Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಕೆ.ಪಳನಿಸ್ವಾಮಿ ತಮ್ಮ ಏಕೈಕ ನಾಯಕ' ಎಂದ...

'ಕೆ.ಪಳನಿಸ್ವಾಮಿ ತಮ್ಮ ಏಕೈಕ ನಾಯಕ' ಎಂದ ಸದಸ್ಯರು: ಸಭೆಯಿಂದ ಹೊರನಡೆದ ಒ.ಪನ್ನೀರ್‌ಸೆಲ್ವಂ

ಎಐಎಡಿಎಂಕೆ ಸಾಮಾನ್ಯ ಮಂಡಳಿ ಸಭೆ

ವಾರ್ತಾಭಾರತಿವಾರ್ತಾಭಾರತಿ23 Jun 2022 7:53 PM IST
share
ಕೆ.ಪಳನಿಸ್ವಾಮಿ ತಮ್ಮ ಏಕೈಕ ನಾಯಕ ಎಂದ ಸದಸ್ಯರು: ಸಭೆಯಿಂದ ಹೊರನಡೆದ ಒ.ಪನ್ನೀರ್‌ಸೆಲ್ವಂ

ಚೆನ್ನೈ,ಜೂ.23: ಎಐಎಡಿಎಂಕೆ ಗುರುವಾರ ಇಲ್ಲಿ ನಡೆದ ತನ್ನ ಸಾಮಾನ್ಯ ಮಂಡಳಿ ಸಭೆಯಲ್ಲಿ 23 ಅನುಮೋದಿತ ನಿರ್ಣಯಗಳನ್ನು ತಿರಸ್ಕರಿಸಿತು. ಮಾಜಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಡಿ ಪಕ್ಷದೊಳಗೆ ಏಕೈಕ ನಾಯಕತ್ವಕ್ಕೆ ಆಗ್ರಹಿಸಿ ಸದಸ್ಯರು ಘೋಷಣೆಗಳನ್ನು ಕೂಗಿದರು. ಘೋಷಣೆಗಳ ನಡುವೆಯೇ ಬೆಂಬಲಿಗರು ಅಲಂಕೃತ ಕಿರೀಟ, ಖಡ್ಗ ಮತ್ತು ರಾಜದಂಡವನ್ನು ನೀಡಿ ಪಳನಿಸ್ವಾಮಿಯವರನ್ನು ಗೌರವಿಸಿದರು.

ಪಕ್ಷದೊಳಗೆ ಪಳನಿಸ್ವಾಮಿಯವರ ಪ್ರತಿಸ್ಪರ್ಧಿಯಾಗಿರುವ ಒ.ಪನ್ನೀರ್‌ಸೆಲ್ವಂ ಅವರು ಸಭೆಯಿಂದ ಹೊರನಡೆದಿದ್ದು, ಈ ವೇಳೆ ಬಾಟಲ್ಗಳನ್ನು ಅವರೆಡೆಗೆ ಎಸೆಯಲಾಗಿತ್ತು ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ಎಐಎಡಿಎಂಕೆ ಪಕ್ಷದಲ್ಲಿ ಪನ್ನೀರ್‌ ಸೆಲ್ವಂ ಮತ್ತು ಪಳನಿಸ್ವಾಮಿ ಅವರ ನಡುವೆ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಪ್ರಸ್ತುತ ಅವರಿಬ್ಬರೂ ಪಕ್ಷದ ನಾಯಕರಾಗಿದ್ದು, ಅನುಕ್ರಮವಾಗಿ ಸಮನ್ವಯಕ ಮತ್ತು ಜಂಟಿ ಸಮನ್ವಯಕ ಹುದ್ದೆಗಳಲ್ಲಿದ್ದಾರೆ.
2017,ಸೆ.12ರಂದು ನಡೆದಿದ್ದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪಕ್ಷವು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ‘ಶಾಶ್ವತ ಪ್ರಧಾನ ಕಾರ್ಯದರ್ಶಿ’ ಗೌರವ ಬಿರುದನ್ನು ನೀಡಿದ ಬಳಿಕ ಈ ಎರಡು ಹುದ್ದೆಗಳನ್ನು ಸೃಷ್ಟಿಸಲಾಗಿತ್ತು.

ಪಳನಿಸ್ವಾಮಿ ನೇತೃತ್ವದ ಬಣವೀಗ ಪಕ್ಷವನ್ನು ದ್ವಂದ್ವ ನಾಯಕತ್ವದಿಂದ ಮುಕ್ತಗೊಳಿಸಲು ಬಯಸಿದೆ. ಕಳೆದ ವಾರ ನಡೆದಿದ್ದ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿಯೂ ಪಳನಿಸ್ವಾಮಿ ಬೆಂಬಲಿಗರು ಈ ವಿಚಾರವನ್ನು ಪ್ರಸ್ತಾವಿಸಿದ್ದರು. ಇದನ್ನು ವಿರೋಧಿಸಿರುವ ಪನ್ನೀರಸೆಲ್ವಂ ನೇತೃತ್ವದ ಬಳಗವು, ಹಾಗೆ ಮಾಡುವುದರಿಂದ ಜಯಲಲಿತಾರಿಗೆ ದ್ರೋಹ ಬಗೆದಂತಾಗುತ್ತದೆ ಎಂದು ಪ್ರತಿಪಾದಿಸುತ್ತಿದೆ.

