Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕೃತ ನಿವಾಸದಿಂದ ಕುಟುಂಬದ ಮನೆಗೆ...

ಅಧಿಕೃತ ನಿವಾಸದಿಂದ ಕುಟುಂಬದ ಮನೆಗೆ ಸ್ಥಳಾಂತರಗೊಂಡ ಉದ್ಧವ್ ಠಾಕ್ರೆ: ಗರಿಗೆದರಿದ ಊಹಾಪೋಹಗಳು

ವಾರ್ತಾಭಾರತಿವಾರ್ತಾಭಾರತಿ22 Jun 2022 11:26 PM IST
share
ಅಧಿಕೃತ ನಿವಾಸದಿಂದ ಕುಟುಂಬದ ಮನೆಗೆ ಸ್ಥಳಾಂತರಗೊಂಡ ಉದ್ಧವ್ ಠಾಕ್ರೆ: ಗರಿಗೆದರಿದ ಊಹಾಪೋಹಗಳು

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು ತಮ್ಮ ಅಧಿಕೃತ ನಿವಾಸವನ್ನು ತೊರೆದಿದ್ದಾರೆ. ಹಿರಿಯ ಸಂಪುಟ ಸದಸ್ಯ ಏಕನಾಥ್ ಶಿಂಧೆ ಅವರ ಬಂಡಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತಮಗೆ ಕೋವಿಡ್‌ ಪಾಸಿಟಿವ್‌ ಕಂಡು ಬಂದಿದ್ದರೂ, ರಾಜಕೀಯದ ಬಿಕ್ಕಟ್ಟಿನ ನಡುವೆ ತಮ್ಮ ಕುಟುಂಬದ ಮನೆಗೆ ಸ್ಥಳಾಂತರವಾದ ಉದ್ಧವ್‌ ಠಾಕ್ರೆ ಅವರ ನಡೆಯಲ್ಲಿ ಪರೋಕ್ಷ ಸಂದೇಶವಿದೆಯೆಂದು ವಿಶ್ಲೇಷಿಸಲಾಗಿದೆ. ಉದ್ಧವ್‌ ಠಾಕ್ರೆ ತಂದೆ ಬಾಳಾ ಸಾಹೇಬ್‌ ಠಾಕ್ರೆ ವಾಸಿಸಿದ್ದ ಅವರ ಕುಟುಂಬದ ಮನೆಗೂ ಶಿವಸೇನೆ ಪಕ್ಷಕ್ಕೂ ಇರುವ ಅವಿನಾಭಾವ ಸಂಬಂಧದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಲ್ಲಿಗೆ ಸ್ಥಳಾಂತರಗೊಂಡಿದ್ದಾರೆಂಬ ಚರ್ಚೆ ಮಹರಾಷ್ಟ್ರ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಇಂದು ಮುಂಜಾನೆ, ತಮ್ಮ ಸರ್ಕಾರಕ್ಕೆ ಎದುರಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಫೇಸ್‌ಬುಕ್ ಲೈವ್ ಮುಖಾಂತರ ಮೊದಲ ಸಾರ್ವಜನಿಕ ಪ್ರತಿಕ್ರಿಯೆ ನೀಡಿದ ಠಾಕ್ರೆ, “ನನ್ನ ಸ್ವಂತ ಜನರಿಗೆ ನಾನು ಮುಖ್ಯಮಂತ್ರಿಯಾಗಲು ಇಷ್ಟವಿಲ್ಲದಿದ್ದರೆ, ಅವರು ನನ್ನ ಬಳಿಗೆ ಬಂದು ನೇರವಾಗಿ ಹೇಳಬೇಕು., ನಾನು ರಾಜಿನಾಮೆ ನೀಡಲು ಸಿದ್ಧ... ನಾನು ಬಾಳಾಸಾಹೇಬರ ಮಗ, ನಾನು ಹುದ್ದೆಯ ಹಿಂದೆ ಬಿದ್ದಿಲ್ಲ.. ನಾನು ರಾಜೀನಾಮೆ ನೀಡಬೇಕೆಂದು ಬಯಸಿದರೆ, ರಾಜಿನಾಮೆ ನೀಡಲು ಬಿಡಿ.. ನನ್ನೆಲ್ಲಾ ಆಸ್ತಿಯನ್ನು ಮಾತೋಶ್ರೀಗೆ ತೆಗೆದುಕೊಳ್ಳಲಿ" ಎಂದ ಹೇಳಿದ್ದರು.

“ನಾನು ಹುದ್ದೆಯಿಂದ ಕೆಳಗಿಳಿಯಲು ಸಿದ್ಧನಿದ್ದೇನೆ, ಆದರೆ, ಮುಂದಿನ ಮುಖ್ಯಮಂತ್ರಿ ಶಿವಸೇನೆಯವರೇ ಆಗಿರುತ್ತಾರೆ ಎಂದು ನನಗೆ ಭರವಸೆ ಕೊಡುತ್ತೀರ?" ಎಂದು ಅವರು ಪ್ರಶ್ನಿದ್ದಾರೆ.

ಉದ್ಧವ್‌ ಠಾಕ್ರೆ ಅವರು ಮೃದು ಆಗಿದ್ದಾರೆ ಮತ್ತು, ತನ್ನ ಬಣವನ್ನು ನಿಜವಾದ ಶಿವಸೇನೆ ಎಂದು ಬಿಂಬಿಸುತ್ತಿರುವ ಹಾಗೂ ಬಾಳಾಸಾಹೇಬ್ ಠಾಕ್ರೆಯವರ ಹಿಂದುತ್ವ ಸಿದ್ಧಾಂತವನ್ನು ಉಲ್ಲೇಖಿಸುತ್ತಿರುವ ಏಕನಾಥ್ ಶಿಂಧೆ ಅವರಿಗೆ ಇದು ನೇರ ಸವಾಲಾಗಿದೆ. ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಲು ಪ್ರಯತ್ನ ಪಡುತ್ತಿರುವ ʼಬಂಡಾಯʼ ಶಿವಸೇನೆ ಶಾಸಕರಿಗೆ ಮುಖ್ಯಮಂತ್ರಿಯವರ ಈ ಸವಾಲು ಎದುರಿಸುವುದು ಅಸಾಧ್ಯವಾದ ವಾತಾವರಣವಿದೆ. ಯಾಕೆಂದರೆ, ಉದ್ಧವ್‌ ಠಾಕ್ರೆ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲು ಬಿಜೆಪಿಯ ನಿರಾಕರಿಸಿದ್ದೇ ದೀರ್ಘಕಾಲದ ಮೈತ್ರಿಯ ಅಂತ್ಯಕ್ಕೆ ಕಾರಣವಾದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

ಈ ನಡುವೆ, ಎದುರಾಗಿರುವ ಬಿಕ್ಕಟ್ಟನ್ನು ಕೊನೆಗೊಳಿಸುವ ಮಾರ್ಗವಾಗಿ ಶಿಂಧೆಗೆ ಉನ್ನತ ಹುದ್ದೆಯನ್ನು ನೀಡುವ ಆಲೋಚನೆಯನ್ನು ಶರದ್‌ ಪವಾರ್‌ ಹೊಂದಿದ್ದಾರೆ ಎಂದು ಮೈತ್ರಿಕೂಟದ ಇನ್ನೊಂದು ಪಕ್ಷವಾದ ಕಾಂಗ್ರೆಸ್ ಮೂಲಗಳು ಹೇಳಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X