Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಸಮೀಪದ ಸಮುದ್ರದಲ್ಲಿ ಸಿಲುಕಿದ್ದ...

ಉಳ್ಳಾಲ ಸಮೀಪದ ಸಮುದ್ರದಲ್ಲಿ ಸಿಲುಕಿದ್ದ ಹಡಗು; ಸಿರಿಯಾದ 15 ಪ್ರಜೆಗಳು ಪಣಂಬೂರು ಠಾಣೆಗೆ ಹಾಜರು

ವಾರ್ತಾಭಾರತಿವಾರ್ತಾಭಾರತಿ22 Jun 2022 7:46 PM IST
share
ಉಳ್ಳಾಲ ಸಮೀಪದ ಸಮುದ್ರದಲ್ಲಿ ಸಿಲುಕಿದ್ದ ಹಡಗು; ಸಿರಿಯಾದ 15 ಪ್ರಜೆಗಳು ಪಣಂಬೂರು ಠಾಣೆಗೆ ಹಾಜರು

ಮಂಗಳೂರು: ಉಳ್ಳಾಲ ಸಮುದ್ರ ತೀರದಿಂದ 5.2 ನಾಟಿಕಲ್ ಮೈಲ್ ದೂರದಲ್ಲಿ ಮಂಗಳವಾರ ಅಪಾಯಕ್ಕೆ ಸಿಲುಕಿದ್ದ ಪ್ರಿನ್ಸಸ್ ಮಿರಾಲ್ ಕಾರ್ಗೋ ಹಡಗಿನಲ್ಲಿದ್ದ ಸಿರಿಯಾ ದೇಶದ 15 ಮಂದಿ ಪ್ರಜೆಗಳನ್ನು ವಲಸೆ ವಿಭಾಗದ ಅಧಿಕಾರಿಗಳು ಪಣಂಬೂರು ಠಾಣೆಗೆ ಹಾಜರುಪಡಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಸುಮಾರು 8 ಸಾವಿರ ಟನ್ ಸ್ಟೀಲ್ ಕಾಯಿಲ್‌ಗಳನ್ನು ಮಲೇಷ್ಯಾದಿಂದ ಲೆಬನಾನ್‌ಗೆ ಸಾಗಿಸುತ್ತಿದ್ದ ಈ ಹಡಗು ಮಂಗಳವಾರ ಅರಬ್ಬೀ ಸಮುದ್ರದ ಮಧ್ಯೆ ಅಪಾಯಕ್ಕೆ ಸಿಲುಕಿತ್ತು. ಅಂದರೆ ಹಡಗಿನ ತಳಭಾಗದಲ್ಲಿ ರಂಧ್ರ ಉಂಟಾಗಿ ನೀರು ಒಳಪ್ರವೇಶಿಸುತ್ತಿತ್ತು. ಇದರಿಂದ ಹಡಗು ಮುಳುಗಡೆ ಭೀತಿ ಎದುರಿಸುತ್ತಿತ್ತು. ಅಪಾಯದ ಮುನ್ಸೂಚನೆ ಅರಿತ ಹಡಗಿನ ಕ್ಯಾಪ್ಟನ್ ಕೋಸ್ಟ್ ಗಾರ್ಡ್‌ಗೆ ಸಂದೇಶ ರವಾನಿಸಿ ನೆರವು ಕೋರಿದ್ದರು.

ಈ ಹಡಗು ತುಂಬಾ ಹಳೆಯದಾದ ಕಾರಣ ನವ ಮಂಗಳೂರು ಬಂದರು ಪ್ರವೇಶಕ್ಕೆ ಅನುಮತಿ ಸಿಕ್ಕಿರಲಿಲ್ಲ. ಹಾಗಾಗಿ ಸಮುದ್ರಕ್ಕೆ ತೆರಳಿ ಕೋಸ್ಟ್‌ಗಾರ್ಡ್ ಸಿಬ್ಬಂದಿ ಅಪಾಯದಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಿಸಿದ್ದರು.

ಹಡಗು ದುರಸ್ತಿಗೆ ಪ್ರಯತ್ನ: ಸಮುದ್ರದಲ್ಲಿ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರಿನ್ಸಸ್ ಮಿರಾಲ್ ಕಾರ್ಗೋ ಹಡಗಿನ ತಳಭಾಗದ ರಂಧ್ರವನ್ನು ಮುಚ್ಚುವ ಬಗ್ಗೆ ಹಡಗಿನ ಏಜೆನ್ಸಿ ಚಿಂತನೆ ನಡೆಸುತ್ತಿದೆ. ಈ ಹಡಗಿನ ಮಾಲಕ ಟರ್ಕಿ ಮೂಲದವರಾಗಿದ್ದು, ಇದರ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಮಾರ್ಕಾನ್ ಶಿಪ್ಪಿಂಗ್ ಏಜೆನ್ಸಿಯಾಗಿದೆ. ಈ ಏಜೆನ್ಸಿಯ ಪ್ರತಿನಿಧಿ ಮಂಗಳೂರಿನಲ್ಲಿದ್ದು, ಬಂದರು ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮುಂಬೈನ ಸ್ಮಿತ್ ಸಾವ್ಲೇಜ್ ಕಂಪನಿಯ ತಜ್ಞರು ಮಂಗಳೂರಿಗೆ ಆಗಮಿಸಿ ಸಮುದ್ರದಲ್ಲಿ ಸಿಲುಕಿರುವ ಹಡಗಿನ ಬಳಿ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಈ ಮಧ್ಯೆ ಸಮುದ್ರ ವಿಕೋಪಕ್ಕೆ ತಿರುಗಿದರೆ ನೌಕೆ ಮುಳುಗಡೆಯಾಗುವುದನ್ನೂ ತಳ್ಳಿ ಹಾಕುವಂತಿಲ್ಲ ಎಂದು ಬಂದರು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸ್ ಠಾಣೆಗೆ ಹಾಜರು: ಕೋಸ್ಟ್‌ಗಾರ್ಡ್‌ನಿಂದ ರಕ್ಷಿಸಲ್ಪಟ್ಟ 15 ಮಂದಿ ಸಿರಿಯಾ ಪ್ರಜೆಗಳನ್ನು ಬುಧವಾರ ಇಮಿಗ್ರೆಷನ್ ವಿಭಾಗದ ಅಧಿಕಾರಿಗಳು ಪಣಂಬೂರು ಪೊಲೀಸ್ ಠಾಣೆಗೆ ಹಾಜರುಪಡಿಸಿದರು.

ಜಿಲ್ಲಾಡಳಿತವು ಸಿರಿಯಾ ಪ್ರಜೆಗಳಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಿದೆ. ಅವರನ್ನು ಮರಳಿ ಸಿರಿಯಾಕ್ಕೆ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಿಲಿದೆ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಬಂದರು ಅಧಿಕಾರಿಗಳು, ಕೋಸ್ಟ್‌ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸರು ಉಳ್ಳಾಲ ಕಡಲ ತೀರದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲಿಂದಲೇ ಮುಳುಗಡೆ ಭೀತಿಯಲ್ಲಿರುವ ಹಡಗಿನತ್ತ ಕಣ್ಗಾವಲು ಇರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X