Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಅಗ್ನಿಪಥ್' ಯೋಜನೆ ಜಾರಿ ಬೇಡ: ವೆಲ್ಫೇರ್...

'ಅಗ್ನಿಪಥ್' ಯೋಜನೆ ಜಾರಿ ಬೇಡ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ವಾರ್ತಾಭಾರತಿವಾರ್ತಾಭಾರತಿ20 Jun 2022 10:56 PM IST
share

ಬೆಂಗಳೂರು, ಜೂ.20: ಸೈನಿಕರ ಅಲ್ಪಾವಧಿ ನೇಮಕಾತಿಗೆ ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರಕಾರ ಕೂಡಲೇ ಕೈಬಿಡಬೇಕು. ಖಾಸಗೀಕರಣ ಬಲಿಷ್ಠ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರವು ಈ ಯೋಜನೆಗೆ ಮುಂದಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ತಾಹಿರ್ ಹುಸೇನ್ ಆರೋಪಿಸಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವ ಬದಲು ನಿರುದ್ಯೋಗ ಹೆಚ್ಚಿಸುವ ಕೆಲಸವು ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರಕಾರ ಮಾಡುತ್ತಿದೆ. ಅಗ್ನಿಪಥ ಪ್ರಕ್ರಿಯೆಯಲ್ಲಿ ಮೀಸಲಾತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. ಅಗ್ನಿಪಥ ಯೋಜನೆ ಅನುಷ್ಠಾನದಿಂದ ಯುವಕರಿಗೆ ಅನ್ಯಾಯವಾಗುತ್ತದೆ. ರಕ್ಷಣಾ ಇಲಾಖೆಯನ್ನು ಖಾಸಗೀಕರಣದ ಹೆಸರಲ್ಲಿ ಕೇಸರೀಕರಣ ಮಾಡುವ ಕೆಲಸಕ್ಕೆ ಮೋದಿ ನೇತೃತ್ವದ ಕೇಂದ್ರ ಸರಕಾರವು ಕೈ ಹಾಕಿದೆ ಎಂದು ಅವರು ದೂರಿದ್ದಾರೆ.

ರಕ್ಷಣಾ ಇಲಾಖೆಯಲ್ಲಿ 30 ವರ್ಷಗಳ ಕಾಲ ದುಡಿದು ನಿವೃತ್ತಿ ಪಡೆದು ಹೊರ ಬಂದವರಿಗೆ ಯಾವುದೇ ಉದ್ಯೋಗವನ್ನು ನೀಡಿಲ್ಲ.  ಸೇನೆಯಿಂದ ನಿವೃತ್ತಿ ಪಡೆದು ಬಂದಿರುವ ಜಿಲ್ಲೆಯ 16 ಸಾವಿರ ಮಂದಿ ಸೈನಿಕರಿಗೆ ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಯಾವುದೇ ಕೆಲಸ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.

ನಾಲ್ಕು ವರ್ಷಗಳ ಕಾಲ ಸೈನಿಕರಾಗಿ ಸೇವೆ ಸಲ್ಲಿಸುವ ಎಸೆಸೆಲ್ಸಿ ಅರ್ಹತೆ ಹೊಂದಿದವರಿಗೆ ಸೈನಿಕರಾಗಿ ದುಡಿಯುವವರಿಗೆ ಪಿಯುಸಿ ಪ್ರಮಾಣ ಪತ್ರ ನೀಡುತ್ತೇವೆ ಎಂದು ಹೇಳಿದ್ದೀರಿ, ಇದು ಸರಿ. ಆದರೆ ಅಗ್ನಿವೀರ ಪ್ರಮಾಣಪತ್ರ ನೀಡುತ್ತೇವೆ ಎಂದು ಹೇಳುತ್ತಿದ್ದೀರಿ ಇದು ಎಷ್ಟು ಸರಿ ಎಂದು ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ಯುವಕರು ಹಿಂಸೆಮಾರ್ಗ ತೊರೆದು ಶಾಂತಿಯುತ ರೀತಿಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಬೇಕು. ಸರಕಾರದ ಆಸ್ತಿಪಾಸ್ತಿಗೆ ಹಾನಿ ಮಾಡಬಾರದು ಎಂದು ತಾಹಿರ್ ಹುಸೇನ್ ಮನವಿ ಮಾಡಿದ್ದಾರೆ.

ರಾಷ್ಟ್ರದ್ಯಂತ ಪ್ರತಿಭಟನೆ ಮತ್ತು ಹಿಂಚಾರ ನಡೆಯುತ್ತಿದ್ದರೂ ಸರಕಾರ ಹಠ ಬಿಡದೆ ಯೋಜನೆ ಜಾರಿ ಮಾಡಲು ಮುಂದಾಗಿರುವುದು ಖಂಡನಿಯ. ಸರಕಾರ ತಕ್ಷಣ ಪ್ರತಿಭಟನಾ ನಿರತರನ್ನು ಕರೆದು ಅಹವಾಲು ಕೇಳಿ ಅವರಿಗೆ ಸಮಾಧಾನ ಪಡಿಸುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಗ್ನಿಪಥ ಹೆಸರಲ್ಲಿ ಕೇಸರೀಕರಣ ಮಾಡುವ ಹುನ್ನಾರ ಮಾಡುತ್ತಿದ್ದೀರಿ. ಇದರಿಂದ ದೇಶದ ಭದ್ರತೆಗೆ ಧಕ್ಕೆ ಬರಲಿದೆ. ರಕ್ಷಣಾ ಇಲಾಖೆಯಲ್ಲಿ ಖಾಸಗೀಕರಣ ಮಾಡುವ ಕೆಲಸವನ್ನು ಕೂಡಲೇ ಕೈಬಿಡಿ. ದೇಶದ ಜನರ ದಿಕ್ಕು ತಪ್ಪಿಸುವ ಯೋಜನೆ ಜಾರಿಗೆ ಸರಕಾರ ಮುಂದಾಗಬಾರದು ಎಂದು ತಾಹಿರ್ ಹುಸೇನ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X