ಸದ್ಯಕ್ಕೆ ದ್ವಂದ್ವ ನಾಯಕತ್ವವು ಸುಗಮವಾಗಿ ಸಾಗುತ್ತಿದೆ. ಪ್ರಧಾನ ಕಾರ್ಯದರ್ಶಿಯ ಹುದ್ದೆಯನ್ನು ಅಮ್ಮಾ (ಜಯಲಲಿತಾ) ಅವರಿಗಾಗಿ ಮೀಸಲಿಡಲಾಗಿದೆ. ಆ ಸ್ಥಾನಕ್ಕೆ ಯಾರೂ ಬರುವಂತಿಲ್ಲ ಎಂದು ಸಾಮಾನ್ಯ ಮಂಡಳಿಯು ಸ್ವತಃ ನಿರ್ಣಯವನ್ನು ಅಂಗೀಕರಿಸಿದೆ ಎಂದು ಪಳನಿಸ್ವಾಮಿ ಜೂ.6ರಂದು ಸುದ್ದಿಗಾರರಿಗೆ ತಿಳಿಸಿದ್ದರು. ಜು.11ರಂದು ನಡೆಯಲಿರುವ ಸಾಮಾನ್ಯ ಮಂಡಳಿಯ ಮುಂದಿನ ಸಭೆಯಲ್ಲಿ ಏಕ ನಾಯಕತ್ವ ನಿರ್ಣಯದ ಜೊತೆಗೆ ಈಗಾಗಲೇ ಚರ್ಚಿಸಿ ಅನುಮೋದಿಸಲ್ಪಟ್ಟಿರುವ 23 ನಿರ್ಣಯಗಳನ್ನು ಅಂಗೀಕರಿಸಲಾಗುವುದು ಎಂದು ಪಕ್ಷದ ಹಿರಿಯ ನಾಯಕ ಕೆ.ಪಿ.ಮುನುಸಾಮಿ ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಜೂ.23ರಂದು ನಡೆಯಲಿರುವ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪಕ್ಷದ ಉನ್ನತ ನಾಯಕತ್ವದಲ್ಲಿ ಬದಲಾವಣೆ ಕುರಿತು ಹೊಸ ನಿರ್ಣಯವನ್ನು ಕೈಗೆತ್ತಿಕೊಳ್ಳುವಂತಿಲ್ಲ ’ಎಂದು ಮದ್ರಾಸ ಉಚ್ಚ ನ್ಯಾಯಾಲಯವು ಬುಧವಾರ ತಡರಾತ್ರಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಗುರುವಾರದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ನಿಗದಿಯಂತೆ ಸಭೆಯನ್ನು ನಡೆಸಬಹುದು,ಆದರೆ ಈಗಾಗಲೇ ಅನುಮೋದಿಸಲ್ಪಟ್ಟಿರುವ 23 ನಿರ್ಣಯಗಳನ್ನು ಮಾತ್ರ ಚರ್ಚಿಸಿ ಅಂಗೀಕರಿಸಬಹುದು ಎಂದು ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿತ್ತು.

ಬುಧವಾರ ಏಕ ನ್ಯಾಯಾಧೀಶ ಪೀಠವು ಸಾಮಾನ್ಯಸಭೆಯಲ್ಲಿ ಪಳನಿಸ್ವಾಮಿ ಬಣವು ಯಾವುದೇ ಹೊಸ ನಿರ್ಣಯವನ್ನು ಕೈಗೆತ್ತಿಕೊಳ್ಳುವುದನ್ನು ನಿರ್ಬಂಧಿಸಲು ನಿರಾಕರಿಸಿತ್ತು. ಪನ್ನೀರಸೆಲ್ವಂ ಅವರು ಮುಖ್ಯ ನ್ಯಾಯಾಧೀಶ ಎಂ.ಎನ್.ಭಂಡಾರಿ ಅವರ ಅನುಮತಿಯೊಂದಿಗೆ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.

#WATCH | Tamil Nadu: Bottles hurled at AIADMK coordinator and former Deputy CM O Panneerselvam at the party's General Council Meeting today. The meeting took place at Shrivaaru Venkatachalapathy Palace, Vanagaram in Chennai.

He walked out halfway through the meeting. pic.twitter.com/lVb1AdvAGt

— ANI (@ANI) June 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X