Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ ಫೈನಲ್: ಶತಕ ಸಿಡಿಸಿ...

ರಣಜಿ ಟ್ರೋಫಿ ಫೈನಲ್: ಶತಕ ಸಿಡಿಸಿ ಭಾವೋದ್ವೇಗಕ್ಕೆ ಒಳಗಾದ ಮುಂಬೈ ಬ್ಯಾಟರ್ ಸರ್ಫರಾಝ್ ಖಾನ್

ವಾರ್ತಾಭಾರತಿವಾರ್ತಾಭಾರತಿ23 Jun 2022 1:25 PM IST
share
ರಣಜಿ ಟ್ರೋಫಿ ಫೈನಲ್: ಶತಕ ಸಿಡಿಸಿ ಭಾವೋದ್ವೇಗಕ್ಕೆ ಒಳಗಾದ ಮುಂಬೈ ಬ್ಯಾಟರ್ ಸರ್ಫರಾಝ್ ಖಾನ್

ಬೆಂಗಳೂರು: ಮಧ್ಯಪ್ರದೇಶ ವಿರುದ್ಧದ ರಣಜಿ ಟ್ರೋಫಿ ಫೈನಲ್‌ನ 2 ನೇ ದಿನವಾದ ಬುಧವಾರ  ಮುಂಬೈ ಬ್ಯಾಟರ್ ಸರ್ಫರಾಝ್  ಖಾನ್ ಅವರು ಶತಕವನ್ನು ತಲುಪಿದಾಗ ಭಾವೋದ್ವೇಗಕ್ಕೆ ಒಳಗಾದರು.

24ರ ಹರೆಯದ ಖಾನ್ ಅವರು ಶತಕದ ಸಂಭ್ರಮ ಆಚರಿಸುತ್ತಿರುವಾಗ  ಭಾವೋದ್ವೇಗಕ್ಕೆ ಒಳಗಾದರು. ಅವರು ಹೆಲ್ಮೆಟ್ ತೆಗೆದಾಗ ಕಣ್ಣೀರಿಟ್ಟರು.  ಶಿಖರ್ ಧವನ್ ಶೈಲಿಯಲ್ಲಿ ತೊಡೆ ತಟ್ಟಿ ಸಂಭ್ರಮಿಸಿದರು.

ಸರ್ಫರಾಝ್ ಈ  ಋತುವಿನಲ್ಲಿ ಸಿಡಿಸಿದ  ನಾಲ್ಕನೇ ಶತಕ ಹಾಗೂ  ಒಟ್ಟಾರೆಯಾಗಿ ಅವರ ಎಂಟನೇ ಪ್ರಥಮ ದರ್ಜೆ ಶತಕ ಇದಾಗಿದೆ. ಸರ್ಫರಾಝ್  ಶತಕವನ್ನು ತಲುಪಿದ ಕ್ಷಣದ ವೀಡಿಯೊವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

"ಇದು  ಅತ್ಯಂತ  ಪ್ರಮುಖ  ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ದಾಖಲಾದ  ಅದ್ಭುತವಾದ ಇನಿಂಗ್ಸ್  ಆಗಿದೆ" ಎಂದು ಬಿಸಿಸಿಐ ವೀಡಿಯೊದಲ್ಲಿ ತಿಳಿಸಿದೆ.

ಸರ್ಫರಾಝ್  ಖಾನ್  ಪ್ರತಿನಿಧಿಸುವ ಐಪಿಎಲ್ ತಂಡ  ಡೆಲ್ಲಿ ಕ್ಯಾಪಿಟಲ್ಸ್ ಕೂಡ ವೀಡಿಯೊವನ್ನು ಹಂಚಿಕೊಂಡಿದೆ ಮತ್ತು "100 ಶೇ. ಶುದ್ಧ ಭಾವನೆಗಳು" ಎಂದು ಬರೆದಿದೆ.

ಸರ್ಫರಾಝ್  ಇಂದು  40 ರನ್ ನಿಂದ  ದಿನದಾಟ ಆರಂಭಿಸಿದರು. 152 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮುಂಬೈ ಇನ್ನೊಂದು ತುದಿಯಲ್ಲಿ ವಿಕೆಟ್‌ಗಳನ್ನು ಕಳೆದುಕೊಳ್ಳಲಾರಂಭಿಸಿತು. ಸರ್ಫರಾಝ್ ಅವರು 50 ರನ್  ತಲುಪಿದ ನಂತರ ವೇಗವಾಗಿ ಆಡಲು ಆರಂಭಿಸಿದರು.

ಅರ್ಧಶತಕವನ್ನು ತಲುಪಿದ ನಂತರ  ಮುಂದಿನ ಐವತ್ತು ರನ್‌ಗಳನ್ನು ಕೇವಲ 38 ಎಸೆತಗಳಲ್ಲಿ ಗಳಿಸಿ ಮುಂಬೈ 300 ರನ್‌ಗಳ ಗಡಿ ದಾಟಲು ಸಹಾಯ ಮಾಡಿದರು.

2 ನೇ ದಿನದ ಭೋಜನ ವಿರಾಮದ  ವೇಳೆಗೆ ಮುಂಬೈ 8 ವಿಕೆಟ್ ನಷ್ಟಕ್ಕೆ 351 ರನ್ ತಲುಪಿತು, ಸರ್ಫರಾಝ್  119 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದರು.

ಮುಂಬೈ ನಾಯಕ ಪೃಥ್ವಿ ಶಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಯಶಸ್ವಿ ಜೈಸ್ವಾಲ್ ಹಾಗೂ  ಶಾ 87 ರನ್‌ಗಳ ಆರಂಭಿಕ ಜೊತೆಯಾಟವನ್ನು ನಡೆಸಿದ್ದರು, ನಾಯಕ ಶಾ  47 ರನ್‌ಗಳಿಗೆ ಔಟಾದರು.

ಇನ್ನೊಂದು ತುದಿಯಲ್ಲಿ ವಿಕೆಟ್‌ಗಳು ಬಿದ್ದಾಗಲೂ ಜೈಸ್ವಾಲ್ 78 ರನ್ ಗಳಿಸಿದರು. ಮುಂಬೈ ಬುಧವಾರ ಮೊದಲ ದಿನದಾಟದಲ್ಲಿ  5 ವಿಕೆಟ್ ಗೆ 248 ರನ್ ಗಳಿಸಿತ್ತು.

for Sarfaraz Khan!

His 4⃣th in the @Paytm #RanjiTrophy 2021-22 season.

This has been a superb knock in the all-important summit clash. #Final | #MPvMUM | @MumbaiCricAssoc

Follow the match https://t.co/xwAZ13U3pP pic.twitter.com/gv7mxRRdkV

— BCCI Domestic (@BCCIdomestic) June 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X