ಇರಲಿ, ಇತರ ಸಂಘಗಳಿಗೆ ಏನಾಗಿದೆ? ಅವರೇಕೆ ಧ್ವನಿ ಎತ್ತುತ್ತಿಲ್ಲ. ರಾಜಕೀಯ ನಾಯಕರ ವಿಚಾರ ಬಿಡಿ. ಕೆಲವರು ಒಪ್ಪಂದ ಮಾಡಿಕೊಂಡು ಅವರವರ ರಾಜಕಾರಣ ಮಾಡುತ್ತಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಮಠಗಳು ಆ ರೀತಿ ಆಗಬಾರದು' ಎಂದು ಶಿವಕುಮಾರ್ ಅಸಮಾಧಾನ ಹೊರಹಾಕಿದರು.

‘ಕನ್ನಡ ಸಂಘಟನೆಗಳು ನಿನ್ನೆ ಪ್ರತಿಭಟನೆ ಹಮ್ಮಿಕೊಂಡಿದ್ದವು. ಅವರಿಗೆ ಯಾವುದೇ ರಾಜಕೀಯದ ಅಗತ್ಯವಿಲ್ಲ. ಅದೇ ರೀತಿ ಸ್ವಾಮೀಜಿಗಳು ಈ ವಿಚಾರವಾಗಿ ಧ್ವನಿ ಎತ್ತಬೇಕು ಎಂದು ಅವರ ಪಾದಕ್ಕೆ ನಮಸ್ಕರಿಸುತ್ತಾ ನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತೇನೆ'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X