Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ...

ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ ಉದ್ಯಮಿ ಆನಂದ್ ಮಹೀಂದ್ರಾಗೆ ಪ್ರಶ್ನೆಗಳ ಸುರಿಮಳೆ

ವಾರ್ತಾಭಾರತಿವಾರ್ತಾಭಾರತಿ21 Jun 2022 10:52 PM IST
share
ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ ಉದ್ಯಮಿ ಆನಂದ್ ಮಹೀಂದ್ರಾಗೆ ಪ್ರಶ್ನೆಗಳ ಸುರಿಮಳೆ

ಹೊಸದಿಲ್ಲಿ, ಜೂ.21: ಉದ್ಯಮಿ ಆನಂದ್ ಮಹೀಂದ್ರಾ ‘ಅಗ್ನಿವೀರ’ರಿಗೆ ಉದ್ಯೋಗದ ಭರವಸೆ ನೀಡಿದ ಬೆನ್ನಲ್ಲೇ, ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಪ್ರಶ್ನೆಗಳ ಸುರಿಮಳೆಯಾಗಿದ್ದು, ಈ ಹಿಂದೆ ನಿವೃತ್ತ ಯೋಧರಿಗೆ ನಿಮ್ಮ ಸಂಸ್ಥೆಯಲ್ಲಿ ಉದ್ಯೋಗಾವಕಾಶ ನೀಡಿದ್ದೀರಾ ಎಂದು ಹಲವರು ಪ್ರಶ್ನಿಸಿದ್ದಾರೆ.

‘ಅಗ್ನಿಪಥ’ ವಿರೋಧಿಸಿ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ, ಈ ಅವಕಾಶವನ್ನು ಮಹೀಂದ್ರಾ ಸಮೂಹಸಂಸ್ಥೆ ಸ್ವಾಗತಿಸುತ್ತದೆ ಮತ್ತು ಈ ಯೋಜನೆಯಡಿ ತರಬೇತಿ ಪಡೆದಿರುವ ಜನರನ್ನು ನೇಮಿಸಿಕೊಳ್ಳಲು ಬಳಸುತ್ತದೆ ಎಂದು ಆನಂದ್ ಮಹೀಂದ್ರಾ ಸೋಮವಾರ ಘೋಷಿಸಿದ್ದರು.ಅಗ್ನಿಪಥ ಯೋಜನೆ ವಿರೋಧಿಸಿ ನಡೆದಿರುವ ಹಿಂಸಾಚಾರದಿಂದ ದುಃಖವಾಗಿದೆ. ಅಗ್ನಿವೀರರು ಗಳಿಸುವ ಶಿಸ್ತು ಮತ್ತು ಕೌಶಲ್ಯಗಳು ಅವರನ್ನು ಅತ್ಯುತ್ತಮ ಉದ್ಯೋಗಿಗಳನ್ನಾಗಿ ಮಾಡುತ್ತದೆ ಎಂದು ಈ ಯೋಜನೆಯನ್ನು ಕಳೆದ ವರ್ಷ ಪ್ರಸ್ತಾವಿಸಿದಾಗಲೇ ನಾನು ಹೇಳಿದ್ದೆ. ಅಂತಹ ತರಬೇತಿ ಪಡೆದ ಸಮರ್ಥ ಯುವಕರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಸಂಸ್ಥೆ ಸ್ವಾಗತಿಸುತ್ತದೆ ಎಂದು ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದರು. ‘ಅಗ್ನಿವೀರರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಆರ್ಪಿಜಿ ಸಮೂಹ ಸಂಸ್ಥೆಯೂ ಸ್ವಾಗತಿಸುತ್ತದೆ’ ಎಂದು ಸಂಸ್ಥೆಯ ಅಧ್ಯಕ್ಷ ಹರ್ಷ ಗೊಯೆಂಕಾ ಇದೇ ಸಂದರ್ಭ ಟ್ವೀಟ್ ಮಾಡಿದ್ದರು.

 ಮಹೀಂದ್ರಾ ಅವರ ಹೇಳಿಕೆಯನ್ನು ಹಲವರು ಶ್ಲಾಘಿಸಿದ್ದರೆ, ನಿವೃತ್ತ ಸೇನಾಧಿಕಾರಿಗಳ ಸಹಿತ ಹಲವರು ‘ಇದುವರೆಗೆ ಮಹೀಂದ್ರಾ ಸಮೂಹ ಸಂಸ್ಥೆ ಎಷ್ಟು ನಿವೃತ್ತ ಸೇನಾಧಿಕಾರಿಗಳನ್ನು ನೇಮಿಸಿಕೊಂಡಿದೆ’ ಎಂದು ಪ್ರಶ್ನಿಸಿದ್ದಾರೆ.ಈ ಹೊಸ ಯೋಜನೆಯವರೆಗೆ ಯಾಕೆ ಕಾಯಬೇಕಿತ್ತು? ಇದುವರೆಗೆ ಮಹೀಂದ್ರಾ ಸಂಸ್ಥೆ ಪ್ರತೀ ವರ್ಷ ನಿವೃತ್ತಿಗೊಳ್ಳುತ್ತಿರುವ ಮತ್ತು 2ನೇ ವೃತ್ತಿಜೀವನ ಆರಂಭಿಸಲು ಹತಾಶ ಪ್ರಯತ್ನ ನಡೆಸುತ್ತಿರುವ ಸಾವಿರಾರು ಅತ್ಯುತ್ತಮ ನುರಿತ ಮತ್ತು ಶಿಸ್ತಿನ ಮಾಜಿ ಸೈನಿಕರ ಬಗ್ಗೆ ಗಮನ ನೀಡಿದೆಯೇ? ಈ ಬಗ್ಗೆ ನಿಮ್ಮ ಸಮೂಹ ಸಂಸ್ಥೆಯಿಂದ ಅಂಕಿಅಂಶ ಪಡೆಯುವುದು ಒಳಿತು’ ಎಂದು ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅರುಣ್ ಪ್ರಕಾಶ್ ಪ್ರತಿಕ್ರಿಯಿಸಿದ್ದಾರೆ.

ನೌಕಾಪಡೆಯ ನಿವೃತ್ತ ಮುಖ್ಯಸ್ಥರು ಕೇಳಿದ ಅಂಕಿಅಂಶ ದೊರಕಬಹುದೇ ಆನಂದ್ ಸರ್, ಈ ರೀತಿಯ ಭರವಸೆಯನ್ನು ಕೇಳುತ್ತಾ 40 ವರ್ಷ ಸೇವೆ ಸಲ್ಲಿಸಿ ನಿವೃತ್ತನಾಗಿದ್ದೇನೆ ’ ಎಂದು ಭಾರತೀಯ ವಾಯುಪಡೆಯ ನಿವೃತ್ತ ಏರ್ವೈಸ್ ಮಾರ್ಷಲ್ ಮನ್ಮೋಹನ್ ಬಹಾದುರ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X