Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಕಚೇರಿಯ ಸೆಕ್ಯೂರಿಟಿ ಗಾರ್ಡ್‌...

ಬಿಜೆಪಿ ಕಚೇರಿಯ ಸೆಕ್ಯೂರಿಟಿ ಗಾರ್ಡ್‌ ಕೆಲಸಕ್ಕೆ ʼಅಗ್ನಿವೀರರಿಗೆʼ ಪ್ರಾತಿನಿಧ್ಯ ನೀಡಲಾಗುವುದು ಎಂದ ಹಿರಿಯ ಮುಖಂಡ

ವಾರ್ತಾಭಾರತಿವಾರ್ತಾಭಾರತಿ19 Jun 2022 7:54 PM IST
share
ಬಿಜೆಪಿ ಕಚೇರಿಯ ಸೆಕ್ಯೂರಿಟಿ ಗಾರ್ಡ್‌ ಕೆಲಸಕ್ಕೆ ʼಅಗ್ನಿವೀರರಿಗೆʼ ಪ್ರಾತಿನಿಧ್ಯ ನೀಡಲಾಗುವುದು ಎಂದ ಹಿರಿಯ ಮುಖಂಡ

ಹೊಸದಿಲ್ಲಿ: ಬಿಜೆಪಿ ಪಕ್ಷದ ಕಚೇರಿಯ ಕಾವಲು ಕೆಲಸದಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ. ಈ ಹೇಳಿಕೆ ಸದ್ಯ ಸಾಮಾಜಿಕ ತಾಣದಲ್ಲಿ ವಿವಾದ ಸೃಷ್ಟಿಸಿದೆ.

“21 ರಿಂದ 25 ವರ್ಷ ವಯಸ್ಸಿನಲ್ಲಿ 4 ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಂತರ ಅಗ್ನಿವೀರ್ ತರಬೇತಿ ಪಡೆದು ಹೊರಬರುವಾಗ, ಅವನ ಬಳಿ ₹ 11 ಲಕ್ಷ ಇರುತ್ತದೆ. ಅವರಿಗೆ ಅಗ್ನಿವೀರ ಎಂಬ ಟ್ಯಾಗ್ ಇರುತ್ತದೆ. ನಾನು ಬಿಜೆಪಿ ಕಚೇರಿಗೆ ಸೆಕ್ಯೂರಿಟಿ ಗಾರ್ಡ್ ನೇಮಿಸಲು ಬಯಸಿದರೆ, ಅಗ್ನಿವೀರ್‌ಗೆ ಆದ್ಯತೆ ನೀಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಶನಿವಾರ ಇಂದೋರ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

"ನನ್ನ ಸ್ನೇಹಿತ 35 ನೇ ವಯಸ್ಸಿನಲ್ಲಿ ನಿವೃತ್ತರಾದ ಮಾಜಿ ಸೈನಿಕನಿಗೆ ಭದ್ರತೆಯ ಕೆಲಸವನ್ನು ನೀಡಿದ್ದಾನೆ" ಎಂದು ಅವರು ಹೇಳಿದರು.

ಬಿಜೆಪಿಯ ಹಿರಿಯ ನಾಯಕರ ಈ ಹೇಳಿಕೆಯನ್ನುಖಂಡಿಸಿ, ದೇಶದ ನಿರುದ್ಯೋಗಿ ಯುವಕರನ್ನು ಅವಮಾನಿಸುತ್ತಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿತು.

ಒಂದು ಕಡೆ ನಿರುದ್ಯೋಗ ಪರಿಸ್ಥಿತಿ ಸುಧಾರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದರೆ, ಇನ್ನೊಂದು ಕಡೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯುವಕರಿಗೆ ಸೆಕ್ಯೂರಿಟಿ ಗಾರ್ಡ್‌ಗಳ ಕೆಲಸದ ಆಫರ್‌ ನೀಡಿ ಅವಮಾನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ಸಮಿತಿಯ ಮಾಧ್ಯಮ ಉಸ್ತುವಾರಿ ಕೆ.ಕೆ.ಮಿಶ್ರಾ ಹೇಳಿದ್ದಾರೆ.

ಈ ನಡುವೆ ಬಿಜೆಪಿ ನಾಯಕರು ವಿಜಯವರ್ಗಿಯರನ್ನು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ವಕ್ತಾರ ಹಿತೇಶ್ ವಿಜಯವರ್ಗಿಯಾ ಮಾತನಾಡಿ, “ಭಾರತದಲ್ಲಿ ಈ ಅಗ್ನಿಪಥ್ ಯೋಜನೆಯು ನಾಗರಿಕ ರಕ್ಷಣೆಯಲ್ಲಿ ಕ್ರಾಂತಿಯನ್ನು ತರಲಿದೆ. ಯುರೋಪಿನಂತೆ, ಭಾರತವು ತರಬೇತಿ ಪಡೆದ ನಾಗರಿಕ ಪಡೆಯನ್ನು ಹೊಂದಿಲ್ಲ. ಕೈಗಾರಿಕೋದ್ಯಮಿಗಳು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪರ್ಸನಲ್ ಗಾರ್ಡ್‌ಗಳು ಉತ್ತಮ ಸಂಬಳವನ್ನು ಪಡೆಯುತ್ತಾರೆ, ಅದು ಖಂಡಿತವಾಗಿಯೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಎಲ್ಲರಿಗೂ ತಿಳಿದಿದೆ" ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X