Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಡುಬಿದ್ರಿ: ಕಾಮಿನಿ ನದಿಯಲ್ಲಿ ಮೀನುಗಳು...

ಪಡುಬಿದ್ರಿ: ಕಾಮಿನಿ ನದಿಯಲ್ಲಿ ಮೀನುಗಳು ಸಾವು

ವಾರ್ತಾಭಾರತಿವಾರ್ತಾಭಾರತಿ20 Jun 2022 11:39 PM IST
share
ಪಡುಬಿದ್ರಿ: ಕಾಮಿನಿ ನದಿಯಲ್ಲಿ ಮೀನುಗಳು ಸಾವು

ಪಡುಬಿದ್ರಿ: ಪಡುಬಿದ್ರಿಯ ಕಾಮಿನಿ ನದಿಯ ನೀರು ಕಲುಷಿತಗೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಮೀನುಗಳು ಸಾವನ್ನಪ್ಪಿದ್ದು, ಆತಂಕಕ್ಕೆ ಕಾರಣವಾಗಿದೆ. 

ಎರಡು ದಿನಗಳ ಹಿಂದೆ ಬಂದ ಮಳೆಯ ಬಳಿಕ ಹೊಳೆಯ ನೀರು ಕಪ್ಪು ಬಣ್ಣಕ್ಕೆ ತಿರುಗಿ ಕಲುಷಿತಗೊಂಡಿದೆ. ಪಂಜರದಲ್ಲಿ ಸಾಕುವ ಮೀನುಗಳು ಹಾಗೂ ಹೊಳೆಯಲ್ಲಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಮೀನುಗಳು ಸತ್ತು ಹೋಗಿವೆ. ಪರಿಸರದಾದ್ಯಂತ ದುರ್ವಾಸನೆಯಿಂದ ಕೂಡಿದೆ. ಅಲ್ಲದೆ ಹೊಳೆಯ ನೀರು ಕೃಷಿ ಭೂಮಿಗೂ ಆವರಿಸಿರುವುದರಿಂದ ಕೃಷಿ ಭೂಮಿಗೂ ಹಾನಿಯಾಗಿದೆ. ಈ ಭಾಗದಲ್ಲಿ ಇರುವ ಹೆಚ್ಚುತ್ತಿರುವ ಕೈಗಾರಿಕೆ ಗಳಿಂದಾಗಿ ಅಲ್ಲಿ ಹೊರಬಿಡುವ ರಾಸಾಯನಿಕ ಮಿಶ್ರಿತ ನೀರಿನಿಂದ ಮೀನುಗಳು ಸತ್ತುಹೋಗಿವೆ  ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ನೇಹಿತ್, ನಾನು ಮತ್ತು ನಿತಿನ್ ಅವರ ಎರಡು ತಂಡವಾಗಿ  15 ಮಂದಿ ಕಾಡಿಪಟ್ಣ ಹಾಗೂ ನಡಿಪಟ್ಣದ ಜಾರಂದಾಯ ಸಾನದ ಬಳಿ  ಪಂಜರದಲ್ಲಿ ಮೀನು ಸಾಕಾಣಿಕೆ ಆರಂಭಿಸಿದ್ದೆವು. ಪಂಜರಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಿದ್ದು, ವಿದೇಶಗಳಿಗೆ ರಫ್ತು ಮಾಡಲಾಗುವ ಮುಡಾವು, ಕ್ಯಾವೇಜ್ ಮೀನುಗಳು ಸಾಕುತಿದ್ದೆವು.  ಈ ಎರಡು ದಿನಗಳ ಹಿಂದೆ ಸುಮಾರು ಒಬಂತ್ತು ಟನ್ ಮೀನುಗಳು ಸತ್ತುಹೋಗಿವೆ. ಅಲ್ಲದೆ ಹೊಳೆಯಲ್ಲಿರುವ ಪಯ್ಯಾ, ಕಾನೆ, ಕ್ಯಾವೇಜ್, ಮಾಲ, ಇರ್ಪೆ, ತೆಬೇರಿ ಮೀನುಗಳು ಸತ್ತು ಹೋಗಿವೆ. 

ಇದರಿಂದ ನಮಗೆ 22ಲಕ್ಷಕ್ಕೂ ಅಧಿಕ ನಷ್ಟ ನಾವು ಹೊಂದಿದ್ದೇವೆ. ಕಂಪೆನಿಗಳಿಂದ ಹೊರ ಬಿಡುವ ಕೆಮಿಕಲ್‍ ಗಳಿಂದ ಮೀನುಗಳ ಮಾರಣ ಹೋಮವಾಗಿದೆ. ಇಲಾಖೆ ಈ ನಿಟ್ಟಿನಲ್ಲಿ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. 

ಜಾರಂದಾಯ ದೈವಸ್ಥಾನದ ಪ್ರಧಾನ ಅರ್ಚಕ ಸುಧಾಕರ ಪೂಜಾರಿ ಮಾತನಾಡಿ, ನಾಲ್ಕು ವರ್ಷಗಳಿಂದ ನದಿಯ ನೀರು ಹಾಳಾಗುತ್ತಿವೆ. ಈ ಪ್ರದೇಶ ಮುಟ್ಟಳಿವೆಯಾಗಿದ್ದು, ಹೊಳೆಯ   ನೀರು ಸಮುದ್ರಕ್ಕೆ ಸೇರುವಂತೆ ಮಾಡಲು ಕಡಿಯಲಾಗುತ್ತದೆ. ಈ ವೇಳೆ ರಾಸಾಯನಿಕ ಮಿಶ್ರಿತ ನೀರುಗಳು ಬೆರೆತುಕೊಳ್ಳುತ್ತವೆ. ಕೃಷಿ ಭೂಮಿಗೂ ನೀರು ಬಂದು ಕೃಷಿಗೂ ಹಾನಿಯಾಗಿವೆ. ಈ ಬಗ್ಗೆ ಗ್ರಾಮ ಪಂಚಾಯತ್ ಗಮನಕ್ಕೆ ತರಲಾಗಿದೆ  ಎನ್ನುತ್ತಾರೆ. 

ಪ್ರತೀ ಮಳೆಗಾಲದಲ್ಲಿ ಈ ಪ್ರಸ್ತುತ ಪರಿಸ್ಥಿತಿ ಎದುರಾಗುತಿದ್ದು, ರಾಸಾಯನಿಕ ರೀತಿಯ ವ್ಯಾಜ್ಯಗಳು ನದಿಗೆ ಬಿಡುವುದರಿಂದ ಇಂತಹ ಘಟನೆಗಳು ನಡೆಯುತ್ತಿದೆ. ಇದರಿಂದಾಗಿ ಮೀನುಗಳು ಮಾರಣಹೋಮವಾಗಿವೆ. ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲಿ ನೈಸರ್ಗಿಕ ಸಂಪತ್ತು ಕಲೆಗುಂದಿ ನಶಸಿಸುವ ಹಂತಕ್ಕೆ ತಲುಪುತ್ತವೆ ಎನ್ನುತ್ತಾರೆ ಮೀನುಗಾರರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X