Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಸರಕಾರದಿಂದ ದೇಶದ ಯುವಕರ ಭವಿಷ್ಯ...

ಮೋದಿ ಸರಕಾರದಿಂದ ದೇಶದ ಯುವಕರ ಭವಿಷ್ಯ ಹಾಳು: ಶಾಸಕ ಪ್ರಿಯಾಂಕ್ ಖರ್ಗೆ

''ತಾಕತ್ತಿದ್ರೆ ಪ್ರಧಾನಿ ಮೋದಿ ‘ಅಗ್ನಿಪಥ್’ ಬಗ್ಗೆ ಸುದ್ದಿಗೋಷ್ಟಿ ಮಾಡಲಿ''

ವಾರ್ತಾಭಾರತಿವಾರ್ತಾಭಾರತಿ19 Jun 2022 8:26 PM IST
share
ಮೋದಿ ಸರಕಾರದಿಂದ ದೇಶದ ಯುವಕರ ಭವಿಷ್ಯ ಹಾಳು: ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ, ಜೂ.19: ಸೇನಾ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳಿಂದ ನೂರಾರು ರೈಲುಗಳು ಬಂದ್ ಆಗಿವೆ. ಹಲವಾರು ರೈಲುಗಳು, ರೈಲ್ವೆ ನಿಲ್ದಾಣ ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕರ್ನಾಟಕದಲ್ಲೂ ಸೇನಾಕಾಂಕ್ಷಿಗಳು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇದರಿಂದ, ದೇಶದ ಯುವಕರ ಭವಿಷ್ಯ ಹಾಳು ಮಾಡಲು ಪ್ರಧಾನಿ ಮೋದಿ ಸರಕಾರ ಮುಂದಾಗಿದೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರವಿವಾರ ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಗ್ನಿವೀರರ ಯೋಜನೆ ಅನ್ವಯ ಹೊಸ ಸೈನಿಕರನ್ನ ಆರು ತಿಂಗಳ ತರಬೇತಿ ನೀಡಿ, ಅಗ್ನಿವೀರರ ಹೆಸರನಲ್ಲಿ ಅವರನ್ನು ನೌಕಾದಳ, ಭೂದಳ ಹಾಗೂ ವಾಯುದಳದ ಸೈನಿಕರನ್ನಾಗಿ 64 ಸಾವಿರ ಸೈನಿಕರನ್ನ ನೇಮಕ ಮಾಡಿ ನಾಲ್ಕು ವರ್ಷದ ಬಳಿಕ ಅವರನ್ನು ಸೇವೆಯಿಂದ ನಿವೃತ್ತಿಗೊಳಿಸುತ್ತಾರೆ. ಆಗ ಶೆ.75 ಸೇವಾ ಕಮಿಷನ್ ನೀಡುತ್ತಾರೆ. ಇದಕ್ಕೆ ಮಾಜಿ ಸೈನಿಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. 

ಈ ಯೋಜನೆ ಜಾರಿಗೆ ತರುವ ಮುನ್ನ ಪೈಲಟ್ ಪ್ರಾಜೆಕ್ಟ್ ಮಾಡಬೇಕಿತ್ತು. ಯಾಕೆಂದರೆ ಭಾರತವು ಪಾಕಿಸ್ತಾನ, ಚೀನಾ ಹಾಗೂ ನೇಪಾಳದಂತ ದೇಶಗಳ ಗಡಿ ಹಂಚಿಕೊಂಡಿದೆ. ಚೀನಾ ಸೈನಿಕರು ಈಗಾಗಲೇ ಭಾರತದ ಗಡಿ ಒಳಗೆ ಬಂದು ಗ್ರಾಮಗಳನ್ನೇ ನಿರ್ಮಾಣ ಮಾಡಿದ್ದಾರೆ. ಹೀಗಿರುವಾಗ, ಗುತ್ತಿಗೆ ಆಧಾರದ ಮೇಲೆ ಸೈನಿಕರನ್ನು ನೇಮಿಸುವುದು ಎಷ್ಟು ಸೂಕ್ತ ಎನ್ನುವ ಪ್ರಶ್ನೆ ಎದ್ದಿದೆ ಎಂದರು.

ಪ್ರಧಾನಿ ಮೋದಿ ಅವರ ಆಡಳಿತದ ಎಂಟು ವರ್ಷದ ಸಾಧನೆಗಳ ಬಗ್ಗೆ ಬಹಳ ವಿಜೃಂಭಣೆಯಿಂದ ಉತ್ಸವವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಆಚರಿಸುತ್ತಿವೆ. ಸಂವಿಧಾನದ ಎಲ್ಲ ಆಶಯ ಹಾಗೂ ತಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಕಿಡಿಕಾರಿದರು.

ಈ ಹಿಂದೆ ರೈತರೇ ರಸ್ತೆಗಿಳಿದು ಹೋರಾಟ ನಡೆಸಿ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಮಾಡಿದರು. ಬಿಜೆಪಿ ಶಾಸಕರು, ಸಂಸದರು ವಕ್ತಾರರ ಸ್ಥಿತಿ ನೋಡಿದರೇ ನಮಗೆ ಬೇಸರವಾಗುತ್ತದೆ. ಕಾರಣ ರಾತ್ರಿ ಮೋದಿ ಕನಸ್ಸಲ್ಲಿ ಕಂಡಿದ್ದನ್ನ ಇವರು ಮಾಧ್ಯಮದಲ್ಲಿ ಡಿಫೆಂಡ್ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ವಾಗ್ದಾಳಿ ನಡೆಸಿದರು.

ಅಮಿತ್ ಶಾ ವಿರುದ್ಧ ಕಿಡಿ: ಅಗ್ನಿಪಥ ಯೋಜನೆ ವಿರೋಧಿಸಿ ರೈಲುಗಳಿಗೆ ಬೆಂಕಿ ಹಚ್ಚುತ್ತಿದ್ದರೂ ಗೃಹ ಸಚಿವ ಅಮಿತ್ ಶಾ ಯಾವುದೇ ಹೇಳಿಕೆಯನ್ನು ನೀಡುತ್ತಿಲ್ಲ. ಗಲಾಟೆಗಳಾದರೂ ಒಂದೇ ಒಂದು ಹೇಳಿಕೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. 

ತಾಕತ್ತಿದ್ರೆ ಮೋದಿ ‘ಅಗ್ನಿಪಥ್’ ಬಗ್ಗೆ ಸುದ್ದಿಗೋಷ್ಟಿ ಮಾಡಲಿ: ಪ್ರಧಾನಿ ಮೋದಿಯವರು ಯುವಕರ ದಾರಿಗೆ ದೀಪ ಆಗುವುದನ್ನು ಬಿಟ್ಟು, ವಿವಾದ ಸೃಷ್ಟಿಸುವಂತಹ ಅಗ್ನಿಫಥ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಜೂ.20ರಂದು ಬೆಂಗಳೂರಿಗೆ ಮೋದಿ ಬರುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮೋದಿ ಅವರು ಒಂದೇ ಒಂದು ಸುದ್ದಿಗೋಷ್ಟಿಯನ್ನೂ ಮಾಡಿಲ್ಲ. ಅವರಿಗೆ ತಾಕತ್ತಿದ್ರೆ, ಸುದ್ದಿಗೋಷ್ಟಿಯನ್ನು ಮಾಡಿ, ಅಗ್ನಿಪಥ್ ಬಗ್ಗೆ ಸಿಎಂ, ಕಟೀಲ್ ಅವರಿಗೆ ಮನವರಿಕೆ ಮಾಡಿಕೊಡಲಿ'

-ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X