Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧರ್ಮಗಳ ಕುರಿತು ಪ್ರಚೋದನಾತ್ಮಕ...

ಧರ್ಮಗಳ ಕುರಿತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಬೇಡಿ: ಸಂಸದರಿಗೆ ಲೋಕಸಭಾ ಸ್ಪೀಕರ್ ಮನವಿ‌

"ಸಂವಿಧಾನದ ಮುಂದೆ ಎಲ್ಲ ಧರ್ಮಗಳೂ ಸಮಾನ"

ವಾರ್ತಾಭಾರತಿವಾರ್ತಾಭಾರತಿ19 Jun 2022 7:10 PM IST
share
ಧರ್ಮಗಳ ಕುರಿತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಬೇಡಿ: ಸಂಸದರಿಗೆ ಲೋಕಸಭಾ ಸ್ಪೀಕರ್ ಮನವಿ‌

ಹೊಸದಿಲ್ಲಿ: "ಸಂವಿಧಾನದ ಮುಂದೆ ಎಲ್ಲ ಧರ್ಮಗಳೂ ಸಮಾನ" ಎಂದು ಒತ್ತಿ ಹೇಳಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, "ಸಂಸದರು ಯಾವುದೇ ಧರ್ಮದ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸಬೇಕು ಮತ್ತು ಸಂಸತ್ತಿನ ಘನತೆ ಹಾಗೂ ಸಜ್ಜನಿಕೆಯನ್ನು ಯಾವಾಗಲೂ ಕಾಪಾಡಿಕೊಳ್ಳಬೇಕು" ಎಂದು ಹೇಳಿದ್ದಾರೆ.

ರವಿವಾರ ಮೂರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ಬಿರ್ಲಾ, ತಮ್ಮ ಪ್ರಯಾಣವನ್ನು ಇಲ್ಲಿಯವರೆಗೆ ಯಶಸ್ವಿಗೊಳಿಸಲು ಸಹಕರಿಸಿದ್ದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಧನ್ಯವಾದ ಅರ್ಪಿಸಿದರು ಮತ್ತು ಈ ಅವಧಿಯಲ್ಲಿ ಸದನದ ಸರಾಸರಿ ಉತ್ಪಾದಕತೆಯು 100 ಪ್ರತಿಶತಕ್ಕಿಂತ ಹೆಚ್ಚಿರುವುದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.

17ನೇ ಲೋಕಸಭೆಯಲ್ಲಿ ಇದುವರೆಗೆ ಎಂಟು ಅಧಿವೇಶನಗಳಲ್ಲಿ ಸದನವು ಸುಮಾರು 1,000 ಗಂಟೆಗಳ ಕಾಲ ಕಾರ್ಯನಿರ್ವಹಿಸಿದೆ ಎಂದು ಅವರು ಹೇಳಿದರು.

ಚರ್ಚೆಗಳನ್ನು "ಪ್ರಜಾಪ್ರಭುತ್ವದ ಆಭರಣ" ಎಂದ ಓಂ ಬಿರ್ಲಾ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಸಂಸದರು ಸಂಸತ್ತಿನಲ್ಲಿ ಮಾತನಾಡುವಾಗ ಅನಗತ್ಯ ಆಕ್ರಮಣ ಮತ್ತು ಕೂಗಾಟವನ್ನು ತಪ್ಪಿಸಬೇಕು ಎಂದು ಹೇಳಿದರು.

"ಚರ್ಚೆ ಸಂಸದೀಯ ಪ್ರಜಾಪ್ರಭುತ್ವದ ಬಹುಮುಖ್ಯ ಭಾಗವಾಗಿದೆ. ವ್ಯಂಗ್ಯ, ಪರಸ್ಪರ ಕೆಸರೆರಚಾಟ ಸಹ ಸ್ವೀಕಾರಾರ್ಹ. ಆದರೆ ಅನಗತ್ಯ ಆಕ್ರಮಣ, ಕೂಗು ಮತ್ತು ಪರಸ್ಪರ ಅಡ್ಡಿಪಡಿಸುವುದನ್ನು ಸಂಸತ್ತಿನಲ್ಲಿ ಸಂಸದರು ತಪ್ಪಿಸಬೇಕು" ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು. ರಾಜಕೀಯ ನಾಯಕರ ಆಧಾರರಹಿತ ಆರೋಪ ಮತ್ತು ಪ್ರತ್ಯಾರೋಪಗಳಿಗೆ ಸಂಸತ್ತನ್ನು ವೇದಿಕೆಯಾಗಿ ಬಳಸಿಕೊಳ್ಳಬಾರದು ಎಂದರು.

ಧರ್ಮಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳ ನಡುವೆ ಬಿಸಿಯಾದ ಚರ್ಚೆಗಳ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, "ಸಂಸತ್ತಿನ ಸದಸ್ಯರು ಯಾವುದೇ ಧರ್ಮದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕು. ಏಕೆಂದರೆ ಸಂವಿಧಾನದ ಮುಂದೆ ಎಲ್ಲಾ ಧರ್ಮಗಳು ಸಮಾನವಾಗಿವೆ. ಧಾರ್ಮಿಕ ವಿಷಯಗಳ ಬಗ್ಗೆ ಮಾತನಾಡುವಾಗ ಸಂಸದರು ತಮ್ಮ ಹೇಳಿಕೆಗಳು ಯಾವುದೇ ಇತರ ಧರ್ಮದ ಭಾವನೆಗಳಿಗೆ ಧಕ್ಕೆ ತರುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನಾವೆಲ್ಲರೂ ಈ ಆಚರಣೆ ಮತ್ತು ಸಂಪ್ರದಾಯವನ್ನು ಶ್ರದ್ಧೆಯಿಂದ ಅನುಸರಿಸಬೇಕು. ನಮ್ಮ ಸಂವಿಧಾನವು ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದೆ" ಎಂದು ಬಿರ್ಲಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X