Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಟಕದ ಮೂಲಕ ಐತಿಹಾಸಿಕ ಸತ್ಯದ ಅನಾವರಣ -...

ನಾಟಕದ ಮೂಲಕ ಐತಿಹಾಸಿಕ ಸತ್ಯದ ಅನಾವರಣ - ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Jun 2022 11:17 PM IST
share
ನಾಟಕದ ಮೂಲಕ ಐತಿಹಾಸಿಕ ಸತ್ಯದ ಅನಾವರಣ - ಸಚಿವ ಸುನೀಲ್ ಕುಮಾರ್

ಕಾರ್ಕಳ : ನಮ್ಮ ದೇಶದ ನೈಜ ಇತಿಹಾಸ ಮುಚ್ಚಿಟ್ಟು ಯಾವುದೋ ಸ್ವಾರ್ಥಕ್ಕಾಗಿ ವಿಷಯವನ್ನು ತಿರುಚಿ ಪಠ್ಯದಲ್ಲಿ ಸೇರಿಸಿ ಮಕ್ಕಳಿಗೆ ಬೋಧನೆ ಮಾಡಲಾಯಿತು. ಅದನ್ನೆಲ್ಲ ಇನ್ನು ಸಹಿಸಲಸಾಧ್ಯ. ಪಠ್ಯ, ನಾಟಕ, ನೃತ್ಯದ ಮೂಲಕ ನಮ್ಮ ದೇಶದ ನಿಜವಾದ ಇತಿಹಾಸವನ್ನು ಸಮಾಜದ ಮುಂದಿಡುತ್ತೇವೆ. ಇದಕ್ಕೆ ಸರಕಾರ ಬದ್ಧವಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. 

ಅವರು ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಯಕ್ಷ ರಂಗಾಯಣ ಕಾರ್ಕಳದ ಚೊಚ್ಚಲ ನಾಟಕ "ಅಮರ ಕ್ರಾಂತಿ ಸ್ವಾಂತ್ರ್ಯ ಹೋರಾಟ - 1837' ಉದ್ಘಾಟಿಸಿ ಮಾತನಾಡಿದರು.

ಬ್ರಿಟಿಷರು ಭಾರತವನ್ನು ಬಿಟ್ಟು ತೊಲಗಲು ಕೇವಲ ಸತ್ಯಾಗ್ರಹ ಮಾತ್ರ ಕಾರಣವಾಗಿರಲಿಲ್ಲ. ಕ್ರಾಂತಿಕಾರಿಗಳ ಹೋರಾಟವು ಕೂಡ ಭಾರತದ ಸ್ವಾತಂತ್ರ್ಯದ ಇತಿಹಾಸದಲ್ಲಿ ಮುಖ್ಯ ಪಾತ್ರ ವಹಿಸಿದೆ. ಅದನ್ನು ಪಠ್ಯದ ಮೂಲಕ ತಿಳಿಸಿಕೊಡುವ ಕಾರ್ಯವಾಗಬೇಕೆಂದು ಸುನೀಲ್‌ ಕುಮಾರ್‌ ಅಭಿಪ್ರಾಯಪಟ್ಟರು. 

ಖ್ಯಾತ ಸಾಹಿತಿ, ಅಮರ ಕ್ರಾಂತಿ ಸ್ವಾತಂತ್ರ್ಯ ಹೋರಾಟ - 1837 ನಾಟಕದ ಲೇಖಕ ಡಾ. ಪ್ರಭಾಕರ ಶಿಶಿಲ, ಕರಾವಳಿಯ ಸ್ವಾತಂತ್ರ್ಯ ಹೋರಾಟದ ನೆನಪು ಕುರಿತು ವಿಶೇಷ ಉಪನ್ಯಾಸ ನೀಡಿದರು. ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ನಡೆದ ಮೂರು ಹೋರಾಟಗಳು ಬಹಳ ಪ್ರಮುಖವಾದವುಗಳು. ತುಳುನಾಡಿನ ರಾಣಿ ಅಬ್ಬಕ್ಕ ಈ ನೆಲದ ಸ್ವಾತಂತ್ರ್ಯಕ್ಕಾಗಿ ಪೋರ್ಚುಗೀಸರ ವಿರುದ್ಧ ಹೋರಾಡಿದಳು. ಕಾರ್ಕಳದ ಎಂ ಡಿ. ಅಧಿಕಾರಿ, ಕಾರ್ನಾಡ್ ಸದಾಶಿವ ರಾವ್ ಹೀಗೆ ಕರಾವಳಿಯ ಹೋರಾಟಗಾರರ ಕುರಿತು ದಾಖಲೀಕರಣ ಮಾಡುವ ಅಗತ್ಯವಿದೆಯೆಂದರು. 

ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್‌ಗೆ ಭೇಟಿ ನೀಡಿದ ನಂತರ ನನ್ನ ಮನಸ್ಸೇ ಬದಲಾಯಿತು. ಸಚಿವ ಸುನಿಲ್ ಕುಮಾರ್ ಅವರ ಮೇಲಿನ ನನ್ನ ಭಾವನೆಯೇ ಬದಲಾಯಿತು. ಸ್ವಾತಂತ್ರ್ಯ ಎಂದರೆ ಹಕ್ಕು ಮತ್ತು ಅಧಿಕಾರ ಅನುಭವಿಸಲು ಇರುವ ಸ್ಥಿತಿ. ಸ್ವಾತಂತ್ರ್ಯಕ್ಕಿಂತ ದೊಡ್ಡ ಮೌಲ್ಯವಿಲ್ಲ. ಭಾರತೀಯತೆಯನ್ನು ಅಳವಡಿಸಿ ಸ್ವಾತಂತ್ರ್ಯವನ್ನು ನಾವು ಅನುಭವಿಸಬೇಕು. ಅಖಂಡ ಭಾರತ ನನ್ನ ಕನಸು. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ನಡೆದ ಘಟನೆ ಸ್ವಾತಂತ್ರ್ಯದ ಹರಣ ಎಂದು ಡಾ. ಪ್ರಭಾಕರ ಶಿಶಿಲ ನುಡಿದರು. 

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಕ್ಷ ರಂಗಾಯಣ ಕಾರ್ಕಳದ ನಿರ್ದೇಶಕ ಜೀವನ ರಾಮ್ ಸುಳ್ಯ ಮಾತನಾಡಿ, ನಾನೊಬ್ಬ ಕಲಾವಿದ. ಕಲೆ ನನಗೆ ದೇವರು. ಎಡಬಲಗಳನ್ನು ಮೀರಿದವನೆ ನಿಜವಾದ ಕಲಾವಿದ. ಒಂದು ನಾಟಕವನ್ನು ವೇದಿಕೆಗೆ ತರುವಾಗ ಹಲವಾರು ಸವಾಲುಗಳನ್ನು ಎದುರಿಸಬೇಕಾಗುವುದು. ನನ್ನ ನಿಷ್ಠೆ ಕಲೆಗೆ ಮಾತ್ರ. ಕಾರ್ಕಳದ ಯಕ್ಷರಂಗಾಯಣವು ಮುಂದಿನ ದಿನಗಳಲ್ಲಿ ಅನೇಕ ಮೌಲ್ವಿಕವಾದ ಕಾರ್ಯಕ್ರಮ ನೀಡಲಿದೆ ಎಂದರು. 
  
ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ. ಕೋಟ್ಯಾನ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ನೂತನ ನಾಟಕಕ್ಕೆ ಶುಭಹಾರೈಸಿದರು. ಯಕ್ಷ ರಂಗಾಯಣ ಕಾರ್ಕಳದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕ ರಾಜೇಂದ್ರ ಭಟ್ ಕೆ. ಕಾರ್ಯಕ್ರಮ ನಿರೂಪಿಸಿ, ವಸಂತ ಎಂ. ವಂದಿಸಿದರು.

ಅಮರ ಕ್ರಾಂತಿ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದವರು ಕೆದಂಬಾಡಿ ರಾಮ ಗೌಡ, ಕಲ್ಯಾಣ ಸ್ವಾಮಿ ನಾಮಾಂಕಿತ ಪುಟ್ಟ ಬಸವ, ಹುಲಿ ಕಡಿದ ನಂಜಯ್ಯ, ಗುಡ್ಡೆ ಮನೆ ಅಪ್ಪಯ್ಯ. 1837 ಮಾರ್ಚ್‌ 30ರಂದು ಸುಳ್ಯ ದಿಂದ ಆರಂಭವಾದ ಈ ರೈತ ಹೋರಾಟ ಎಪ್ರಿಲ್‌ 5ರಂದು ಮಂಗಳೂರಿನಲ್ಲಿ ಬ್ರಿಟಿಷ್‌ ಧ್ವಜವನ್ನು ಕೆಳಗಿಳಿಸುವುದರೊಂದಿಗೆ ಮುಕ್ತಾಯವಾಗುವುದು. ಈ ರೋಮಾಂಚಕ ಘಟನೆಯನ್ನು ನಾಟಕದಲ್ಲಿ ಅತ್ಯಂತ ಮನೋಜ್ಞವಾಗಿ ಕಟ್ಟಿಕೊಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X